Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಡುಗಿಗೆ ಮೆಸೇಜ್ ಮಾಡಿದನೆಂದು ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ – ಅರೆಬೆತ್ತಲೆ ಮೆರವಣಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಹುಡುಗಿಗೆ ಮೆಸೇಜ್ ಮಾಡಿದನೆಂದು ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ – ಅರೆಬೆತ್ತಲೆ ಮೆರವಣಿಗೆ

Davanagere

ಹುಡುಗಿಗೆ ಮೆಸೇಜ್ ಮಾಡಿದನೆಂದು ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ – ಅರೆಬೆತ್ತಲೆ ಮೆರವಣಿಗೆ

Public TV
Last updated: May 16, 2022 10:23 pm
Public TV
Share
2 Min Read
DVG BOY
SHARE

ದಾವಣಗೆರೆ: ಯುವತಿಯೊಬ್ಬಳಿಗೆ ಇನ್‌ಸ್ಟಾಗ್ರಾಮ್‌ನಲ್ಲಿ  ಮೆಸೇಜ್ ಮಾಡಿದ ಎನ್ನುವ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಹೊಡೆದು, ಅರೆಬೆತ್ತಲೆಯಾಗಿ ಗ್ರಾಮದ ತುಂಬಾ ಮೆರವಣಿಗೆ ಮಾಡಿದ ಅಮಾನುಷ ಘಟನೆ ದಾವಣಗೆರೆ ಜಿಲ್ಲೆ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.

mobile

ಗಣೇಶ್ ಹಲ್ಲೆಗೊಳಗಾದ ಯುವಕ. ಗಣೇಶ್ ತುಮಕೂರಿನ ಕಾಲೇಜ್ ಒಂದರಲ್ಲಿ ಮೊದಲನೇ ವರ್ಷದ ಬಿ.ಎ ಪದವಿ ಓದುತ್ತಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಅದೇ ಅತ್ತಿಗೇರೆ ಗ್ರಾಮದ ಯುವತಿ ಪರಿಚಯವಾಗಿ ಪರಸ್ಪರ ಮೆಸೇಜ್ ಮಾಡಿದ್ದಾರೆ. ಆಕೆ ಪಿಯುಸಿ ಓದುತ್ತಿದ್ದೇನೆ ಎಂದು ಹೇಳಿದ್ದಾಳೆ. ಅಲ್ಲದೆ ಕೆಲ ದಿನಗಳ ಕಾಲ ಪರಸ್ಪರ ಮೆಸೇಜ್ ಮಾಡಿದ ನಂತರ ತನ್ನ ಸ್ವಂತ ಗ್ರಾಮದ ಯುವತಿ ಎಂದು ಗೊತ್ತಾದಾಗ ಮೇಲ್ಜಾತಿಯ ಯುವತಿ ಜೊತೆ ನಾನು ಮೆಸೇಜ್ ಮಾಡುವುದು ಸರಿ ಅಲ್ಲ ಎಂದು ಯುವಕ ತಿಳಿದು ಸುಮ್ಮನಾಗಿದ್ದಾನೆ.  ಆ ಬಳಿಕ ಕಳೆದ ನಾಲ್ಕು ದಿನದ ಹಿಂದೆ ಅತ್ತಿಗೆರೆ ರೇಣುಕಮ್ಮ ದಂಪತಿ ಪುತ್ರ ಗಣೇಶ್ ಅದೇ ಗ್ರಾಮದ ಯುವತಿಗೆ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಹುಡುಗಿಯ ತಂದೆ ಸೇರಿದಂತೆ ಸಾರ್ವಜನಿಕರು ಹುಡುಗನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಗಣೇಶ್ ಮನೆ ಬಳಿ ಬಂದ ಕೆಲ ಯುವಕರು ಜಮೀನಿನಲ್ಲಿ ಕರೆಂಟ್ ರಿಪೇರಿ ಮಾಡುವ ಕೆಲಸವಿದೆ ಎಂದು ಕರೆದೊಯ್ದಿದ್ದಾರೆ. ಬಳಿಕ ಹುಡುಗಿಯ ಸಂಬಂಧಿಕರು ಹುಡುಗನನ್ನು ಸೀದಾ ಯುವತಿಯ ಮನೆಗೆ ಕರೆಸಿ ಮೇಸೆಜ್ ಮಾಡಿರುವ ಬಗ್ಗೆ ಕೇಳಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಮನಸೋ ಇಚ್ಛೆ ಥಳಿಸಿದ್ದಾರೆ. ನಂತರ ಗ್ರಾಮದಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ ಊರಿನ ದೇವಸ್ಥಾನ ಬಳಿ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಇದನ್ನೂ ಓದಿ: ಮೊಬೈಲ್ ಜಾಸ್ತಿ ನೋಡಬೇಡ ಅಂತ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

DVG POLICE STATION

ದೇವಸ್ಥಾನದ ಬಳಿ ಕಂಬಕ್ಕೆ ಕಟ್ಟಿಹಾಕಿದ್ದಾರೆ ಎಂಬ ವಿಷಯ ಗೊತ್ತಾದ ತಕ್ಷಣ ಗಣೇಶ್‍ನ ತಾಯಿ ರೇಣುಕಮ್ಮ ದೇವಸ್ಥಾನದ ಬಳಿ ಹೋಗಿ ಮಗನಿಗೆ ಹೊಡೆಯುವುದನ್ನು ನೋಡಲಾಗದೇ ಹೊಡಿಬೇಡಿ ಎಂದು ಅತ್ತು ಬೇಡಿಕೊಂಡರು. ಈ ವೇಳೆ ನೀಚರು ರೇಣುಕಮ್ಮನನ್ನು ಎಳೆದು ಬೀಸಾಕಿದ್ದಾರೆ. ಮಗನ ಬೆನ್ನಿಗೆ ತಾಯಿ ನಿಂತರು ಯಾರು ಆ ತಾಯಿ ಕೂಗು ಕೇಳಿಸಿಕೊಂಡಿಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಪೊಲೀಸ್ ಠಾಣೆಗೆ ಒಪ್ಪಿಸಿ ಎಂದು ಪರಿಪರಿಯಾಗಿ ಮನವಿ ಮಾಡಿದ್ರು ಕೇಳಿಸಿಕೊಳ್ಳದೇ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಮಗಳಿಗಾಗಿ 36 ವರ್ಷ ಪುರುಷನ ವೇಷದಲ್ಲಿದ್ದ ತಾಯಿ

ತೀವ್ರ ಹಲ್ಲೆಗೊಳಗಾದ ಗಣೇಶ್ ಕುಡಿಯಲು ನೀರು ಕೇಳಿದಾಗ ನೀರು ಕೊಟ್ಟಿಲ್ಲ. ಕೊನೆಗೆ ಅಲ್ಲೇ ಚೌಟರಿಯೊಂದರ ಕತ್ತಲ ಕೋಣೆಯಲ್ಲಿ ಗಣೇಶ್‍ನನ್ನು ಕೂಡಿ ಹಾಕಿದ್ದಾರೆ. ಇನ್ನೇನು ಅವರು ಬಿಡುವುದಿಲ್ಲವೆಂದು ಅರಿತ ರೇಣುಕಮ್ಮ ಚೌಟರಿಯಲ್ಲಿ ಮಗನ ಜೊತೆ ಮಲಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ್ದ ಗಣೇಶ್ ಮೇಲ್ವರ್ಗದ ಯುವತಿಗೆ ಮೆಸೇಜ್ ಮಾಡಿ ಟಾರ್ಚರ್ ಕೊಟ್ಟಿದ್ದಾನೆ ಎಂಬುದನ್ನು ಟಾರ್ಗೆಟ್ ಮಾಡಿಕೊಂಡು ಸಿಕ್ಕಸಿಕ್ಕವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸಾರ್ವಜನಿಕವಾಗಿ ಅರೆಬೆತ್ತಲೆಗೊಳಿಸಿದ್ದರಿಂದ ಮಾನಸಿಕವಾಗಿ ಯುವಕ ಘಾಸಿಯಾಗಿದ್ದಾನೆ. ಕೈ ಕಾಲು ಬೆನ್ನಿನ ಭಾಗಕ್ಕೆ ಗಾಯಗಳಾಗಿದ್ದು ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಗಣೇಶ್ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹುಡುಗಿಯೇ ಮೊದಲು ಮೆಸೇಜ್ ಮಾಡಿದ್ದು ಎಂದು ಗಣೇಶ್ ಆರೋಪಿಸಿದ್ದು, ಗಣೇಶ್ ಪೋಷಕರು ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಲ್ಲೆ ಮಾಡಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿ ಅರೆಸ್ಟ್ ಆಗಿದ್ದಾನೆ.

TAGGED:boydavangeresocial mediaಕಾಲೇಜ್ದಾವಣಗೆರೆಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
18 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
45 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
2 hours ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?