ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ ಪ್ರಕರಣ ಶಾಕ್ ನೀಡಿದೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಸೌಂದರ್ಯ ಅವರು ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಧರಿಸಿಕೊಂಡು ಕೆಲಸ ನಿರ್ವಹಿಸಿದ್ದರು.
ಬೌರಿಂಗ್ ಆಸ್ಪತ್ರೆಯಲ್ಲಿ ಸೌಂದರ್ಯ ಸರ್ಜನ್ ಆಗಿದ್ದರು. ಸುಮಾರು 6 ತಿಂಗಳ ಕಾಲ ಸರ್ಜನ್ ಆಗಿ ಕೆಲಸ ಮಾಡಿದ್ದ ಸೌಂದರ್ಯ ನಂತರ ವೈಯಕ್ತಿಕ ಕಾರಣಗಳಿಂದ ಕೆಲಸದಿಂದ ಬಿಡುವು ಪಡೆದುಕೊಂಡಿದ್ದರು. ಕಳೆದ ನವೆಂಬರ್ ನಲ್ಲಿ ಸೌಂದರ್ಯ ಕೆಲಸ ಬಿಟ್ಟಿದ್ದರು. ಇದೀಗ ಸೌಂದರ್ಯ ಜೊತೆ ಕೆಲಸ ಮಾಡಿದ್ದ ಬೌರಿಂಗ್ ಆಸ್ಪತ್ರೆಯ ಸಹದ್ಯೋಗಿಗಳು ಕಣ್ಣೀರಾಕುತ್ತಿದ್ದಾರೆ. ಇದನ್ನೂ ಓದಿ: ಟೀ ಕುಡಿಯಲು ಬರ್ತಿದ್ದರು, ಬಿಎಸ್ವೈ ಮೊಮ್ಮಗಳು ಅಂತ ಗೊತ್ತಿರ್ಲಿಲ್ಲ- ಸೌಂದರ್ಯ ಸಾವಿಗೆ ಸ್ಟಾಲ್ ಯುವಕ ಬೇಸರ
ಇತ್ತ ಆಸ್ಪತ್ರೆ ಆವರಣದಲ್ಲಿರುವ ಟೀ ಸ್ಟಾಲ್ ಯುವಕ ಚಂದನ್ ಕೂಡ ಸೌಂದರ್ಯ ಸಾವಿಗೆ ಕಂಬನಿ ಮಿಡಿದಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯುವಕ ಚಂದನ್, ಸೌಂದರ್ಯ ಅವರು ತುಂಬಾ ಅನೊನ್ಯವಾಗಿದ್ದರು. ತಮ್ಮ ಸ್ನೇಹಿತರ ಜೊತೆ ಆಗಾಗ ಟೀ ಸ್ಟಾಲ್ ಗೆ ಬರುತ್ತಿದ್ದರು. ಆದರೆ ಅವರು ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಅಂತ ಗೊತ್ತಿರಲಿಲ್ಲ. ಇದೀಗ ಆತ್ಮಹತ್ಯೆ ವಿಷಯ ತಿಳಿದ ಕೂಡಲೇ ನಮ್ಮ ಅಕ್ಕನೇ ಹೋದ್ರು ಅನ್ನೋ ತರ ಶಾಕ್ ಆಯ್ತು ಎಂದು ಕಣ್ಣೀರು ಹಾಕಿದರು. ಒಟ್ಟಿನಲ್ಲಿ ಸೌಂದರ್ಯನನ್ನು ಕಳೆದುಕೊಂಡ ಬೌರಿಂಗ್ ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.