ಆಟವಾಡುತ್ತಿದ್ದ ಮಕ್ಕಳ ಮೇಲೆ ಅಪಾಯಕಾರಿ ದ್ರಾವಣ ಎರಚಿದ ಬಾಲಕ!

Public TV
1 Min Read
TMK

ತುಮಕೂರು: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಅಪರಿಚಿತ ಬಾಲಕನೋರ್ವ ಅಪಾಯಕಾರಿ ದ್ರಾವಣ ಎರಚಿ ಪರಾರಿಯಾದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಸಹೋದರರಾದ 11 ವರ್ಷದ ದರ್ಶನ್ ಹಾಗೂ 4 ವರ್ಷದ ವಿನಯ್ ಗಾಯಗೊಂಡಿದ್ದಾರೆ. ತಿಪಟೂರು ನಗರದ ಕೆ.ಆರ್.ಬಡಾವಣೆಯ ಬಯಲು ರಂಗಮಂದಿರದಲ್ಲಿ ಇಬ್ಬರು ಸಹೋದರರು ಆಡುತ್ತಿದ್ದಾಗ ಸುಮಾರು 14 ವರ್ಷದ ಬಾಲಕನೋರ್ವ ಬಂದು ಇಲ್ಲಿ ಆಟವಾಡಬೇಡಿ ಎಂದು ಗದರಿಸಿ ಜಗಳ ಮಾಡಿದ್ದಾನೆ ಎನ್ನಲಾಗಿದೆ.

TMK ACID 1

ಬಳಿಕ ಕೈಯಲ್ಲಿದ್ದ ದ್ರಾವಣ ಇಬ್ಬರ ಮುಖಕ್ಕೆ ಎರಚಿ ಪರಾರಿಯಾಗಿದ್ದಾನೆ. ಕಳೆದ 15 ದಿನದ ಹಿಂದೆ ಇದೇ ಅಪರಿಚಿತ ಬಾಲಕ ಈ ಸಹೋದರರ ನಡುವೆ ಜಗಳ ಮಾಡಿದ್ದ ಎನ್ನಲಾಗಿದೆ. ಅದರ ಸೇಡು ತೀರಿಸಿಕೊಳ್ಳಲು ಇಂದು ಬಾಟಲಿಯಲ್ಲಿ ಅಪಾಯಕಾರಿ ದ್ರಾವಣ ತಂದು ಎರಚಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಘಟನೆಯ ಪರಿಣಾಮ ಮಕ್ಕಳ ಮುಖಕ್ಕೆ ಸುಟ್ಟ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಆ ದ್ರಾವಣವನ್ನು ಟಾಯ್ಲೆಟ್ ಕ್ಲೀನರ್ ಎಂದು ಶಂಕಿಸಲಾಗಿದ್ದು, ಪರಿಶೀಲನೆ ನಡೆದಿದೆ.

ತಿಪಟೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TMK ACID 5

TMK ACID 4

TMK ACID 3

TMK ACID 2

 

Share This Article
Leave a Comment

Leave a Reply

Your email address will not be published. Required fields are marked *