ಬೈಕಿನಲ್ಲಿದ್ದ ಬಾಲಕರಿಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ – ಓರ್ವ ಸಾವು, 20 ಮಂದಿಗೆ ಗಾಯ

Public TV
1 Min Read
bij accident

ವಿಜಯಪುರ: ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಹತ್ತಿರ ನಡೆದಿದೆ. ಈ ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕ ಸಾವನ್ನಪ್ಪಿದ್ದು, ಬಸಿನಲ್ಲಿದ್ದ 20 ಜನರಿಗೆ ಗಾಯಗಳಾಗಿವೆ.

ವಿಜಯಪುರದಿಂದ ತಾಳಿಕೋಟೆಗೆ ಆಗಮಿಸುತ್ತಿದ್ದ ಕೆಎ 28 ಎಫ್ 2087 ಬಸ್, ರಸ್ತೆ ಮಧ್ಯೆ ಬೈಕಿನಲ್ಲಿ ಬಂದ ಇಬ್ಬರು ಬಾಲಕರನ್ನು ತಪ್ಪಿಸಲು ಹೋಗಿ ಈ ಅನಾಹುತ ಸಂಭವಿಸಿದೆ. ಬಸ್ಸಿನ ಚಕ್ರದೊಳಗೆ ಬೈಕ್ ಸಿಲುಕಿಕೊಂಡ ಕಾರಣ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

bij accident 3

ಮೃತ ಬಾಲಕನನ್ನು ಬೀರಣ್ಣ ಪರದಾನಿ ಬೀರಗುಂಡ(15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ಸಹೋದರರಾಗಿದ್ದು, ಡವಳಗಿ ಗ್ರಾಮದಿಂದ ಕೊಣ್ಣೂರ ಗ್ರಾಮದಲ್ಲಿರುವ ತಮ್ಮ ಸಹೋದರಿಯನ್ನು ಕರೆದುಕೊಂಡು ಹೋಗಲು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸದ್ಯ ಗಾಯಾಳುಗಳನ್ನು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹೊಸ ಮೋಟಾರು ವಾಹನ ಕಾಯ್ದೆ ಪ್ರಕಾರ ಅಪ್ರಾಪ್ತರು ಚಲಾಯಿಸಿದ್ದರೆ 25,000 ದಂಡ ಹಾಗೂ ಪೋಷಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *