ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ – ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ?

Public TV
0 Min Read
katrina kaif kukke subramanya

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ. ಇಂದು ಮತ್ತು ನಾಳೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ.

Kukke Shri Subrahmanya

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.

Share This Article