Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

Latest

ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

Public TV
Last updated: September 13, 2025 5:05 pm
Public TV
Share
2 Min Read
aap protest
SHARE

ನವದೆಹಲಿ: ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಉಭಯ ದೇಶಗಳ ನಡುವಿನ ಬಿಕ್ಕಟ್ಟಿಗೆ ಕಾರಣವಾಗಿದೆ. ಘಟನೆಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದಾಳಿಯಲ್ಲಿ ಮೃತಪಟ್ಟ ತಮ್ಮ ಪುತ್ರರ ಬಗ್ಗೆ ಕುಟುಂಬಗಳು ಇನ್ನೂ ಶೋಕದಲ್ಲಿದ್ದಾವೆ. ಹಲವಾರು ರಾಜಕೀಯ ನಾಯಕರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಿ ಕ್ರಿಕೆಟಿಗರೊಂದಿಗೆ ಆಟವಾಡುವುದು ತಪ್ಪು ಎಂದು ಹೇಳಿದ್ದಾರೆ. ಈ ಹೊತ್ತಲ್ಲಿ ಏಷ್ಯಾ ಕಪ್‌ನಲ್ಲಿ ಎರಡೂ ತಂಡಗಳು ಆಡಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.‌ ಇದನ್ನೂ ಓದಿ: ಭಾರತ ತಂಡವನ್ನೂ ಸೋಲಿಸುವಷ್ಟು ಸಮರ್ಥರಿದ್ದೇವೆ – ಪಂದ್ಯಕ್ಕೂ ಮುನ್ನ ಪಾಕ್‌ ಕ್ಯಾಪ್ಟನ್‌ ವಾರ್ನಿಂಗ್‌

Asia Cup

ಭಾರತ-ಪಾಕ್‌ ಆಟಕ್ಕೆ ವಿರೋಧ ವ್ಯಕ್ತವಾಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಕೀಯ ನಾಯಕರು ಮತ್ತೊಮ್ಮೆ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ಒತ್ತಾಯಿಸಿದ್ದಾರೆ. ಟೀಕೆಗಳು ಹೆಚ್ಚಾಗಿ ವಿರೋಧ ಪಕ್ಷಗಳಿಂದಲೇ ಕೇಳಿಬರುತ್ತಿವೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂದ್ಯವನ್ನು ವಿರೋಧಿಸಿವೆ.

ಎಎಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಕಚೇರಿಯ ಹೊರಗೆ ಪಾಕಿಸ್ತಾನ ಲೇಬಲ್ ಹೊಂದಿರುವ ಪ್ರತಿಕೃತಿಯನ್ನು ದಹಿಸಿದ್ದಾರೆ. ಮಾಜಿ ಸಚಿವ ಸೌರಭ್ ಭಾರದ್ವಾಜ್ ಪಂದ್ಯದ ನೇರ ಪ್ರಸಾರ ಮಾಡುವ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ. ‘ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸುವ ಇಂತಹ ಅಸಹ್ಯಕರ ಜನರೊಂದಿಗೆ ಭಾರತ ಸರ್ಕಾರ ಕ್ರಿಕೆಟಿಗರನ್ನು ಆಡುವಂತೆ ಮಾಡುತ್ತಿದೆ. ಭಾರತ-ಪಾಕಿಸ್ತಾನ ಪಂದ್ಯಗಳನ್ನು ಪ್ರಸಾರ ಮಾಡುವ ದೆಹಲಿಯಲ್ಲಿರುವ ಎಲ್ಲಾ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ನಾವು ಬಹಿರಂಗಪಡಿಸುತ್ತೇವೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಮ್ಯಾಚ್‌ ಅಷ್ಟೇ; ಭಾರತ – ಪಾಕ್ ಪಂದ್ಯ ಬೇಡ ಎಂದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿದ ಬಗ್ಗೆ ಪ್ರಧಾನಿಯವರ ‘ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ನೆನಪಿಸಿಕೊಂಡು ಟ್ವೀಟ್‌ ಮಾಡಿದ್ದಾರೆ. ‘ರಕ್ತ ಮತ್ತು ಕ್ರಿಕೆಟ್’ ಹೇಗೆ ಒಟ್ಟಿಗೆ ಹೋಗುತ್ತದೆ ಎಂದು ಪ್ರಶ್ನಿಸಿದ್ದಾರೆ. ‘ಯುದ್ಧ ಮತ್ತು ಕ್ರಿಕೆಟ್ ಒಂದೇ ಸಮಯದಲ್ಲಿ ಹೇಗೆ ಇರಲು ಸಾಧ್ಯ? ಅವರು ದೇಶಭಕ್ತಿಯ ವ್ಯವಹಾರವನ್ನು ಮಾಡಿದ್ದಾರೆ. ಅವರಿಗೆ ಕೇವಲ ಹಣ ಬೇಕು’ ಎಂದು ಠಾಕ್ರೆ ಟೀಕಿಸಿದ್ದಾರೆ.

ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, ತಮ್ಮ ಗಂಡಂದಿರನ್ನು ಕಳೆದುಕೊಂಡ ಸಹೋದರಿಯರನ್ನು ನೋಡಿಕೊಳ್ಳದೆ ಕೆಲ ಜನರು ಹಣ ಸಂಪಾದಿಸುವುದರಲ್ಲಿ ನಿರತರಾಗಿದ್ದಾರೆ. ಇದು ವ್ಯವಹಾರ. ಭಾರತ-ಪಾಕಿಸ್ತಾನ ಪಂದ್ಯಗಳಲ್ಲಿ ಉತ್ಸಾಹವಿದೆ. ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನಮ್ಮ ಸಹೋದರಿಯರ ಸಿಂಧೂರ ಅಳಿಸಿದ್ದಾರೆಂದು ಅವರು ಬೇಸರಗೊಂಡಿಲ್ಲ. ಈ ಜನರು ಕ್ರಿಕೆಟ್ ಹೆಸರಿನಲ್ಲಿ ಹಣ ಸಂಪಾದಿಸುವಲ್ಲಿ ನಿರತರಾಗಿದ್ದಾರೆ. ನಮ್ಮ ಸಹೋದರಿಯರ ಕುಟುಂಬಗಳು ನಾಶವಾದವು. ಆದರೆ, ಇವರು ಪಾಕಿಸ್ತಾನಿಗಳೊಂದಿಗೆ ಕ್ರಿಕೆಟ್ ಆಡಲು ಹೊರಟಿದ್ದಾರೆ. ಸರ್ಕಾರ ನಾಚಿಕೆಪಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

TAGGED:aapAsia Cup 2025cricketIndia vs Pakistanಎಎಪಿಏಷ್ಯಾ ಕಪ್‌ 2025ಕ್ರಿಕೆಟ್ಭಾರತ vs ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
7 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
23 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
40 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
51 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?