Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್

Bollywood

ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್

Public TV
Last updated: June 9, 2023 1:50 pm
Public TV
Share
2 Min Read
NIYAZ KHAN
SHARE

– ಸಿನಿಮಾ ತಾರೆಯರು ಹಿಂದೂಗಳನ್ನ ಮುಸ್ಲಿಮರನ್ನಾಗಿಸಿದ್ದಾರೆ; ಮತಾಂತರ ಮಾಡೋದು ತಪ್ಪು
– ಮುಸ್ಲಿಂ ಯುವಕರು ಗೋರಕ್ಷಕರಾಗಬೇಕು

ಭೋಪಾಲ್: ಮತಾಂತರಗಳಿಗೆ (Religious Conversion) ಬಾಲಿವುಡ್ (Bollywood) ಚಿತ್ರರಂಗ ಕಾರಣ. ಅಲ್ಲದೇ ಅದರ ಆರಂಭ ಅಲ್ಲಿಂದಲೇ ಆಗಿದೆ ಎಂದು ಮಧ್ಯಪ್ರದೇಶದ (Madhya Pradesh) ಕೇಡರ್‌ನ ಐಎಎಸ್ (IAS) ಅಧಿಕಾರಿ ನಿಯಾಜ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ದೊಡ್ಡ ದೊಡ್ಡ ಸಿನಿಮಾ ತಾರೆಯರು ಹಿಂದೂಗಳನ್ನು (Hindu) ಮದುವೆಯಾಗುವ (Marriage) ಮೂಲಕ ಮುಸಲ್ಮಾನರನ್ನಾಗಿಸಿದ್ದಾರೆ. ಇಂದಿಗೂ ಇದು ನಡೆಯುತ್ತಿದೆ. ಮತಾಂತರ ನಿಜವಾಗಿಯೂ ತಪ್ಪು. ಏಕೆಂದರೆ ಒಂದು ಧರ್ಮವನ್ನು ಇತರ ಎಲ್ಲಾ ಧರ್ಮಗಳಿಗಿಂತ ಮಿಗಿಲು ಎಂದು ಪರಿಗಣಿಸುತ್ತೇವೆ. ಆದರೆ ಒಂದು ಧರ್ಮಕ್ಕೆ ಸೇರಲು ಬೇರೆ ಧರ್ಮವನ್ನು ಸಣ್ಣದು ಎಂದು ಭಾವಿಸುತ್ತೇವೆ. ಇದು ಸರಿಯಾದ ಕ್ರಮ ಅಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿರಾಜಪೇಟೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಧರ್ಮಗಳಿಗೂ ಸಮಾನವಾದ ಸ್ಥಾನ ನೀಡಲಾಗಿದೆ. ಮದುವೆಯ ನಂತರ ಬೇರೆ ಧರ್ಮಕ್ಕೆ ಮತಾಂತರವಾಗಬೇಕು ಎಂಬ ವಿಚಾರವನ್ನು ಹೇಗೆ ಒಪ್ಪಲು ಸಾಧ್ಯ? ನಿಜವಾಗಿ ಇಬ್ಬರ ನಡುವೆ ಪ್ರೀತಿ ಇದ್ದರೆ, ಇಬ್ಬರೂ ತಮ್ಮ ತಮ್ಮ ಧರ್ಮವನ್ನು ಅನುಸರಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

MARRAGE (1)

ಜನರು ಕಲಾವಿದರನ್ನು ದೇವರಂತೆ ಪರಿಗಣಿಸುತ್ತಾರೆ. ಅಲ್ಲದೆ ನಟರನ್ನು ಅನುಸರಿಸುತ್ತಾರೆ. ಇದರ ಪರಿಣಾಮವಾಗಿ ಇಂದು ಜನರು ಪಾಶ್ಚಿಮಾತ್ಯ ಸಂಸ್ಕೃತಿಯಲ್ಲಿ ಸಾಗುತ್ತಿದ್ದಾರೆ. ಅಲ್ಲದೇ ಚಲನಚಿತ್ರದಲ್ಲಿನ ನಗ್ನ ದೃಶ್ಯಗಳು ನಮ್ಮ ಯುವ ಪೀಳಿಗೆಯನ್ನು ಹಾಳುಮಾಡುತ್ತಿವೆ ಎಂದಿದ್ದಾರೆ.

ಬಾಲಿವುಡ್, ಹಾಲಿವುಡ್‍ನ್ನು ಜನ ಅನುಕರಣೆ ಮಾಡುವುದನ್ನು ಬಿಟ್ಟು, ದೇಶಪ್ರೇಮದ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ಅಲ್ಲದೇ ಚಲನಚಿತ್ರಗಳು ಮಕ್ಕಳ ಮೇಲೆ ಪ್ರಭಾವ ಬೀರುವುದರಿಂದ ದೇಶಪ್ರೇಮ, ಸಾಧು ಸಂತರ ವಿಚಾರಗಳನ್ನು ಚಿತ್ರದಲ್ಲಿ ತರಬೇಕು ಎಂದಿದ್ದಾರೆ.

ಖಾನ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದ ಟ್ವೀಟ್ ಬಗ್ಗೆ ಮಾತನಾಡಿ, ನಾನು ಮೂರು ವಿಷಯಗಳನ್ನು ಟ್ವೀಟ್ ಮಾಡಿದ್ದೇನೆ. ಮುಸ್ಲಿಂ ಯುವಕರು ಗೋರಕ್ಷಕರಾಗಬೇಕು. ಅವರು ಸಸ್ಯಾಹಾರಿಯಾಗಲು ಪ್ರಯತ್ನಿಸಬೇಕು. ಅಲ್ಲದೇ ಬ್ರಾಹ್ಮಣರೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು ಎಂದು ಪ್ರಕಟಿಸಿದ್ದೇನೆ ಎಂದಿದ್ದಾರೆ.

ಮುಸ್ಲಿಮರು (Muslim) ಗೋರಕ್ಷಕರಾದರೆ (Cow Protector), ಗೋವುಗಳು ಉಳಿಯುತ್ತವೆ. ಅಲ್ಲದೇ ಕೆಲವು ಮುಸ್ಲಿಮರು ಗೋವುಗಳನ್ನು ಗೌರವದಿಂದ ಕಾಣುತ್ತಾರೆ. ಅವುಗಳಿಗೆ ಆಹಾರ ನೀಡುತ್ತಾರೆ. ಇದರೊಂದಿಗೆ ಸಸ್ಯಾಹಾರದ ಅಭ್ಯಾಸವೂ ಪ್ರಪಂಚದಾದ್ಯಂತ ನಡೆಯುತ್ತಿದೆ. ಭೂಮಿಯನ್ನು ಉಳಿಸಲು ಇದನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆದರೆ ಯಾವುದನ್ನು ತಿನ್ನಬೇಕು ಎಂದು ನಿರ್ಧರಿಸಲು ಯಾರನ್ನೂ ನಾನು ಒತ್ತಾಯಿಸಲಾಗುವುದಿಲ್ಲ. ಬ್ರಾಹ್ಮಣ, ಸದಾ ಸತ್ಯದ ಮಾರ್ಗದಲ್ಲಿ ನಡೆಯುತ್ತಾ, ದೇಶವನ್ನು ಮುನ್ನಡೆಸುತ್ತಾನೆ. 3,000 ವರ್ಷಗಳಿಂದ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಇಂದಿಗೂ ಸಂತರ ಕಾರ್ಯಕ್ರಮ ಇದ್ದಾಗ ಲಕ್ಷಗಟ್ಟಲೆ ಜನ ಸೇರುತ್ತಾರೆ. ಬ್ರಾಹ್ಮಣರು ಇಂದಿಗೂ ಮಾರ್ಗದರ್ಶಕರು. ಬ್ರಾಹ್ಮಣರ ಆಶೀರ್ವಾದದಿಂದ ಇಲ್ಲಿಯವರೆಗೆ ನಮ್ಮ ಸ್ಥಳದಲ್ಲಿ ಶಾಂತಿ ಕಾಪಾಡಲಾಗಿದೆ. ಕೌಟಿಲ್ಯನಂತಹ ಬ್ರಾಹ್ಮಣ ಭಾರತಕ್ಕೆ ಉತ್ತಮ ಉದಾಹರಣೆ. ನನ್ನ ಟ್ವೀಟ್ ರಾಜಕೀಯ ಪ್ರೇರಿತ ಅಲ್ಲ. ಇದು ಸಂಪೂರ್ಣವಾಗಿ ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳುತ್ತೀರಾ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ವಿಗ್ರಹಗಳಿಲ್ಲ. ನಾನು ಮೊಹಮ್ಮದ್ ಸಾಬ್ ಹಾಗೂ ಮಹಾನ್ ಚಾಣಕ್ಯನ (Chanakya) ಆರಾಧಕ. ನಾನು ಇಸ್ಲಾಮಿನಲ್ಲಿದ್ದೇನೆ ಮತ್ತು ಹಾಗೆಯೇ ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವರ್ಗೀಕೃತ ದಾಖಲೆಗಳ ಕೇಸ್ – ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

TAGGED:bollywoodChanakyacow protectorhinduIASMadhya PradeshmarriagemuslimReligious conversionಬಾಲಿವುಡ್ಮತಾಂತರಮಧ್ಯಪ್ರದೇಶಮುಸ್ಲಿಂಹಿಂದೂ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
2 minutes ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
4 minutes ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
29 minutes ago
Mallikarjuna Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

Public TV
By Public TV
52 minutes ago
Mandya Crime
Crime

ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

Public TV
By Public TV
52 minutes ago
Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?