ಭೇಟಿಗೆ ಬರುವವರು ಹಾರ, ಪೇಟ ತರಬೇಡಿ, ನೋಟ್ ಬುಕ್ಸ್ ತನ್ನಿ: ಸಚಿವರ ಮನವಿ

Public TV
1 Min Read
H.C Mahadevappa

ಮೈಸೂರು: ತಮ್ಮನ್ನು ಭೇಟಿ ಮಾಡಲು ಬರುವಾಗ ಹಾರ ಹಾಗೂ ಪೇಟಗಳನ್ನು ತರಬೇಡಿ. ಅದರ ಬದಲು 200 ಪುಟಗಳ ನೋಟ್ ಬುಕ್ (Book) ತನ್ನಿ ಎಂದು ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr H.C Mahadevappa) ಮನವಿ ಮಾಡಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಪೇಟ ಹಾಗೂ ಶಾಲಿಗೆ ದುಂದು ವೆಚ್ಚ ಮಾಡಬೇಡಿ. ಅದೇ ಹಣದಲ್ಲಿ ನೋಟ್ ಬುಕ್ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ತೆಗೆದುಕೊಂಡು ಬನ್ನಿ. ಬಳಿಕ ಈ ಪುಸ್ತಕಗಳನ್ನು ಹಾಗೂ ಸಾಮಗ್ರಿಗಳನ್ನು ಮಕ್ಕಳಿಗೆ ಹಂಚಲಾಗುವುದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

ಈ ಮೂಲಕ ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಸಚಿವ ಮಹದೇವಪ್ಪ ಮನವಿ ಮಾಡಿದ್ದಾರೆ. ಇದರಿಂದಾಗಿ ನೂತನ ಬದಲಾವಣೆಗೆ ಸಚಿವರು ಮುಂದಾಗಿದ್ದಾರೆ. ಅಲ್ಲದೇ ತಮಗೆ ನೀಡುವ ಶಿಕ್ಷಣ ಸಾಮಾಗ್ರಿಗಳನ್ನು ಶಾಲಾ ಮಕ್ಕಳಿಗೆ ನೀಡುವ ಭರವಸೆ ನೀಡಿದ್ದಾರೆ. ಸಚಿವರ ಈ ನಡೆಯಿಂದ ಉಳಿದವರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article