ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಣದೀಪ್ ಅವರಿಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಟ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕುದುರೆ ಮೇಲಿಂದ ಬಿದ್ದ ಪರಿಣಾಮವಾಗಿ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು ಸಿಕ್ಕಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ವೈದ್ಯರು ಬೆಡ್ ರೆಸ್ಟ್ ತಗೆದುಕೊಳ್ಳುವಂತೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅವರು ಸಾವರ್ಕರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಆ ಸಿನಿಮಾ ದೃಶ್ಯಕ್ಕಾಗಿ ಅವರು ಕುದುರೆ ಸವಾರಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 15 ದಿನಗಳಿಂದ ಸುಧಾರಾಣಿ ಮನೆ ಶ್ವಾನ ನಾಪತ್ತೆ: ಬಿಬಿಎಂಪಿ ವಿರುದ್ಧ ನಟಿ ಗರಂ
ಸಾವರ್ಕರ್ ಪಾತ್ರ ಮಾಡುವುದಕ್ಕಾಗಿಯೇ ಅವರು 22 ಕೆಜಿ ತೂಕವನ್ನು ಇಳಿಸಿಕೊಳ್ಳುತ್ತಿದ್ದರು. ಈ ನೆಪದಲ್ಲಿ ಕುದುರೆ ಸವಾರಿ ಕೂಡ ಅವರು ಮಾಡುತ್ತಿದ್ದರು. ಈ ಸಮಯದಲ್ಲಿ ಕುದುರೆ ಮೇಲಿಂದ ಬಿದ್ದು ತೀವ್ರಗಾಯಗೊಂಡಿದ್ದಾರೆ. ಬಿದ್ದಿರುವ ಹೊಡೆತಕ್ಕೆ ಪ್ರಜ್ಞೆ ಕೂಡ ಕಳೆದುಕೊಂಡಿದ್ದರು. ಈ ಹಿಂದೆಯೂ ರಾಧೆ ಸಿನಿಮಾದ ಶೂಟಿಂಗ್ ವೇಳೆಯೂ ರಣದೀಪ್ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k