Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ

Cinema

ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ

Public TV
Last updated: November 24, 2025 2:38 pm
Public TV
Share
3 Min Read
Dharmendra
SHARE

ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ (Actor Dharmendra) ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್‌ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು.

ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರು ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಬಾಲಿವುಡ್‌ ಆಳಿದ ದಿಗ್ಗಜ
ಹಲವು ವರ್ಷಗಳ ಕಾಲ ಬಾಲಿವುಡ್‌ ಚಿತ್ರರಂಗವನ್ನ ಆಳಿದ ಧರ್ಮೇಂದ್ರ 1935ರ ಡಿಸೆಂಬರ್‌ 8ರಂದು ಪಂಜಾಬ್‌ನ ಲುಧಿಯಾನದ ಸಣ್ಣ ಹಳ್ಳಿಯಲ್ಲಿ ಜನಿಸಿದ್ರು. ಕಿರಿಯ ವಯಸ್ಸಿನಲ್ಲೇ ಪ್ರಕಾಶ್ ಕೌರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಿಕ್ಕ ವಯಸ್ಸಿನಿಂದಲೇ ಸಿನಿಮಾ ರಂಗದಲ್ಲಿ ಮಿಂಚಬೇಕು, ನಟನಾಗಬೇಕು ಎಂಬ ಹಂಬಲ ಹೊಂದಿದ್ದ ಧರ್ಮೇಂದ್ರ ನಟಿಸುವುದಕ್ಕಾಗಿಯೇ ಮನೆ ಬಿಟ್ಟು ಬಂದರು. 1960ರಲ್ಲಿ ʻದಿಲ್ ಬಿ ತೇರಾ ಹಮ್ ಬಿ ತೇರೆʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರಲ್ಲದೇ ʻಶೋಲೆʼ ಸಿನಿಮಾ ಮೂಲಕ ಕರ್ನಾಟಕದೊಂದಿಗೆ ನಂಟು ಹೊಂದಿದ್ದರು. ಇವರ ಕಲಾ ಸೇವೆಗೆ 2012ರಲ್ಲಿ ಪದ್ಮ ಭೂಷಣ ಪ್ರಶಸ್ತಿಯೂ ಒಲಿದುಬಂದಿತು.

dharmendra

ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅನೇಕ ಬಾಲಿವುಡ್‌ ತಾರೆಯರು ಅವರನ್ನ ಭೇಟಿ ಮಾಡಲು ಆಸ್ಪತ್ರೆಗೆ ಧಾವಿಸಿದ್ದರು.

ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಗೋವಿಂದ, ರಿತೇಶ್‌ ದೇಶ್‌ಮುಖ್‌, ಜೆನಿಲಿಯಾ ದೇಶ್‌ಮುಖ್‌, ಅಮೀಷಾ ಪಟೇಲ್‌ ಸೇರಿದಂತೆ ಮುಂತಾದ ಸ್ಟಾರ್‌ ನಟ-ನಟಿಯರು ಮುಂಬೈನ್‌ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಧರ್ಮೇಂದ್ರ ಅವರ ಆರೋಗ್ಯವನ್ನ ವಿಚಾರಿಸಿದ್ದರು. ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲು ಕುಟುಂಬ ನಿರ್ಧರಿಸಿತ್ತು.

ಹಿರಿಯ ಪತ್ನಿ ಜೊತೆಗಿದ್ದ ಧರ್ಮೇಂದ್ರ
ಧರ್ಮೇಂದ್ರ ಅವರ ಕಿರಿಯ ಮಗ, ನಟ ಬಾಬಿ ಡಿಯೋಲ್, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ʻಮುಂಬೈ ಸಮೀಪದ ಖಂಡಾಲಾದಲ್ಲಿರುವ ಫಾರ್ಮ್‌ ಹೌಸ್‌ನಲ್ಲಿ ತಮ್ಮ ಮೊದಲ ಪತ್ನಿ ಪ್ರಕಾಶ್ ಕೌರ್ ಅವರೊಂದಿಗೆ ತಂದೆ ಧರ್ಮೇಂದ್ರ ಅವರು ವಾಸಿಸುತ್ತಿದ್ದಾರೆʼ ಎಂದು ಬಹಿರಂಗಪಡಿಸಿದ್ದರು.

Dharmendra 1

ಸೂಪರ್ ಹಿಟ್ ಸಿನಿಮಾ ನೀಡಿದ್ದ ಧರ್ಮೇಂದ್ರ
ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್ ಹಾಗೂ ಸೂಪರ್ ಹಿಟ್ ಸಿನಿಮಾಗಳನ್ನ ನೀಡಿ ಮರೆದಿದ್ದ ಧರ್ಮೇಂದ್ರ ಅವರು ದಶಕಗಳ ಕಾಲ ಸಿನಿಮಾ ರಂಗವನ್ನ ಆಳಿದ್ದರು ಅಂದ್ರೂ ತಪ್ಪಾಗಲಾರದು. ಸಿನಿಮಾ ರಂಗಕ್ಕೆ ಇವರು ನೀಡಿರುವ ಕೊಡುಗೆ ಅಪಾರ, ಇದಕ್ಕೆ ಸಾಕ್ಷಿ ಎನ್ನುವಂತೆ ತನ್ನ ಸಿನಿರಂಗದ ಪ್ರಯಾಣದಲ್ಲಿ ಏನೆಲ್ಲಾ ಅಂದರೂ ಕೂಡ 300ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ʻಶೋಲೆʼ, ʻಚುಪ್ಕೆ ಚುಪ್ಕೆʼ, ʻಸೀತಾ ಔರ್ ಗೀತಾʼ ದಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಗೆ ಇವರದ್ದಾಗಿತ್ತು.

ಸಿನಿಮಾಗಳಲ್ಲಿ ಮುಂದುವರಿದ ನಟನೆ
ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’ ಚಿತ್ರದಲ್ಲಿ ಧರ್ಮೇಂದ್ರ ಅವರು ಕೊನೆಯದಾಗಿ ನಟಿಸಿದ್ದರು. ಇದು ಡಿಸೆಂಬರ್‌ 25ರಂದು ತೆರೆ ಕಾಣಬೇಕಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸುತ್ತಿದ್ದಾರೆ. ‘ಇಕ್ಕೀಸ್’ ಚಿತ್ರದಲ್ಲಿ ಭಾರತದ ಅತಿ ಕಿರಿಯ ಪರಮ ವೀರ ಚಕ್ರ ಪ್ರಶಸ್ತಿ ವಿಜೇತ ಎರಡನೇ ಲೆಫ್ಟಿನೆಂಟ್ ಅರುಣ್ ಖೇತರ್ಪಾಲ್ ಪಾತ್ರದಲ್ಲಿ ಅಗಸ್ತ್ಯ ನಂದ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅರುಣ್ ಅವರ ನಿಜ ಜೀವನದ ಕಥೆಯನ್ನು ಹೇಳಲಾಗುತ್ತಿದೆಯಂತೆ. 2023ರಲ್ಲಿ ತೆರೆಕಂಡ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ರಣವೀರ್ ಸಿಂಗ್, ಶಬಾನಾ ಅಜ್ಮಿ ಮತ್ತು ಆಲಿಯಾ ಭಟ್ ಅವರೊಂದಿಗೆ ಧರ್ಮೇಂದ್ರ ಅವರು ನಟಿಸಿದ್ದರು. 2024ರಲ್ಲಿ ‘ತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾ’ ಚಿತ್ರದಲ್ಲಿ ಶಹೀದ್ ಕಪೂರ್ ಮತ್ತು ಕೃತಿ ಸನೋನ್ ಅವರೊಂದಿಗೆ ಧರ್ಮೇಂದ್ರ ಕಾಣಿಸಿಕೊಂಡಿದ್ದರು.

TAGGED:bollywoodBollywood ActorDharmendrahospitalಬಾಲಿವುಡ್ಬಾಲಿವುಡ್‌ ಧರ್ಮೇಂದ್ರಮುಂಬೈ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
5 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
5 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
6 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
6 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
6 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?