Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಗುಂಡಿ, ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಡುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡಿ: ಬಾಂಬೆ ಹೈಕೋರ್ಟ್‌ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ರಸ್ತೆ ಗುಂಡಿ, ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಡುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡಿ: ಬಾಂಬೆ ಹೈಕೋರ್ಟ್‌ ಆದೇಶ

Court

ರಸ್ತೆ ಗುಂಡಿ, ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಡುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡಿ: ಬಾಂಬೆ ಹೈಕೋರ್ಟ್‌ ಆದೇಶ

Public TV
Last updated: October 14, 2025 4:24 pm
Public TV
Share
4 Min Read
maharashtra potholes
SHARE

– ಗಾಯಗೊಂಡವರಿಗೆ 50,000 ದಿಂದ 2.5 ಲಕ್ಷದವರೆಗೆ ಪರಿಹಾರ ಕೊಡಬೇಕು
– ಸಾವುಗಳಿಗೆ ಅಧಿಕಾರಿಗಳು, ಗುತ್ತಿಗೆದಾರರನ್ನು ಹೊಣೆ ಮಾಡುವ ಎಚ್ಚರಿಕೆ ನೀಡಿದ ಕೋರ್ಟ್‌

ಮುಂಬೈ: ಮಹಾರಾಷ್ಟ್ರದಲ್ಲಿ ರಸ್ತೆ ಗುಂಡಿಗಳು (Road Potholes) ಅಥವಾ ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡುವಂತೆ ಪುರಸಭೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ (Bombay High Court) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಸಂದೇಶ್ ಡಿ ಪಾಟೀಲ್ ಅವರ ಪೀಠವು, ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್‌ಹೋಲ್‌ಗಳಿಂದ ಗಾಯಗೊಂಡವರಿಗೆ 50,000 ದಿಂದ 2.5 ಲಕ್ಷದವರೆಗೆ ಪರಿಹಾರ ನೀಡಬೇಕು ಎಂದು ಹೇಳಿದೆ. ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಉತ್ತಮ ಮತ್ತು ಸುರಕ್ಷಿತ ರಸ್ತೆಗಳು ಜನರ ಬದುಕುವ ಹಕ್ಕಿನ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

ನಿವೃತ್ತ ನ್ಯಾಯಮೂರ್ತಿ ಜಿ.ಎಸ್. ಪಟೇಲ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿದ ಪತ್ರದ ಆಧಾರದ ಮೇಲೆ 2013 ರಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ಪ್ರಕರಣದಲ್ಲಿ ಅಡಿಯಲ್ಲಿ ನ್ಯಾಯಾಲಯ ಈ ಆದೇಶವನ್ನು ನೀಡಿದೆ.

Bombay High Court

ಕೆಟ್ಟ ಮತ್ತು ಅಸುರಕ್ಷಿತ ರಸ್ತೆಗಳಿಗೆ ಯಾವುದೇ ಸಮರ್ಥನೆ ಇಲ್ಲ. ದೇಶದ ಆರ್ಥಿಕ ರಾಜಧಾನಿಯಾಗಿರುವ ಮುಂಬೈ, ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಯ ಆದಾಯಕ್ಕೆ ಹೆಚ್ಚಿನ ಕೊಡುಗೆ ನೀಡುತ್ತದೆ. ವಾಸ್ತವವಾಗಿ, ಎಂಸಿಜಿಎಂ ಏಷ್ಯಾದ ಅತ್ಯಂತ ಶ್ರೀಮಂತ ನಿಗಮಗಳಲ್ಲಿ ಒಂದಾಗಿದೆ. ಕೆಟ್ಟ ರಸ್ತೆಗಳು ಮಾನವ ಜೀವಗಳಿಗೆ ಅಪಾಯವನ್ನುಂಟು ಮಾಡುವುದಲ್ಲದೆ, ಕಂಪನಿಗಳ ಆರ್ಥಿಕ ಆರೋಗ್ಯ ಸೇರಿದಂತೆ ದೇಶದ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತವೆ ಎಂದು ವಿಷಾದಿಸಿತು.

ತೆರಿಗೆ ಪಾವತಿಸುವ ಸಾರ್ವಜನಿಕರಿಗೆ ಸುರಕ್ಷಿತ ರಸ್ತೆಗಳು ಸೇರಿದಂತೆ ಸರಿಯಾದ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ನಾಗರಿಕ ಅಧಿಕಾರಿಗಳು ಮತ್ತು ರಾಜ್ಯ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಮಹಾರಾಷ್ಟ್ರದಲ್ಲಿ ಮಳೆಗಾಲದಲ್ಲಿ ಗುಂಡಿಗಳು ಮತ್ತು ತೆರೆದ ಮ್ಯಾನ್‌ಹೋಲ್‌ಗಳಿಂದ ಸಾವುಗಳು ಮತ್ತು ಗಂಭೀರ ಗಾಯಗಳು ಸಾಮಾನ್ಯ ಲಕ್ಷಣವಾಗಿದೆ ಎಂದು ಹೇಳಿತು. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್‌ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

ಇಂತಹ ಸಾವುಗಳು ಮತ್ತು ಗಾಯಗಳಿಗೆ ನಾಗರಿಕ ಅಧಿಕಾರಿಗಳು ಮತ್ತು ರಸ್ತೆ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವ ಸಮಯ ಇದು. ಈ ದೀರ್ಘಕಾಲೀನ ಸಮಸ್ಯೆಯನ್ನು ಪರಿಹರಿಸುವಲ್ಲಿ ಅಧಿಕಾರಿಗಳ ಕಡೆಯಿಂದ ನಮಗೆ ಯಾವುದೇ ಗಂಭೀರ ಪ್ರಯತ್ನ ಕಂಡುಬರುವುದಿಲ್ಲ. ನಾಗರಿಕ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಈ ದುರಂತ ಸನ್ನಿವೇಶವು ಪ್ರತಿ ವರ್ಷವೂ ಪುನರಾವರ್ತನೆಯಾಗುತ್ತದೆ. ಗುತ್ತಿಗೆದಾರರ ಮೇಲೆ ಮಾತ್ರವಲ್ಲದೆ ಅಧಿಕಾರಿಗಳ ಮೇಲೂ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿತು.

ಗುಂಡಿಗಳಿಗೆ ಸಂಬಂಧಿಸಿದ ಸಾವುಗಳು ಮತ್ತು ಗಾಯಗಳಿಗೆ ಕಾರಣರಾದವರನ್ನು ಹಣಕಾಸಿನ ದೃಷ್ಟಿಯಿಂದ ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡದ ಹೊರತು, ಅವರಿಗೆ ಸಮಸ್ಯೆಯ ಗಂಭೀರತೆ ಅರ್ಥವಾಗುವುದಿಲ್ಲ. ಆದ್ದರಿಂದ, ಗುಂಡಿ ಅಥವಾ ಮ್ಯಾನ್‌ಹೋಲ್ ಅಪಘಾತಗಳ ಬಲಿಪಶುಗಳಿಗೆ ಪರಿಹಾರವನ್ನು ವಿತರಿಸಲು ಪ್ರಾರಂಭಿಸಲು ಅಧಿಕಾರಿಗಳಿಗೆ ಆದೇಶಿಸಿತು. ಆಗ ಮಾತ್ರ ಅದು ಸಂಬಂಧಪಟ್ಟ ಸಂಸ್ಥೆಗಳಿಗೆ ಎಚ್ಚರಿಕೆಯ ಗಂಟೆಯಾಗುತ್ತದೆ ಎಂದು ವಾದಿಸಿತು.

ಅರ್ಹ ವ್ಯಕ್ತಿಗಳಿಗೆ ಪರಿಹಾರವನ್ನು ಹಕ್ಕು ಸ್ವೀಕರಿಸಿದ ದಿನಾಂಕದಿಂದ ಆರರಿಂದ ಎಂಟು ವಾರಗಳೊಳಗೆ ಪಾವತಿಸಬೇಕು ಮತ್ತು ಪಾವತಿ ವಿಳಂಬವಾದರೆ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ. ಸಕಾಲದಲ್ಲಿ ಪರಿಹಾರ ಪಾವತಿಸಲು ವಿಫಲವಾದರೆ, ಪುರಸಭೆ ಆಯುಕ್ತರು, ಮುಖ್ಯ ಅಧಿಕಾರಿ, ಜಿಲ್ಲಾಧಿಕಾರಿ, ಸಿಇಒ, ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರು ವಿಳಂಬಕ್ಕೆ ವೈಯಕ್ತಿಕವಾಗಿ ಜವಾಬ್ದಾರರಾಗಿರುತ್ತಾರೆ. ಸಂತ್ರಸ್ತರಿಗೆ ಪರಿಹಾರವನ್ನು ನೀಡಿದ ನಂತರ, ಪಾವತಿಸಿದ ಮೊತ್ತವನ್ನು ಗುಂಡಿ ಅಥವಾ ತೆರೆದ ಮ್ಯಾನ್‌ಹೋಲ್‌ಗೆ ಕಾರಣರಾದ ವ್ಯಕ್ತಿಗಳಿಂದ ವಸೂಲಿ ಮಾಡಬಹುದು. ಅದು ಅಧಿಕಾರಿಗಳು, ಎಂಜಿನಿಯರ್‌ಗಳು ಅಥವಾ ಗುತ್ತಿಗೆದಾರರಾಗಿರಬಹುದು ಎಂದು ನ್ಯಾಯಾಲಯ ಹೇಳಿದೆ.

ಗುಂಡಿ ಅಥವಾ ಮ್ಯಾನ್‌ಹೋಲ್ ಅಪಘಾತಗಳ ವರದಿಗಳನ್ನು ವಿಚಾರಣೆ ಮಾಡುವ ಮತ್ತು ಬಲಿಪಶುಗಳಿಗೆ ಪಾವತಿಸಬೇಕಾದ ಪರಿಹಾರವನ್ನು ನಿರ್ಧರಿಸುವ ಕಾರ್ಯವನ್ನು ಹೊಂದಿರುವ ಸಮಿತಿಗಳನ್ನು ರಚಿಸಬೇಕು. ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ಸಮಿತಿಗಳನ್ನು ರಚಿಸುವ ಸದಸ್ಯರು ಸಮಿತಿಯನ್ನು ಸ್ಥಾಪಿಸಲಾದ ಪುರಸಭೆಯ ಪ್ರದೇಶವನ್ನು ಅವಲಂಬಿಸಿ ಬದಲಾಗುತ್ತಾರೆ. ಸಾವು ಅಥವಾ ಅಪಘಾತಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸ್ವೀಕರಿಸಿದ ಏಳು ದಿನಗಳ ಒಳಗೆ ಈ ಸಮಿತಿಗಳು ಸಭೆ ಸೇರಬೇಕೆಂದು ಆದೇಶಿಸಲಾಗಿದೆ. ನಂತರ, ಸಮಿತಿಯು ಪ್ರತಿ ಹದಿನೈದು ದಿನಗಳಿಗೊಮ್ಮೆ ಅಥವಾ ಅಗತ್ಯವಿದ್ದರೆ ಮುಂಚಿತವಾಗಿ ಸಭೆ ಸೇರಿ, ವಿಶೇಷವಾಗಿ ಮಳೆಗಾಲದ ಅವಧಿಯಲ್ಲಿ ನ್ಯಾಯಾಲಯದ ನಿರ್ದೇಶನಗಳ ಪ್ರಗತಿ, ಅನುಷ್ಠಾನ ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಸಮಿತಿಯು ಸ್ವಯಂಪ್ರೇರಿತವಾಗಿ ಅಥವಾ ಪರಿಹಾರಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಿದ ನಂತರ ಅಥವಾ ಪತ್ರಿಕಾ ವರದಿಗಳ ಆಧಾರದ ಮೇಲೆ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು ಎಂದು ನ್ಯಾಯಾಲಯವು ಸೇರಿಸಿತು.

ಪುರಸಭೆ, ಜಿಲ್ಲಾ ಅಥವಾ ಹೆದ್ದಾರಿ ಅಧಿಕಾರಿಗಳು ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇಂತಹ ಅಪಘಾತಗಳ ಬಗ್ಗೆ ಸ್ವೀಕರಿಸುವ ದೂರುಗಳನ್ನು ಸಮಿತಿಗಳಿಗೆ ರವಾನಿಸಬೇಕು. ಅಂತಹ ಯಾವುದೇ ಅಪಘಾತವನ್ನು 48 ಗಂಟೆಗಳ ಒಳಗೆ ಈ ಸಮಿತಿಗಳಿಗೆ ತಿಳಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ದೋಷಪೂರಿತ ಅಥವಾ ಗುಣಮಟ್ಟವಿಲ್ಲದ ರಸ್ತೆ ಕಾಮಗಾರಿಗಳನ್ನು ನಿರ್ವಹಿಸಿದ ತಪ್ಪಿತಸ್ಥ ಅಧಿಕಾರಿಗಳು, ಎಂಜಿನಿಯರ್‌ಗಳು ಅಥವಾ ಗುತ್ತಿಗೆದಾರರ ವಿರುದ್ಧ ಕಠಿಣ ಶಿಸ್ತು ಮತ್ತು ದಂಡ ವಿಧಿಸುವಂತೆ ನ್ಯಾಯಾಲಯವು ಆದೇಶಿಸಿದೆ.

ಯಾವುದೇ ಗುಂಡಿಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ, ಅದನ್ನು ನಲವತ್ತೆಂಟು ಗಂಟೆಗಳ ಒಳಗೆ ದುರಸ್ತಿ ಮಾಡಬೇಕು ಅಥವಾ ಸರಿಪಡಿಸಬೇಕು. ಹಾಗೆ ಮಾಡಲು ವಿಫಲವಾದರೆ ಅದು ಸಂಪೂರ್ಣ ನಿರ್ಲಕ್ಷ್ಯವಾಗುತ್ತದೆ. ಜವಾಬ್ದಾರಿಯುತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಇಲಾಖಾ ಕ್ರಮಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

TAGGED:Bombay High Courtmaharashtramumbaipotholeಬಾಂಬೆ ಹೈಕೋರ್ಟ್ಮಹಾರಾಷ್ಟ್ರರಸ್ತೆ ಗುಂಡಿಗಳು
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
10 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
12 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
1 hour ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
2 hours ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
3 hours ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?