Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್

Bollywood

ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್

Public TV
Last updated: June 9, 2023 1:50 pm
Public TV
Share
2 Min Read
NIYAZ KHAN
SHARE

– ಸಿನಿಮಾ ತಾರೆಯರು ಹಿಂದೂಗಳನ್ನ ಮುಸ್ಲಿಮರನ್ನಾಗಿಸಿದ್ದಾರೆ; ಮತಾಂತರ ಮಾಡೋದು ತಪ್ಪು
– ಮುಸ್ಲಿಂ ಯುವಕರು ಗೋರಕ್ಷಕರಾಗಬೇಕು

ಭೋಪಾಲ್: ಮತಾಂತರಗಳಿಗೆ (Religious Conversion) ಬಾಲಿವುಡ್ (Bollywood) ಚಿತ್ರರಂಗ ಕಾರಣ. ಅಲ್ಲದೇ ಅದರ ಆರಂಭ ಅಲ್ಲಿಂದಲೇ ಆಗಿದೆ ಎಂದು ಮಧ್ಯಪ್ರದೇಶದ (Madhya Pradesh) ಕೇಡರ್‌ನ ಐಎಎಸ್ (IAS) ಅಧಿಕಾರಿ ನಿಯಾಜ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ದೊಡ್ಡ ದೊಡ್ಡ ಸಿನಿಮಾ ತಾರೆಯರು ಹಿಂದೂಗಳನ್ನು (Hindu) ಮದುವೆಯಾಗುವ (Marriage) ಮೂಲಕ ಮುಸಲ್ಮಾನರನ್ನಾಗಿಸಿದ್ದಾರೆ. ಇಂದಿಗೂ ಇದು ನಡೆಯುತ್ತಿದೆ. ಮತಾಂತರ ನಿಜವಾಗಿಯೂ ತಪ್ಪು. ಏಕೆಂದರೆ ಒಂದು ಧರ್ಮವನ್ನು ಇತರ ಎಲ್ಲಾ ಧರ್ಮಗಳಿಗಿಂತ ಮಿಗಿಲು ಎಂದು ಪರಿಗಣಿಸುತ್ತೇವೆ. ಆದರೆ ಒಂದು ಧರ್ಮಕ್ಕೆ ಸೇರಲು ಬೇರೆ ಧರ್ಮವನ್ನು ಸಣ್ಣದು ಎಂದು ಭಾವಿಸುತ್ತೇವೆ. ಇದು ಸರಿಯಾದ ಕ್ರಮ ಅಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿರಾಜಪೇಟೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಧರ್ಮಗಳಿಗೂ ಸಮಾನವಾದ ಸ್ಥಾನ ನೀಡಲಾಗಿದೆ. ಮದುವೆಯ ನಂತರ ಬೇರೆ ಧರ್ಮಕ್ಕೆ ಮತಾಂತರವಾಗಬೇಕು ಎಂಬ ವಿಚಾರವನ್ನು ಹೇಗೆ ಒಪ್ಪಲು ಸಾಧ್ಯ? ನಿಜವಾಗಿ ಇಬ್ಬರ ನಡುವೆ ಪ್ರೀತಿ ಇದ್ದರೆ, ಇಬ್ಬರೂ ತಮ್ಮ ತಮ್ಮ ಧರ್ಮವನ್ನು ಅನುಸರಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

MARRAGE (1)

ಜನರು ಕಲಾವಿದರನ್ನು ದೇವರಂತೆ ಪರಿಗಣಿಸುತ್ತಾರೆ. ಅಲ್ಲದೆ ನಟರನ್ನು ಅನುಸರಿಸುತ್ತಾರೆ. ಇದರ ಪರಿಣಾಮವಾಗಿ ಇಂದು ಜನರು ಪಾಶ್ಚಿಮಾತ್ಯ ಸಂಸ್ಕೃತಿಯಲ್ಲಿ ಸಾಗುತ್ತಿದ್ದಾರೆ. ಅಲ್ಲದೇ ಚಲನಚಿತ್ರದಲ್ಲಿನ ನಗ್ನ ದೃಶ್ಯಗಳು ನಮ್ಮ ಯುವ ಪೀಳಿಗೆಯನ್ನು ಹಾಳುಮಾಡುತ್ತಿವೆ ಎಂದಿದ್ದಾರೆ.

ಬಾಲಿವುಡ್, ಹಾಲಿವುಡ್‍ನ್ನು ಜನ ಅನುಕರಣೆ ಮಾಡುವುದನ್ನು ಬಿಟ್ಟು, ದೇಶಪ್ರೇಮದ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ಅಲ್ಲದೇ ಚಲನಚಿತ್ರಗಳು ಮಕ್ಕಳ ಮೇಲೆ ಪ್ರಭಾವ ಬೀರುವುದರಿಂದ ದೇಶಪ್ರೇಮ, ಸಾಧು ಸಂತರ ವಿಚಾರಗಳನ್ನು ಚಿತ್ರದಲ್ಲಿ ತರಬೇಕು ಎಂದಿದ್ದಾರೆ.

ಖಾನ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದ ಟ್ವೀಟ್ ಬಗ್ಗೆ ಮಾತನಾಡಿ, ನಾನು ಮೂರು ವಿಷಯಗಳನ್ನು ಟ್ವೀಟ್ ಮಾಡಿದ್ದೇನೆ. ಮುಸ್ಲಿಂ ಯುವಕರು ಗೋರಕ್ಷಕರಾಗಬೇಕು. ಅವರು ಸಸ್ಯಾಹಾರಿಯಾಗಲು ಪ್ರಯತ್ನಿಸಬೇಕು. ಅಲ್ಲದೇ ಬ್ರಾಹ್ಮಣರೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು ಎಂದು ಪ್ರಕಟಿಸಿದ್ದೇನೆ ಎಂದಿದ್ದಾರೆ.

ಮುಸ್ಲಿಮರು (Muslim) ಗೋರಕ್ಷಕರಾದರೆ (Cow Protector), ಗೋವುಗಳು ಉಳಿಯುತ್ತವೆ. ಅಲ್ಲದೇ ಕೆಲವು ಮುಸ್ಲಿಮರು ಗೋವುಗಳನ್ನು ಗೌರವದಿಂದ ಕಾಣುತ್ತಾರೆ. ಅವುಗಳಿಗೆ ಆಹಾರ ನೀಡುತ್ತಾರೆ. ಇದರೊಂದಿಗೆ ಸಸ್ಯಾಹಾರದ ಅಭ್ಯಾಸವೂ ಪ್ರಪಂಚದಾದ್ಯಂತ ನಡೆಯುತ್ತಿದೆ. ಭೂಮಿಯನ್ನು ಉಳಿಸಲು ಇದನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆದರೆ ಯಾವುದನ್ನು ತಿನ್ನಬೇಕು ಎಂದು ನಿರ್ಧರಿಸಲು ಯಾರನ್ನೂ ನಾನು ಒತ್ತಾಯಿಸಲಾಗುವುದಿಲ್ಲ. ಬ್ರಾಹ್ಮಣ, ಸದಾ ಸತ್ಯದ ಮಾರ್ಗದಲ್ಲಿ ನಡೆಯುತ್ತಾ, ದೇಶವನ್ನು ಮುನ್ನಡೆಸುತ್ತಾನೆ. 3,000 ವರ್ಷಗಳಿಂದ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಇಂದಿಗೂ ಸಂತರ ಕಾರ್ಯಕ್ರಮ ಇದ್ದಾಗ ಲಕ್ಷಗಟ್ಟಲೆ ಜನ ಸೇರುತ್ತಾರೆ. ಬ್ರಾಹ್ಮಣರು ಇಂದಿಗೂ ಮಾರ್ಗದರ್ಶಕರು. ಬ್ರಾಹ್ಮಣರ ಆಶೀರ್ವಾದದಿಂದ ಇಲ್ಲಿಯವರೆಗೆ ನಮ್ಮ ಸ್ಥಳದಲ್ಲಿ ಶಾಂತಿ ಕಾಪಾಡಲಾಗಿದೆ. ಕೌಟಿಲ್ಯನಂತಹ ಬ್ರಾಹ್ಮಣ ಭಾರತಕ್ಕೆ ಉತ್ತಮ ಉದಾಹರಣೆ. ನನ್ನ ಟ್ವೀಟ್ ರಾಜಕೀಯ ಪ್ರೇರಿತ ಅಲ್ಲ. ಇದು ಸಂಪೂರ್ಣವಾಗಿ ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳುತ್ತೀರಾ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ವಿಗ್ರಹಗಳಿಲ್ಲ. ನಾನು ಮೊಹಮ್ಮದ್ ಸಾಬ್ ಹಾಗೂ ಮಹಾನ್ ಚಾಣಕ್ಯನ (Chanakya) ಆರಾಧಕ. ನಾನು ಇಸ್ಲಾಮಿನಲ್ಲಿದ್ದೇನೆ ಮತ್ತು ಹಾಗೆಯೇ ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವರ್ಗೀಕೃತ ದಾಖಲೆಗಳ ಕೇಸ್ – ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

TAGGED:bollywoodChanakyacow protectorhinduIASMadhya PradeshmarriagemuslimReligious conversionಬಾಲಿವುಡ್ಮತಾಂತರಮಧ್ಯಪ್ರದೇಶಮುಸ್ಲಿಂಹಿಂದೂ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
13 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
14 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
20 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
46 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
2 hours ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?