– ಬಿಎಸ್ವೈಗೆ ಬೆಂಗ್ಳೂರು ನಗರ ಜವಾಬ್ದಾರಿ
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಿಲ್ಲ. ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಜಿಲ್ಲೆಯ ಜೊತೆಗೆ ಹೆಚ್ಚುವರಿಯಾಗಿ ಧಾರವಾಡ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.
- Advertisement 2
- Advertisement 3
ಬಸವರಾಜ ಬೊಮ್ಮಾಯಿ, ಜೆ.ಸಿ. ಮಾಧುಸ್ವಾಮಿ, ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳನ್ನು ನೀಡಿಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಅಥವಾ ಶ್ರೀಮಂತ ಪಾಟೀಲ್ ಅವರನ್ನು ಕೈಬಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
- Advertisement 4
ಯಾರಿಗೆ ಯಾವ ಜಿಲ್ಲೆ?
ಬಿ.ಎಸ್.ಯಡಿಯೂರಪ್ಪ- ಬೆಂಗಳೂರು ನಗರ ಜಿಲ್ಲೆ
ಸಿ.ಎಸ್.ಅಶ್ವಥ್ ನಾರಾಯಣ- ರಾಮನಗರ
ಬಿ.ಸಿ. ಪಾಟೀಲ – ಕೊಪ್ಪಳ
ಲಕ್ಷ್ಣಣ ಸವದಿ- ರಾಯಚೂರು
ಗೋವಿಂದ ಕಾರಜೋಳ- ಬಾಗಲಕೋಟೆ
ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ
ಜಗದೀಶ್ ಶೆಟ್ಟರ್- ಬೆಳಗಾವಿ, ಧಾರವಾಡ (ಹೆಚ್ಚುವರಿ)
ಬಿ.ಶ್ರೀರಾಮುಲು- ಚಿತ್ರದುರ್ಗ
ಕೆ.ಸುಧಾಕರ್- ಚಿಕ್ಕಬಳ್ಳಾಪುರ
ಎಸ್.ಸುರೇಶ್ ಕುಮಾರ್- ಚಾಮರಾಜನಗರ
ವಿ.ಸೋಮಣ್ಣ- ಕೊಡಗು
ಸಿ.ಟಿ.ರವಿ- ಚಿಕ್ಕಮಗಳೂರು
ಬಸವರಾಜ ಬೊಮ್ಮಾಯಿ- ಹಾವೇರಿ, ಉಡುಪಿ (ಹೆಚ್ಚುವರಿ)
ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ
ಜೆ.ಸಿ. ಮಾಧುಸ್ವಾಮಿ- ತುಮಕೂರು, ಹಾಸನ (ಹೆಚ್ಚುವರಿ)
ಸಿ.ಸಿ. ಪಾಟೀಲ- ಗದಗ
ಎಚ್.ನಾಗೇಶ್- ಕೋಲಾರ
ಪ್ರಭು ಚವ್ಹಾಣ- ಬೀದರ್, ಯಾದಗಿರಿ (ಹೆಚ್ಚುವರಿ)
ಶಶಿಕಲಾ ಜೊಲ್ಲೆ- ವಿಜಯಪುರ
ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
ಎಸ್.ಟಿ.ಸೋಮಶೇಖರ್- ಮೈಸೂರು
ಕೆ.ಸಿ.ನಾರಾಯಣಗೌಡ- ಮಂಡ್ಯ
ಆನಂದಸಿಂಗ್- ಬಳ್ಳಾರಿ
ಬೈರತಿ ಬಸವರಾಜ- ದಾವಣಗೆರೆ