Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

Districts

ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

Public TV
Last updated: November 6, 2022 3:27 pm
Public TV
Share
2 Min Read
LEPOERD 1
SHARE

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಚಿರತೆ (Leopard) ಹಾವಳಿ ಮಿತಿಮೀರಿದೆ. ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ ಆತಂಕ ಸೃಷ್ಟಿಸುತ್ತಿದೆ. ಒಂದು ಕಡೆ ಕುರಿ-ಮೇಕೆ ಬೇಟೆಗಾಗಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಕೈಗೆ ಲಾಕ್ ಆದ್ರೆ, ಇತ್ತ ಕಳೆದ ಹದಿನೈದು ದಿನದಿಂದ ಕೆಆರ್‌ಎಸ್‌ (KRS) ಬೃಂದಾವನದಲ್ಲಿ ಕಣ್ಣಾಮುಚ್ಚಾಲೆ ಆಡಿಸುತ್ತಿರುವ ಚಿರತೆ ಪ್ರವಾಸಿಗರಿಗೆ ಆತಂಕ ಮೂಡಿಸಿದೆ.

LEPOERD

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುಂದನಗುಪ್ಪೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು, ಜಾನುವಾರುಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸಿತ್ತು. ಗ್ರಾಮಸ್ಥರು ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ರು. ಆದ್ರೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕುಂದನಗುಪ್ಪೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆ ಕಷ್ಣಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದೆ. ಕೊಟ್ಟಿಗೆಯಲ್ಲಿ 15ಕ್ಕೂ ಹೆಚ್ಚು ಕುರಿ-ಮೇಕೆ, ಒಂದು ಕರು, ಕೋಳಿ ಕೂಡ ಇತ್ತು. ಬೇಟೆಗೆ ನುಗ್ಗಿದ ಚಿರತೆಗೆ ಟಗರು ಗುದ್ದಿದ್ದು, ಚಿರತೆ ಗಾಬರಿಗೆ ಒಳಗಾಗಿದೆ. ಕುರಿ-ಮೇಕೆ ಚೀರಾಟ ಕೇಳಿ ಹೊರಬಂದ ಕೃಷ್ಣಪ್ಪ ಕುಟುಂಬ ಕೊಟ್ಟಿಗೆಯಲ್ಲಿ ಚಿರತೆ ಕಂಡು ದಿಗ್ಭ್ರಮೆಗೊಂಡಿದ್ದಾರೆ. ಚಿರತೆ ಬೇಟೆಗೆ ನುಗ್ಗಿ ಕೊಟ್ಟಿಗೆ ಸುತ್ತ ಹಾಕಿದ್ದ ಕಬ್ಬಿಣದ ಗೂಡಿನಿಂದ ಹೊರಬರಲಾಗದೆ ಕುರಿ ಮೇಕೆಯೊಂದಿಗೆ ಹಲವು ಗಂಟೆ ಕಳೆದಿದೆ. ನಂತರ ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಡಿಎಫ್‍ಓ ವೃತ್ತಾರನ್ ಹಾಗೂ ಹತ್ತಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಪ್ಲಾನ್ ರೂಪಿಸಿದ್ರು. ಪ್ಲಾನ್‍ನಂತೆ ಚಿರತೆ ಜನರನ್ನು ನೋಡಿ ಗಾಬರಿಯಾಗದಂತೆ ಕೊಟ್ಟಿಯನ್ನು ಟಾರ್ಪಾಲಿನಲ್ಲಿ ಮುಚ್ಚಿದ್ದು, ನಂತರ ಮೈಸೂರಿನಿಂದ ಅರವಳಿಕೆ ತಜ್ಞರನ್ನು ಕರೆಸಿ, ಚಿರತೆಗೆ ಅರವಳಿಕೆ ಮದ್ದು ನೀಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಿರತೆಯನ್ನು ಸೆರೆಹಿಡಿದ್ರು. ಇದನ್ನೂ ಓದಿ: ಬರೀ ಒಂದು ಕಾಲಲ್ಲ, ಆತನ ಮೈಯೆಲ್ಲ ಕೊಳೆತು ಹೋಗಬೇಕು – ಆ್ಯಸಿಡ್ ಸಂತ್ರಸ್ತೆ

KRS Brindavan

ಚಿರತೆ ಸೆರೆಯಿಂದ ಕುಂದನಗುಪ್ಪೆ ಗ್ರಾಮಸ್ಥರೇನೋ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ ಚಿರತೆ ಆತಂಕ ಮುಂದುವರಿದಿದೆ. ಕಳೆದ ಹದಿನೈದು ದಿನದಿಂದಲು ಚಿರತೆ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದು, ಪ್ರವಾಸಿಗರಲ್ಲಿ ಆತಂಕದ ಜೊತೆಗೆ ಬೇಸರ ಮೂಡಿಸಿದೆ. ಅಕ್ಟೋಬರ್ 22 ರಂದು ಕೆಆರ್‌ಎಸ್‌ ಡ್ಯಾಂ ಪಕ್ಕದಲ್ಲಿ ಚಿರತೆ ಸಿಬ್ಬಂದಿ ಕಣ್ಣಿಗೆ ಕಾಣಿಸಿತ್ತು. ಅಂದು ಬೋನ್ (Cage) ಇಟ್ಟು, ಒಂದು ದಿನ ಕಾರ್ಯಾಚರಣೆ ನಡೆಸಿ ಚಿರತೆ ಸಿಗದಿದ್ದಕ್ಕೆ ಸುಮ್ಮನಾಗಿದ್ರು. ಯಾವಾಗ ಮತ್ತೆ ಅ.28 ರಂದು ಬೃಂದಾವನದ ಉತ್ತರ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷವಾಗಿ, ಸಿಸಿಟಿವಿಯಲ್ಲಿ (CCTV) ಚಿರತೆಯ ಚಲನವಲನ ಸೆರೆಯಾಯ್ತೋ ಅಂದಿನಿಂದ ಇಂದಿನವರೆಗೂ ಉತ್ತರ ಬೃಂದಾವನ ಬಂದ್ ಮಾಡಿ, ಬೋನ್ ಇಟ್ಟು ಜವಬ್ದಾರಿಯಿಂದ ಕೈತೊಳೆದುಕೊಂಡಿದೆ. ಆದ್ರೆ ಇದು ಪ್ರವಾಸಿಗರ ಬೇಸರಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

KRS Brindavan 3

ಬೃಂದಾವನದ ಪ್ರಮುಖ ಆಕರ್ಷಣೆ ಅಂದರೇ ಅದು ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿ. ಆ ಸೌಂದರ್ಯ ಸವಿಯಬೇಕೆಂದು ರಾಜ್ಯವಲ್ಲದೆ ಹೊರರಾಜ್ಯದಿಂದಲು ಬಹಳಷ್ಟು ಜನ ಬರ್ತಾರೆ. ಆದ್ರೆ ಉತ್ತರ ಬೃಂದಾವನ ಬಂದ್ ಆಗಿರುವುದು ಬೇಸರ ಆಗುತ್ತಿದೆ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲ ಆರ್ಥಿಕ ಹೊಡೆತ ಉಂಟುಮಾಡಿದೆ. ಅಲ್ಲದೇ ಟಿಕೆಟ್ ದರವನ್ನು ಕಡಿಮೆ ಮಾಡದೇ, ಚಿರತೆ ಸೆರೆಹಿಡಿಯದೆ ನಿರ್ಲಕ್ಷ್ಯ ಮಾಡ್ತಿರುವ ಕಾವೇರಿ ನೀರಾವರಿ ನಿಗಮ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Brindavan Gardenkrsleopardmandyaಕೆಆರ್‍ಎಸ್ಚಿರತೆಟಗರುಮಂಡ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
15 minutes ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
17 minutes ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
38 minutes ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
1 hour ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?