ಮದುವೆ ದಿನವೇ ಕಲ್ಯಾಣ ಮಂಟಪದಿಂದ ವಧು ಸಿನಿಮೀಯ ರೀತಿ ಪರಾರಿ!

Public TV
0 Min Read
mys girl run

ಮೈಸೂರು: ಮದುವೆಯ ದಿನದಂದು ಕಲ್ಯಾಣ ಮಂಟಪದಿಂದ ಮಧುಮಗಳು ಪರಾರಿಯಾಗಿದ್ದಾಳೆ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಿಂದ ಮಧುಮಗಳು ಸಿನಿಮೀಯಾವಾಗಿ ಪರಾರಿಯಾಗಿದ್ದಾಳೆ. ಎಚ್.ಡಿ ಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದ ಕೃಷ್ಣ ನಾಯಕ್ ಮತ್ತು ತಾಯಮ್ಮ ಎಂಬುವವರ ಪುತ್ರಿ ಶ್ವೇತಾ (ಹೆಸರು ಬದಲಾಯಿಸಲಾಗಿದೆ) ಕಲ್ಯಾಣ ಮಂಟಪದಿಂದ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಬಂದಿದೆ.

ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ನಾರಾಯಣ ಜೊತೆ ಶ್ವೇತಾ ವಿವಾಹ ಇಂದು ಅದ್ಧೂರಿಯಾಗಿ ನಡೆಯಬೇಕಿತ್ತು. ರಾತ್ರಿ ವಿವಾಹದ ಸಕಲ ಸಿದ್ಧತೆ ನಡೆದಿತ್ತು. ಇಂದು ಬೆಳಿಗ್ಗೆ ವಧು ನಾಪತ್ತೆಯಾಗಿದ್ದು, ಶ್ವೇತಾ ತನ್ನ ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ.

Share This Article
Leave a Comment

Leave a Reply

Your email address will not be published. Required fields are marked *