ಚಿಕ್ಕೋಡಿ: ʻನಿಮ್ಮ ರಾಮಮಂದಿರ (Ram Mandir) ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿʼ ಎಂದು ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ (Belagavi Nippani) ಪಟ್ಟಣದಲ್ಲಿ ನಡೆದಿದೆ.
ರಾಮಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಪತ್ರ (Bomb Threat) ಬರೆದು ಮಂದಿರದಲ್ಲಿ ಅನಾಮಧೇಯ ವ್ಯಕ್ತಿಗಳು ಬಿಟ್ಟು ಹೋಗಿದ್ದಾರೆ. ಇದನ್ನೂ ಓದಿ: ನಮ್ಮ ಮನೆ ಬೋರ್ವೆಲ್ನಲ್ಲೇ ನೀರಿಲ್ಲ: ಡಿ.ಕೆ ಶಿವಕುಮಾರ್
ಫೆಬ್ರವರಿ 7 ಹಾಗೂ 28ರಂದು ಬಂದ ಬೆದರಿಕೆ ಪತ್ರಗಳು ಈಗ ಬಹಿರಂಗವಾಗಿದ್ದು, ಮಾರ್ಚ್ 20-21ಕ್ಕೆ ಬಾಂಬ್ ಸ್ಫೋಟಿಸುವುದಾಗಿ ಪತ್ರದಲ್ಲಿ ಉಲೇಖಿಸಲಾಗಿದೆ. 101 ವರ್ಷಗಳ ಇತಿಹಾಸ ಹೊಂದಿರುವ ನಿಪ್ಪಾಣಿ ಪಟ್ಟಣದ ಶ್ರೀರಾಮ ಮಂದಿರವನ್ನ ಸ್ಫೋಟಿಸುವದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ: ಪ್ರತಾಪ್ ಸಿಂಹ
ಮೊದಲ ಪತ್ರ ಫೆಬ್ರವರಿ 7ರಂದು ರಾಮಮಂದಿರ ಆವರಣದ ಹನುಮ ಮಂದಿರದಲ್ಲಿ ಪತ್ತೆಯಾಗಿತ್ತು. 2ನೇ ಪತ್ರ ಫೆಬ್ರವರಿ 28ರಂದು ರಾಮಮಂದಿರದ ಗರ್ಭ ಗುಡಿಯಲ್ಲಿ ಪತ್ತೆಯಾಗಿತ್ತು. ಬೆದರಿಕೆ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸರು ಅಲರ್ಟ್ ಆಗಿದ್ದು, ರಾಮಮಂದಿರದಲ್ಲಿ 14 ಸಿಸಿಟಿವಿಗಳನ್ನು ಅಳವಡಿಕೆ ಮಾಡಿದ್ದಾರೆ. ಜೊತೆಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಕುರಿತು ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.