ಬೀದರ್: ತಂಗಿಯನ್ನ (Sister) ಪ್ರೀತಿಸಿದ್ದಕ್ಕೆ ಯುವಕನನ್ನ ಸಹೋದರರು ಬರ್ಬರವಾಗಿ ಹತ್ಯೆಗೈದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.
ಪ್ರಶಾಂತ ಬಿರಾದರ್ (25) ಬರ್ಬರವಾಗಿ ಕೊಲೆಯಾದ ಮೃತ ಯುವಕ. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ನಡುವೆ ಕೆಲ ವರ್ಷಗಳಿಂದ ಪ್ರೇಮಾಂಕುರವಾಗಿತ್ತು. ಇದನ್ನೂ ಓದಿ: ಯುಗಾದಿ, ರಾಮನವಮಿ ಹಲಾಲ್ ಮುಕ್ತ ಆಗಲಿ: ಪ್ರಮೋದ್ ಮುತಾಲಿಕ್
ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಮೃತ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದ್ದು, ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಬರ್ಬರವಾಗಿ ಹತ್ಯೆಗೈದಿದ್ದಾರೆ. ಕೊಲೆಯಾದ ಯುವಕನ ಮೃತದೇಹವನ್ನು ಬಸವಕಲ್ಯಾಣ ಶವಗಾರಕ್ಕೆ ತಂದಿದ್ದು, ಶವಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಬಿಬಿಎಂಪಿ ಬಜೆಟ್ ಮಂಡನೆ – 19,927 ಕೋಟಿ ಬೃಹತ್ ಯೋಜನೆಗಳ ಘೋಷಣೆ
ಸ್ಥಳಕ್ಕೆ ಡಿವೈಎಸ್ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಎಂಬ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ. ಇದನ್ನೂ ಓದಿ: ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ – ಮೊಸಳೆಗಳಿರುವ ನದಿಯಲ್ಲಿ 2 ದಿನ ಕಾರ್ಯಾಚರಣೆ ನಡೆಸಿ ವಿದ್ಯುತ್ ಪೂರೈಸಿದ ಹೆಸ್ಕಾಂ ಸಿಬ್ಬಂದಿ