ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್‌ ಸಾಥ್: ಗಿಡ ನೆಡುವಂತೆ ಫ್ಯಾನ್ಸ್‌ಗೆ ಸಲ್ಲು ಮನವಿ

Public TV
2 Min Read
salman khan 5

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ‘ಕಭಿ ಈದ್ ಕಭಿ ದಿವಾಲಿ’ ಚಿತ್ರೀಕರಣಕ್ಕಾಗಿ ಹೈದರಾಬಾದನಲ್ಲಿ ಬೀಡು ಬಿಟ್ಟಿದ್ದಾರೆ. ಈ ವೇಳೆ ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.

ಸಲ್ಮಾನ್ ಖಾನ್ ಬತ್ತಳಿಕೆಯಲ್ಲಿ ಸಾಕಷ್ಟು ಚಿತ್ರಗಳಿವೆ‌. ಸದ್ಯ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ರಾಜ್ಯ ಸಭಾ ಎಪಿ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಆಗಿರುವ ಜೆ. ಸಂತೋಷ್ ಕುಮಾರ್ ಅವರ ವಿನಂತಿಯ ಮೇರೆಗೆ ಗಿಡ ನೆಟ್ಟಿದ್ದರು. ಗ್ರೀನ್ ಇಂಡಿಯಾ ಚಾಲೆಂಜ್ ಪ್ರಯುಕ್ತ ಹೈದರಾಬಾದ್ ನ ರಾಮೋಜಿ ಫಿಲ್ಮಂ ಸಿಟಿಯಲ್ಲಿ ಸಲ್ಮಾನ್ ಖಾನ್ ಗಿಡ ನೆಡುವ ಮೂಲಕ ಅಭಿಮಾನಿಗಳು ಗಿಡ ನೇಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ:ಐದು ಭಾಷೆ, ಐದು ಸ್ಟಾರ್ ನಟರಿಂದ ಕಿಚ್ಚನ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್

ಗ್ಲೋಬಲ್ ವಾರ್ಮಿಂಗ್ ನಿಯಂತ್ರಣ ಮಾಡುವ ದೃಷ್ಟಿಯಿಂದ ಸಲ್ಮಾನ್ ಖಾನ್ ತಾವು ಕೂಡ ಗಿಡ ನೆಟ್ಟಿರುವುದಲ್ಲದೇ, ಅಭಿಮಾನಿಗಳಿಗೂ ಗಿಡ ನೇಡುವಂತೆ ಮನವಿ ಮಾಡಿದ್ದಾರೆ. ಒಟ್ನಲ್ಲಿ ಕೆಲಸದ ಮಧ್ಯೆಯೂ ಕೂಡ ಸಲ್ಮಾನ್ ಖಾನ್ ಸಮಾಜಮುಖಿ ಕರ‍್ಯಕ್ಕೆ ಫ್ಯಾನ್ಸ್ ಭೇಷ್ ಅಂತಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *