Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾವಿನಲ್ಲೂ ಸಾರ್ಥಕತೆ ಮೆರೆದ ವಧು-ಕಣ್ಣು, ಹೃದಯ, ಕಿಡ್ನಿ ದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾವಿನಲ್ಲೂ ಸಾರ್ಥಕತೆ ಮೆರೆದ ವಧು-ಕಣ್ಣು, ಹೃದಯ, ಕಿಡ್ನಿ ದಾನ

Districts

ಸಾವಿನಲ್ಲೂ ಸಾರ್ಥಕತೆ ಮೆರೆದ ವಧು-ಕಣ್ಣು, ಹೃದಯ, ಕಿಡ್ನಿ ದಾನ

Public TV
Last updated: February 12, 2022 4:57 pm
Public TV
Share
2 Min Read
kolar
SHARE

ಕೋಲಾರ: ವಧು ತನ್ನ ಜೀವನದಲ್ಲಿ ನೂರಾರು ಕನಸುಗಳನ್ನ ಹೊತ್ತು ಹಸಮಣೆ ಏರಲು ಸಿದ್ದವಾಗಿದ್ದಳು. ಕುಟುಂಬದಲ್ಲೆಲ್ಲಾ ಮದುವೆಯ ಸಂಭ್ರಮ, ಆರತಕ್ಷತೆಗೆ ನೂರಾರು ಜನರು ಮದುಮಗಳಿಗೆ ಶುಭ ಹಾರೈಸುತ್ತಿದ್ದರು. ಹೀಗಿರುವಾಗ ವಿಧಿಯಾಟವೇ ಬೇರೆಯಾಗಿ ಮದುವೆ ಮನೆಗೆ ಸೂತಕದ ಛಾಯ ಆವರಿಸಿತ್ತು. ಹೊಸ ಜೀವನಕ್ಕೆ ಕಾಲಿಟ್ಟು ಬದುಕ ಬೇಕಿದ್ದ ಮಗಳನ್ನು ಕಳೆದು ಕೊಂಡ ಕುಟುಂಬಸ್ಥರು ಕುಟುಂಬದ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕು ಕೊಡಚೆರವು ಗ್ರಾಮದ ಕೃಷಿಕ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ರಾಮಪ್ಪ ಮತ್ತು ಆಕ್ಕೆಮ್ಮ ಅವರ ಏಕೈಕ ಪುತ್ರಿಯಾದ ಚೈತ್ರಾಳಿಗೆ ಮದುವೆ ನಿಶ್ಚಯವಾಗಿತ್ತು, ಎಂಎಸ್ಸಿ ಬಯೋಕೆಮೆಸ್ಟ್ರಿ ಮಾಡಿ ಕೈವಾರ ಬಳಿಯ ಬೈರವೇಶ್ವರ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ, ಚೈತ್ರಾಗೆ ಹೊಸಕೋಟೆಯ ಯುವಕನೊಂದಿಗೆ ಫೆಬ್ರವರಿ 6 ಮತ್ತು 7 ರಂದು ಶ್ರೀನಿವಾಸಪುರದ ಮಾರುತಿ ಸಭಾ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು.

bride Kolara

ನಡೆದಿದ್ದೇನು?: ಫೆಬ್ರವರಿ-6 ರಂದು ಸಂಜೆ 6 ಗಂಟೆಗೆ ಆರತಕ್ಷತೆಗೆ ಸಿದ್ದವಾಗಿ ವರನ ಜೊತೆ ಆಗಮಿಸಿದ ಚೈತ್ರಾ ರಾತ್ರಿ-9 ಗಂಟೆಯವರೆಗೂ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿದ್ದರು. ಆದರೆ 9 ಗಂಟೆ ಸುಮಾರಿಗೆ ದಿಢೀರನೇ ಆರತಕ್ಷತೆ ವೇದಿಕೆ ಮೇಲೆಯೆ ಚೈತ್ರಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಮದುವೆ ಕಾರ್ಯಕ್ರಮದಲ್ಲೇ ಇದ್ದ ವೈದ್ಯರುಗಳು ಚೈತ್ರಾಳನ್ನು ಶ್ರೀನಿವಾಸಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದ್ದಾರೆ. ಅಲ್ಲಿಂದ ನೇರವಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬ್ರೈನ್ ಸ್ಟ್ರೋಕ್ ಆಗಿದೆ, ಅನ್ನೋದು ತಿಳಿದು ನಂತರ ಸತತ ಐದು ದಿನಗಳ ಕಾಲ ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ವೈದ್ಯರು ಬ್ರೈನ್ ಡೆಡ್ ಎಂದು ತಿಳಿಸಿದ್ದಾರೆ.

ಬ್ರೈನ್ ಡೆಡ್ ಆಗಿದ್ದು, ಚೈತ್ರಾ ಚಿಕಿತ್ಸೆಗೆ ಸ್ಪಂದಿಸದೆ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಾ ಹೋದ ಮೇಲೆ ಬಹುತೇಕ ಚೈತ್ರಾ ಬದುಕೋದು ಅನುಮಾನ ಎಂದು ವೈದ್ಯರ ಸಲಹೆ ನೀಡಿದರು. ಕುಟುಂಬಸ್ಥರು ಚೈತ್ರಾಳ ಅಂಗಾಗಧಾನ ಮಾಡಲು ನಿರ್ಧಾರ ಮಾಡಿದ್ದಾರೆ, ಹೃದಯ ಒಡೆದು ಹೋಗುವಷ್ಟು ದು:ಖ ಆವರಿಸಿದ್ದರೂ, ಸಮಾಧಾನ ಮಾಡಿಕೊಳ್ಳಲಾಗಷ್ಟು ನೋವಿನಲ್ಲೂ ಗಟ್ಟಿ ಮನಸ್ಸು ಮಾಡಿದ ಕುಟುಂಬಸ್ಥರು ಚೈತ್ರಾಳ ಕಣ್ಣು, ಹೃದಯ, ಮತ್ತು ಕಿಡ್ನಿಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

bride Kolara 1

ಹೊಸ ಜೀವನಕ್ಕೆ ಕಾಲಿಟ್ಟು ಬದುಕ ಬೇಕಿದ್ದ ಮಗಳನ್ನು ಕಳೆದು ಕೊಂಡ ಕುಟುಂಬಸ್ಥರು ಕೊನೆ ಪಕ್ಷ ಮಗಳ ನೆನಪಿನಲ್ಲಿ ಈ ರೀತಿ ಅಂಗಾಂಗ ದಾನದಿಂದ ನಾಲ್ಕಾರು ಜನರ ಜೀವ ಉಳಿದಿದೆ. ನಮಗೂ ನೆಮ್ಮದಿ ನಮ್ಮ ಮಗಳು ಸಾಯೋದಿಲ್ಲ ಇನ್ನೊಬರ ಜೀವ ಉಳಿಸಿ ಬದುಕುತ್ತಾಳೆ ಎಂದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಈ ಕೃಷಿಕ ಕುಟುಂಬಸ್ಥರ ಅಂಗಾಂಗ ದಾನ ವಿಚಾರವನ್ನು ಆರೋಗ್ಯ ಸಚಿವ ಸುಧಾಕರ್ ಕೂಡಾ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡುವ ಮೂಲಕ ಈ ಕುಟುಂಬಸ್ಥರು ನೋವಿನಲ್ಲಿ ಮಾಡಿದ ಸಾರ್ಥಕ ಕೆಲಸವನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

ಸಂಭ್ರಮದ ಮನೆ ಸೂತಕದ ಮನೆಯಾಗಿ ಇಡೀ ಕುಟುಂಬಕ್ಕೆ ಆಘಾತ ಬಂದೆರಗಿದರೂ ನೋವಿನಲ್ಲೂ ಸಾರ್ಥಕತೆ ಮೆರೆದು ಚೈತ್ರಾ ಕುಟುಂಬ ತೆಗೆದುಕೊಂಡ ನಿರ್ಧಾರ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಸಂಕಷ್ಟದಲ್ಲಿರುವ ಹಲವರಿಗೆ ಮರು ಜೀವ ಕೊಟ್ಟ ಚೈತ್ರಾ ನೆನಪು ಸದಾ ಹಸಿರಾಗಿರುತ್ತದೆ ಅನ್ನೋದು ವಿಶೇಷವಾಗಿದೆ.

TAGGED:brain deadbrideKolarorgan donationಆಸ್ಪತ್ರೆಕೋಲಾರಚೈತ್ರಾಮದುವೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
30 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
43 minutes ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
1 hour ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
1 hour ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
1 hour ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?