ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧರಾದ ಬಿಎಸ್‍ವೈ

Public TV
1 Min Read
BSY

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ನಗರದ ವಿದ್ಯಾರಣ್ಯಪರಂನ ಸಭಾಭವನದಲ್ಲಿ ಶತಾಯುಷಿ ಕೆ.ವೀರಣ್ಣ ತಿಂಡ್ಲು ಅವರ ಶತಮಾನದ ನಮನ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಜುಲೈ 16, 17 ರಂದು ನಮ್ಮ ಪ್ರಮುಖ ನಾಯಕರ ಜೊತೆ ಸಮಾಲೋಚನೆ ನಡೆಸುತ್ತೇನೆ. ಜುಲೈ 20ರ ನಂತರ ನಾವು ರಾಜ್ಯಾದ್ಯಂತ ಪ್ರವಾಸ ಮಾಡುವ ಯೋಚನೆ ಇದೆ ಅಂದ್ರು.

ರೈತರ ಸಾಲ ಮನ್ನಾ ವಿಚಾರವಾಗಿ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತಾಡಿರೋದಾಗಿ ಸಿಎಂ ಹೇಳಿದ್ದಾರೆ. ಆದರೆ ಯಾವುದರಲ್ಲೂ ಸ್ಪಷ್ಟತೆ ಇಲ್ಲ. ರಾಜ್ಯಾದ್ಯಂತ ಅನೇಕ ಜ್ವಲಂತ ಸಮಸ್ಯೆಗಳಿವೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಮೂರು-ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡು ಪ್ರವಾಸ ಮಾಡುತ್ತೇವೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಮೂರ್ನಾಲ್ಕು ಸಾವಿರ ಕಾರ್ಯಕರ್ತರನ್ನು ಒಂದೆಡೆ ಸೇರಿಸಿ. ಮೈತ್ರಿ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದಗೌಡ, ವಿಧಾನಪರಿಷತ್ ಸದಸ್ಯೆ ತೇಜಸ್ವಿ ಮತ್ತು ಕೂಳದ ಮಠದ ಸ್ವಾಮೀಜಿ ಉಪಸ್ಥಿತಿಯಲ್ಲಿದ್ದರು.

Share This Article