– 15 ಪುಟಗಳ ವರದಿಯಲ್ಲಿ ಹಲವು ಅಂಶಗಳು ಬಹಿರಂಗ
ಅಹಮದಾಬಾದ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ (Air India Plane Crash) 260 ಜನ ಸಾವನ್ನಪ್ಪಿದ್ದರು. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ 15 ಪುಟಗಳ ವರದಿ ಬಹಿರಂಗಪಡಿಸಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್ಗಳ ಕಾಕ್ಪಿಟ್ (Cockpit) ಧ್ವನಿ ರೆಕಾರ್ಡಿಂಗ್ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ. ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?
ಟೇಕ್ ಆಫ್ ಆದ 3 ಸೆಕೆಂಡ್ಗಳ ನಂತರ, ಎರಡೂ ಇಂಜಿನ್ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್ಗಳು ರನ್ ನಿಂದ ಕಟ್ಆಫ್ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಂದು ಪೈಲಟ್ ʻನೀವು ಏಕೆ ಕಟ್ ಆಫ್ ಮಾಡಿದ್ರಿ?ʼ ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ʻನಾನು ಮಾಡಿಲ್ಲʼ ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕ ದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ. ʻWhy did you cutoff?ʼ ಮತ್ತು ʻI did not do so,ʼ ಎಂಬ ಮಾತುಗಳು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ
ಇನ್ನೂ ಫ್ಲೈಟ್ ಡೇಟಾ ರೆಕಾರ್ಡರ್ ಪ್ರಕಾರ, ಇಂಜಿನ್-1 ಅನ್ನು ಸ್ವಯಂಚಾಲಿತವಾಗಿ ಮರುಪ್ರಾರಂಭಿಸಲು ಪ್ರಯತ್ನಿಸಿ, ಅದು ಯಶಸ್ವಿಯಾಯಿತು. ಆದ್ರೆ ಇಂಜಿನ್ 2 ಅನ್ನು ಮರುಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಮ್ ಏರ್ ಟರ್ಬೈನ್ (RAT) ಅನ್ನು ತುರ್ತು ವಿದ್ಯುತ್ ಮೂಲವಾಗಿ ಬಳಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಇದರಿಂದ ಅಗತ್ಯ ಸಿಸ್ಟಮ್ಗಳಿಗೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿತು ಎಂದು ವರದಿ ತಿಳಿಸಿದೆ. RAT ಅಂದರೆ ವಿಮಾನದಲ್ಲಿನ ಎಲೆಕ್ಟ್ರಿಕಲ್ ವ್ಯವಸ್ಥೆ ಕೈಕೊಟ್ಟಾಗ ಉಪಯೋಗಿಸುವ ಒಂದು ಸಾಧನ. ಇದನ್ನೂ ಓದಿ: ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್
ಮೇ ಡೇ ಕೊನೆಯ ಸಂದೇಶ
ವಿಮಾನವು ಏರ್ಪೋರ್ಟ್ನ ಹೊರಗಿನ ಕಟ್ಟಡಗಳಿಗೆ ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡುಗಳ ಮೊದಲು, 08:09:05 ಯುಟಿಸಿ ಗೆ ತುರ್ತು ಕರೆ ಮಾಡಲಾಯಿತು. ಈ ವೇಳೆ ಮೇ ಡೇ ಎಂಬ ಸಂದೇಶವನ್ನು ಪೈಲಟ್ ಕೊಟ್ಟಿದ್ದರು.
ಕಳೆದ ಜುಲೈ 12ರಂದು ಅಹಮದಾಬಾದ್ ಏರ್ಪೋರ್ಟ್ನಲ್ಲಿ ನಡೆದ ದುರಂತದಲ್ಲಿ 260ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದನ್ನೂ ಓದಿ: ಮ್ಯಾನ್ಮಾರ್ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿಗೆ 23 ಮಂದಿ ಬಲಿ