ಮಂಡ್ಯ: ರಸ್ತೆ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡ ಮಗನ ಅಂಗಾಂಗ ದಾನ (Organs Donate) ಮಾಡಿ ಪೋಷಕರು ಸಮಾಜಕ್ಕೆ ಮಾದರಿಯಾದ ಘಟನೆ ಮಂಡ್ಯದಲ್ಲಿ ನಡೆದಿದೆ.
ಜೂ. 15ರಂದು ಬೈಕ್ ಅಪಘಾತದಲ್ಲಿ ಚಿಕ್ಕ ಮಂಡ್ಯದ (Mandya) ಯುವಕ ಗಿರೀಶ್ (32) ಗಂಭೀರ ಗಾಯಗೊಂಡಿದ್ದ. ಬಳಿಕ ಆತನನ್ನು ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಮೆದಳು ನಿಷ್ಕ್ರಿಯಗೊಂಡಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕಿಡ್ನಾಪ್ ಕಥೆ ಕಟ್ಟಿ ಸ್ನೆಹಿತನೊಂದಿಗೆ ಅಪ್ರಾಪ್ತೆ ಪರಾರಿ
ಈ ಸುದ್ದಿಯನ್ನು ಕೇಳುತ್ತಿದ್ದಂತೆ ಮಗನ ಶವಕ್ಕೆ ಮುತ್ತಿಟ್ಟು ತಾಯಿ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಮಗನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ತಂದೆ-ತಾಯಿ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: 80 ಅಡಿಗೆ ತಲುಪಿದ ಕೆಆರ್ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ