ಯಾದಗಿರಿ: ವಿದ್ಯುತ್ ತಂತಿ (Electric Wire) ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgir) ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ.
ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿದ ವೇಳೆ ಕುಟುಂಬಸ್ಥರು ಗಮನಿಸದ ಕಾರಣ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಬಗ್ಗೆ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್
Web Stories