ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

Public TV
1 Min Read
JAMMU

-ದಾಳಿ ಮಾಡಿದ ಉಗ್ರ ಪರಾರಿ

ಶ್ರೀನಗರ: ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ.

ಕಾಶ್ಮೀರದಲ್ಲಿ ನಡೆದ ದಾಳಿಯ ಬಳಿಕ ನಗರದಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿತ್ತು. ಆದರೂ ಉಗ್ರರು ಈಗ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಮಾಡುವ ಮೂಲಕ ಮತ್ತೆ ತಮ್ಮ ಅಟ್ಟಹಾಸವನ್ನು ಮೆರೆದಿದ್ದಾರೆ.

ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಇಟ್ಟು ಸ್ಫೋಟ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಬಸ್ ಹೊರಗೆ ಇದ್ದ ಜನರಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಸ್ಸಿನಲ್ಲಿ ಎಷ್ಟು ಜನರು ಇದ್ದರು ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಸದ್ಯಕ್ಕೆ ಸ್ಫೋಟದ ರಭಸಕ್ಕೆ ಬಸ್ ಸುಟ್ಟು ಹೋಗಿದೆ. ಕೆಲ ವರ್ಷದಿಂದ ಉಗ್ರರು ಜನರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ನಿಲ್ಲಿಸಿ ಸೈನಿಕರ ಮೇಲೆ ದಾಳಿ ಮಾಡುತ್ತಿದ್ದರು. ಆದರೆ ಈಗ ಮತ್ತೆ ಜನರ ಮೇಲೆ ದಾಳಿ ಆರಂಭಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದು, ಮೊತ್ತರ್ವ ಉಗ್ರ ಪರಾರಿಯಾಗಿದ್ದಾನೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *