Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

Bengaluru City

ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

Public TV
Last updated: July 22, 2022 5:04 pm
Public TV
Share
2 Min Read
yediyurappa and Vijayendra 1
SHARE

ಬೆಂಗಳೂರು: ರಾಜ್ಯ ಬಿಜೆಪಿ ಹಲವು ಸಂಚಲನಾತ್ಮಕ ವಿದ್ಯಮಾನಗಳಿಗೆ ಸಾಕ್ಷಿಯಾಗ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಉತ್ತರಾಧಿಕಾರಿ ಘೋಷಣೆ ಮಾಡಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ಸಲ ತಮ್ಮ ಕಿರಿಯ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಯಡಿಯೂರಪ್ಪ ಅವರ ಈ ನಡೆ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.

yediyurappa Vijayendra

ರಾಜ್ಯ ಬಿಜೆಪಿಯ ದಿಗ್ಗಜ ನಾಯಕ ಯಡಿಯೂರಪ್ಪ ಇಂದು ಹೈಕಮಾಂಡ್‍ಗೆ ಶಾಕ್ ಮೂಡಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಶಿಕಾರಿಪುರದಲ್ಲಿ ಮುಂದಿನ ಸಲ ತಾವು ನಿಲ್ಲಲ್ಲ, ತಮ್ಮ ಬದಲಾಗಿ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂಬ ಮಹದ್ಘೋಷಣೆಯನ್ನು ಯಡಿಯೂರಪ್ಪ ಮಾಡಿದ್ದಾರೆ. ತಮ್ಮ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಜೊತೆಗೆ ಮಗನ ರಾಜಕೀಯ ಭವಿಷ್ಯಕ್ಕೆ ತಮ್ಮ ಕ್ಷೇತ್ರವನ್ನೇ ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯದ ‘ಮೆಂಟಲ್ ಹೆಲ್ತ್ ಇನೀಶಿಯೇಟಿವ್’ ಮೆಚ್ಚಿದ ಕೇಂದ್ರ, ದೇಶದಾದ್ಯಂತ ಜಾರಿ: ಡಾ.ಕೆ ಸುಧಾಕರ್

bsy 123

ಯಡಿಯೂರಪ್ಪ ಅವರ ಈ ಘೋಷಣೆ ಪಕ್ಷದಲ್ಲಿ ನಾನಾ ತರ್ಕಗಳಿಗೆ ವೇದಿಕೆ ಒದಗಿಸಿದೆ. ಚುನಾವಣೆಗೆ ಒಂಭತ್ತು ತಿಂಗಳಿರುವಾಗ ಯಡಿಯೂರಪ್ಪ ಅವರ ಈ ಘೋಷಣೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಯಡಿಯೂರಪ್ಪ ಅವರದ್ದೇ ವೈಯಕ್ತಿಕ ನಿರ್ಧಾರವಾಗಿದೆ. ಆದ್ರೆ ಇದಕ್ಕೆ ಹೈಕಮಾಂಡ್ ಒಪ್ಪಿಗೆ ಕೊಡುತ್ತಾ ಇಲ್ವಾ ಅನ್ನೋ ಜಿಜ್ಞಾಸೆಯೂ ಹುಟ್ಟಿಕೊಂಡಿದೆ. ಬಿಜೆಪಿ ಹೈಕಮಾಂಡ್, ವಿಜಯೇಂದ್ರಗೆ 2018ರ ಚುನಾವಣೆಯಲ್ಲಿ ವರುಣಾದಿಂದ ಟಿಕೆಟ್ ನಿರಾಕರಿಸಿತ್ತು. ಬಳಿಕ ನಡೆದ ಕೆಲವು ಉಪಚುನಾವಣೆಗಳಲ್ಲಿ ವಿಜಯೇಂದ್ರ ಸ್ಪರ್ಧೆಯ ಮಾತು ಕೇಳಿ ಬರುತ್ತಿತ್ತು. ಇತ್ತೀಚೆಗೆ ಪರಿಷತ್ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದ ವಿಜಯೇಂದ್ರಗೆ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿತ್ತು. ಇಷ್ಟಿದ್ರೂ ವಿಜಯೇಂದ್ರ, ಕಳೆದ ಕೆಲವು ವರ್ಷಗಳಿಂದ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ರು. ಹಳೇ ಮೈಸೂರು ಭಾಗದ ವರುಣಾ ಅಥವಾ ಗುಬ್ಬಿ ಕ್ಷೇತ್ರಗಳಲ್ಲಿ ವಿಜಯೇಂದ್ರ ಸ್ಪರ್ಧಿಸಲು ಬಯಸಿದ್ರು. ಅವರಿಗೆ ಶಿಕಾರಿಪುರದಲ್ಲೂ ಸ್ಪರ್ಧಿಸುವಂತೆ ಭಾರೀ ಒತ್ತಾಯ ಇತ್ತು. ವಿಜಯೇಂದ್ರ ಒಂದು ಕಡೆ ಹೈಕಮಾಂಡ್‍ನ ಅಸಹಕಾರ ಮತ್ತೊಂದು ಕಡೆ ಕ್ಷೇತ್ರದ ಆಯ್ಕೆ ಗೊಂದಲದಲ್ಲಿದ್ದ ವೇಳೆಯಲ್ಲೇ ತಂದೆ ಯಡಿಯೂರಪ್ಪ ಘೋಷಣೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನವರು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸಿದ್ದರು: ಎಚ್‍ಡಿಕೆ

ಯಡಿಯೂರಪ್ಪ ಅವರ ಈ ನಡೆ ಹಿಂದೆ ಸಾಕಷ್ಟು ಲೆಕ್ಕಾಚಾರಗಳು ಕಂಡುಬರುತ್ತಿವೆ. ಶಿಕಾರಿಪುರ ಕ್ಷೇತ್ರ ಬೇರೆಯವರಿಗೆ ಬಿಟ್ಟುಕೊಡದೇ ತಮ್ಮ ಕುಟುಂಬದ ಹಿಡಿತದಲ್ಲಿ ಇರಿಸಿಕೊಳ್ಳುವ ಉದ್ದೇಶವೂ ಇದರ ಹಿಂದಿದೆ. ಹಳೇ ಮೈಸೂರು ಭಾಗದಲ್ಲಿ ವಿಜಯೇಂದ್ರಗೆ ಈ ಸಲವೂ ಹೈಕಮಾಂಡ್ ಟಿಕೆಟ್ ನಿರಾಕರಿಬಹುದೆಂಬ ಆತಂಕವೂ ಇದರಲ್ಲಿ ಇಣುಕಿದೆ. ಹೀಗಾಗಿ ತಾವೇ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡುವ ಘೋಷಣೆ ಮಾಡಿದ್ದಾರೆ. ಈ ಮೂಲಕ ತಮ್ಮ ಪುತ್ರನಿಗೆ ಈ ಸಲ ಶತಾಯಗತಾಯ ವಿಧಾನಸಭೆಗೆ ಟಿಕೆಟ್ ಕೊಡಿಸಲೇಬೇಕೆಂಬ ಹಟವೂ ಇದರಲ್ಲಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರ ಈ ನಡೆ ಹೈಕಮಾಂಡ್‍ಗೂ ಗೊಂದಲ ಮೂಡಿಸಿದೆ. ಹೈಕಮಾಂಡ್‍ನ ಪ್ರತಿಕ್ರಿಯೆ ಈ ವಿಚಾರದಲ್ಲಿ ಏನಿರುತ್ತೋ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:BS YediyurappaShikaripuraYediyurappaಬಿ.ವೈ.ವಿಜಯೇಂದ್ರಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
3 minutes ago
Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
28 minutes ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
35 minutes ago
Strait Of Malacca US
Latest

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ?

Public TV
By Public TV
1 hour ago
Vachananand Swamiji Harihara Panchamasali Peetha
Davanagere

ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?