ಅಣ್ಣ ಬಹಳ ಕಷ್ಟಪಟ್ಟಿದ್ದಾನೆ, ನಾವ್ಯಾವತ್ತೂ ವಿಧಾನಸೌಧಕ್ಕೆ ಹೋಗಲ್ಲ: ಸಿದ್ದರಾಮಯ್ಯ ಸಹೋದರ

Public TV
1 Min Read
SIDDARAMAIAH BROTHER SIDDEGOWDA 1

ಮೈಸೂರು: ಈ ಬಾರಿಯೂ ನಮ್ಮ ಅಣ್ಣ ಬಹಳ ಒಳ್ಳೆಯ ಆಡಳಿತ ಮಾಡುತ್ತಾರೆ. ನಮ್ಮ ಅಣ್ಣ ಬಡವರ ಪರ. ನಾವು ಕುಟುಂಬದವರು ಯಾವತ್ತೂ ನಮ್ಮ ಅಣ್ಣನ ಆಡಳಿತದ ಹತ್ತಿರ ಹೋಗಲ್ಲ ಎಂದು ಸಿದ್ದರಾಮಯ್ಯ (Siddaramaiah) ಸಹೋದರ ಸಿದ್ದೇಗೌಡ (Siddegowda)ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಮ್ಮ ಅಣ್ಣ ಈ ಸ್ಥಾನಕ್ಕೆ ಬರಲು ಬಹಳ ಕಷ್ಟಪಟ್ಟಿದ್ದಾನೆ. ನಾನು ಅನಕ್ಷರಸ್ಥ. ನಾನು ಏನೂ ಅಂತಾ ಅವನ ಬಳಿ ಹೋಗಿ ಕೇಳಲಿ. ನಾವು ಸಹೋದರರು ಯಾವತ್ತೂ ಫೋನ್ ನಲ್ಲೂ ಮಾತಾಡಲ್ಲ ಎಂದರು. ಇದನ್ನೂ ಓದಿ: Exclusive – ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ

SIDDARAMAIAH BROTHER SIDDEGOWDA

ಏನಾದ್ರೂ ಇದ್ದರೆ ಮನೆಗೆ ಹೋಗಿ ಮಾತಾಡಿ ಬರ್ತಿವಿ. ವಿಧಾನಸೌಧ (Vidhanasoudha) ಕ್ಕೆ ಹೋಗೋ ಅಭ್ಯಾಸವೂ ನಮಗೆ ಇಲ್ಲ ಎಂದು ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಹೇಳಿದ್ದಾರೆ.

 ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ (Chief Minister) ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ.

Share This Article