Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ

Bengaluru City

ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ

Public TV
Last updated: September 19, 2018 4:45 pm
Public TV
Share
2 Min Read
BSY HDK
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಎ ಮಂಜು ಅವರು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಹಗರಣ ಆರೋಪ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಅವರು ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ರಾಜ್ಯಮಟ್ಟದ ಬಿಜೆಪಿ ಪಕ್ಷದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಮಕ್ಕಳು ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಹಾಸನದಲ್ಲಿ ರೇವಣ್ಣ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದಾರೆ. ಆದರೆ ಈ ಕುರಿತು ಸಿಎಂ ಕುಮಾರಸ್ವಾಮಿ ಅವರು ಇದುವರೆಗೂ ಮಾತನಾಡಿಲ್ಲ. ಆದರೆ ರೇವಣ್ಣ ಅವರು ಪ್ರಕರಣವನ್ನು ತೇಲಿಸುತ್ತಿದ್ದಾರೆ. ರಾಜ್ಯದ ಬೊಕ್ಕಸವನ್ನು ದೇವೇಗೌಡ ಕುಟುಂಬ ಲೂಟಿ ಮಾಡುತ್ತಿದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

BSY BJP

ಕಮಿಷನ್ ಏಜೆಂಟ್ ಸರ್ಕಾರ:
ಇದೇ ವೇಳೆ ಸಮ್ಮಿಶ್ರ ಸರ್ಕಾರ ವಿರುದ್ಧ ಕಿಡಿಕಾರಿದ ಬಿಎಸ್‍ವೈ, ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಒಡಕು ಉಂಟಾಗಿದೆ. 37 ಸ್ಥಾನ ಇರುವ ಜೆಡಿಎಸ್, 79 ಸ್ಥಾನ ಇರುವ ಕಾಂಗ್ರೆಸ್ ಪಕ್ಷಗಳು ಅಧಿಕಾರ ನಡೆಸುತ್ತಿವೆ. 104 ಸ್ಥಾನದಲ್ಲಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕೆಲಸ ಮಾಡುತ್ತಿದೆ. ಆದರೆ ಜನ ಹಿತ ಹಾಗೂ ರಾಜ್ಯದ ಅಭಿವೃದ್ಧಿ ಮರೆತು ರಾಜ್ಯ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಹಣಕ್ಕಾಗಿ ಕಮಿಷನ್ ಏಜೆಂಟ್ ರೀತಿ ಸರ್ಕಾರ ವರ್ತಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಜಗಳದಿಂದ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಈ ಸರ್ಕಾರದಲ್ಲಿ ಕಮೀಷನ್ ಕೊಡದಿದ್ದರೆ ಯಾವುದೇ ಬಿಲ್ ಪಾಸ್ ಆಗುವುದಿಲ್ಲ ಎಂದು ಹೇಳಿದರು.

vlcsnap 2018 09 19 15h49m47s121

ಎದುರಾಳಿ ಇಲ್ಲದೇ ಚೆಸ್: ಕೊಡಗಿನ ಅತಿವೃಷ್ಠಿ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದಾಗ ಅವರ ಬಳಿ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೇ ಕೇಂದ್ರದ ನಿಯೋಗ ಬರಬೇಕು ಎಂದು ಮನವಿ ಮಾಡಲಾಗಿದೆ. ಕರ್ನಾಟಕದಲ್ಲಿ 13 ಜಿಲ್ಲೆಗಳು ಬರ ಪೀಡಿತ ಎಂದು ಘೋಷಣೆಯಾಗಿದೆ. ರೈತರು ತಾವು ಬೆಳೆದ ಬೆಳೆಗಳು ಕೈ ಸೇರುವಾಗ ಮಳೆ ಕೈ ಕೊಟ್ಟಿದೆ. ಆದರೆ ರೈತರಿಗೆ 8% ರಿಂದ 10% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಆದರೆ ಸಚಿವ ಡಿಕೆ ಶಿವಕುಮಾರ್ ಅವರು ಈ ವೇಳೆ ಚೆಸ್ ಗೇಮ್ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗೆ ಪಾನ್ ಮೂವ್ ಮಾಡಬೇಕು ಎಂದು ಗೊತ್ತಿದೆ ಹೇಳಿದ್ದಾರೆ. ಆದರೆ ಎದುರಾಳಿಗಳೇ ಇಲ್ಲದೆ ಹೇಗೆ ಚೆಸ್ ನಲ್ಲಿ ಪಾನ್ ಮೂವ್ ಮಾಡುತ್ತಿರಾ? ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಡಿ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೆ ಆಮಿಷ: ಕಲಬುರಗಿ ಶಾಸಕ ಸುಭಾಷ್ ಗುತ್ತೇದಾರ್ ಅವರಿಗೆ ಮಂತ್ರಿ ಸ್ಥಾನ ನೀಡುವ ಆಮಿಷ ಒಡ್ಡಲಾಗಿದೆ. ಸ್ವತಃ ಕುಮಾರಸ್ವಾಮಿ ಅವರು ನೇರ ಬಿಜೆಪಿ ಶಾಸಕರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೇ ಇನ್ನು ಅನೇಕ ಬಿಜೆಪಿ ಶಾಸಕರನ್ನು ಸಂಪರ್ಕ ಮಾಡುವ ಯತ್ನ ಮಾಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯಾಗಿ ಎಚ್‍ಡಿಕೆ ಹಾಗೂ ಸರ್ಕಾರ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎನ್ನುವುದನ್ನು ಸಾಬೀತು ಪಡಿಸುತ್ತದೆ ಎಂದು ಆರೋಪಿಸಿದರು. ಅರಮನೆ ಮೈದಾನದ ಸಿತಾರಾ ಹಾಲ್ ನಲ್ಲಿ ವಿಶೇಷ ಸಭೆಯಲ್ಲಿ ರಾಜ್ಯದ ಬಿಜೆಪಿ ಸಂಸದರು ಹಾಗೂ ಸಚಿವರನ್ನು ಒಳಗೊಂಡಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ರಾಜ್ಯಮಟ್ಟದ ವಿಶೇಷ ಸಭೆಯು ಪಕ್ಷದ ಶಾಸಕರು, ಸಂಸದರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು. ರಾಜ್ಯಾದ್ಯಂತ ಪಕ್ಷ ಸಂಘಟನೆ, ಲೋಕಸಭಾ ಚುನಾವಣೆಗೆ ಪೂರ್ವಸಿದ್ಧತೆ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. pic.twitter.com/dZFpEMKoNw

— B.S.Yediyurappa (@BSYBJP) September 19, 2018

TAGGED:bengalurubs yeddyurappacongressHD Deve GowdaLand scamPublic TVಎಚ್‍ಡಿ ದೇವೇಗೌಡಕಾಂಗ್ರೆಸ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುಭೂ ಹಗರಣ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
26 minutes ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
55 minutes ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
1 hour ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
1 hour ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
2 hours ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?