Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?

Bengaluru City

ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?

Public TV
Last updated: February 25, 2020 8:25 pm
Public TV
Share
3 Min Read
Siddu BSY copy
SHARE

ಬೆಂಗಳೂರು: ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಾಯಕರಿಬ್ಬರೂ ಹಾವು ಮುಂಗುಸಿಯಂತೆ ಸದಾ ಕಚ್ಚಾಡುತ್ತಲೇ ಇರುತ್ತಾರೆ. ಆಡಳಿತ ಪಕ್ಷದ ವೈಫಲ್ಯಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸದಾ ಟೀಕಿಸುತ್ತಲೇ ಇರುತ್ತಾನೆ. ವಿಪಕ್ಷ ನಾಯಕನ ಟೀಕೆಗೆ ಆಡಳಿತ ಪಕ್ಷದ ನಾಯಕ ತಿರುಗೇಟು ಕೊಡುತ್ತಲೇ ಇರುತ್ತಾನೆ. ಇದು ರಾಜಕಾರಣ ಎಂಬ ಸಿನಿಮಾ ಪರದೆಯ ಮೇಲೆ ನಿತ್ಯ ಕಾಣುವ ದೃಶ್ಯಗಳು.

ಆದರೆ ಪರದೆ ಹಿಂದೆ ಅವರಿಬ್ಬರ ನಡುವಿನ ಸಂಬಂಧ ಹೇಗಿರುತ್ತದೆ? ಇದನ್ನು ಬಲ್ಲವರು ಕಡಿಮೆಯೇ. ಆದರೆ ಹಾಲಿ ಆಡಳಿತ ಪಕ್ಷದ ನಾಯಕ, ಸಿಎಂ ಯಡಿಯೂರಪ್ಪ ಮತ್ತು ವಿರೋಧ ಪಕ್ಷ ಕಾಂಗ್ರೆಸ್‍ನ ನಾಯಕ ಸಿದ್ದರಾಮಯ್ಯ ಇವರಿಬ್ಬರ ಸಂಬಂಧ, ಪರಸ್ಪರರ ಧೋರಣೆಗಳು ಬಹುಶ: ರಾಜಕೀಯ ಆಸಕ್ತರೆಲ್ಲರಿಗೂ ಗೊತ್ತಿರುವಂಥದ್ದೇ. ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರೂ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಆರೋಪ ಆಗಾಗ ಕೇಳಿಬರುತ್ತಲೇ ಇರುತ್ತದೆ. ಸಿದ್ದರಾಮಯ್ಯ ಎಂದರೆ ಯಡಿಯೂರಪ್ಪಗೆ ಮೃದು ಧೋರಣೆ. ಯಡಿಯೂರಪ್ಪ ವಿಚಾರದಲ್ಲಿ ಸಿದ್ದರಾಮಯ್ಯ ಕಟು ಟೀಕೆ, ವಾಗ್ದಾಳಿ ನಡೆಸಲ್ಲ ಎನ್ನುವ ಆರೋಪ-ಅಪವಾದಗಳು ಇಬ್ಬರ ಮೇಲೂ ಇವೆ.

SIDDU BSY copy

ಈಗ ಅಸಲಿ ವಿಷಯ ಏನಂದ್ರೆ, ಇವರಿಬ್ಬರ ಈ ಅಡ್ಜಸ್ಟ್‍ಮೆಂಟ್ ಬಾಂಧವ್ಯ ಕಟ್ ಮಾಡಲು ಖುದ್ದು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗಿದೆ. ಇವರಿಬ್ಬರ ಈ ವಿಚಿತ್ರ ಗೆಳೆತನದ ಮೇಲೆ ಹೈಕಮಾಂಡ್ ಕೆಂಗಣ್ಣು ಬೀರಿದೆಯಂತೆ. ಇವರಿಬ್ಬರ ಅಡ್ಜಸ್ಟ್ ಮೆಂಟ್ ರಾಜಕೀಯದಿಂದ ಹೈಕಮಾಂಡ್‍ಗೆ ಮುಜುಗರವಾಗಿದೆಯಂತೆ. ಹೀಗಾಗಿಯೇ ಇಬ್ಬರ ನಡುವೆ ಗೋಡೆ ಎಬ್ಬಿಸಲು ಹೈಕಮಾಂಡ್ ಮುಂದಾಗಿದೆ. ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ಈ ಕುರಿತು ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದೆ ಎನ್ನಲಾಗಿದೆ.

ನಾಡಿದ್ದು ಫೆ.27 ರಂದು ಸಿಎಂ ಯಡಿಯೂರಪ್ಪ 78ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯಡಿಯೂರಪ್ಪ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಆಹ್ವಾನಿಸಲಾಗಿದೆ. ಸಮಾರಂಭದಲ್ಲಿ ಯಡಿಯೂರಪ್ಪ ಕುರಿತ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ, ಅಭಿನಂದನಾ ಭಾಷಣ ಮಾಡೋರು ಬೇರೆ ಯಾರೂ ಅಲ್ಲ ಇದೇ ಸಿದ್ದರಾಮಯ್ಯನವರು. ಸಿದ್ದರಾಮಯ್ಯನವರ ಮೇಲಿನ ಕಳಕಳಿಯಿಂದಲೇ ಯಡಿಯೂರಪ್ಪ ಅವರ ಕೈಯಿಂದಲೇ ತಮ್ಮ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿಸಲು ಇಚ್ಚಿಸಿದ್ದಾರೆ. ಇಂಥ ಸಂದರ್ಭದಲ್ಲೇ ಸರಿಯಾಗಿ ಯಡಿಯೂರಪ್ಪಗೆ ಹೈಕಮಾಂಡ್ ಶಾಕಿಂಗ್ ಮೆಸೇಜ್ ಬಂದು ತಲುಪಿದೆ ಎಂದು ಹೇಳಲಾಗುತ್ತಿದೆ.

SIDDU HDK BSY 1

ಸಿದ್ದರಾಮಯ್ಯ ಮೇಲೆ ಸಾಫ್ಟ್ ಆಗಿದ್ದ ಬಿಎಸ್‍ವೈಗೆ ಹೈಕಮಾಂಡ್ ವಾರ್ನಿಂಗ್ ಮೆಸೇಜ್ ಕಳಿಸಿದೆ. ಯಡಿಯೂರಪ್ಪ – ಸಿದ್ದರಾಮಯ್ಯ ಗೆಳೆತನಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಹೈಕಮಾಂಡ್, ಸಿದ್ದರಾಮಯ್ಯರಿಂದ ದೂರ ಇರುವಂತೆ ಬಿಎಸ್‍ವೈಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಹೈಕಮಾಂಡ್ ಸಂದೇಶ ಏನು?
ಸಿದ್ದರಾಮಯ್ಯ ಜತೆ ಅಂತರ ಕಾಯ್ದುಕೊಂಡಷ್ಟೂ ಉತ್ತಮ. ಸಿದ್ದರಾಮಯ್ಯರಿಂದ ದೂರ ಇದ್ದಷ್ಟು ಪಕ್ಷಕ್ಕೂ, ಸರ್ಕಾರಕ್ಕೂ ಲಾಭ. ಸಿದ್ದರಾಮಯ್ಯ ಜೊತೆ ಸಾಫ್ಟ್ ಫ್ರೆಂಡ್ ಶಿಪ್ ಸ್ಟಾಪ್ ಮಾಡಿ. ಜನತೆಗೆ ನಿಮ್ಮ ಮೃದು ಧೋರಣೆಯಿಂದ ಬೇರೆಯೇ ಸಂದೇಶ ಹೋಗುತ್ತದೆ. ರಾಜಕಾರಣದಲ್ಲಿ ವಿಪಕ್ಷ ನಾಯಕನ ಜತೆ ಸ್ನೇಹದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಆಡಳಿತ ಪಕ್ಷದ ನಾಯಕ ವಿರೋಧ ಪಕ್ಷದ ನಾಯಕನ ಜೊತೆ ಹೇಗೆ ಇರಬೇಕು ಅಂತ ರಾಜಕೀಯ ಧರ್ಮ ಹೇಳುತ್ತದೋ ಹಾಗೆಯೇ ನೀವೂ ಇರಿ. ಕನಿಷ್ಟ ಈ ವಿಧಾನಸಭೆ ಅವಧಿವರೆಗಾದರೂ ಸಿದ್ದರಾಮಯ್ಯ ಗೆಳೆತನದಿಂದ ದೂರ ಇರಿ ಅಂತೆಲ್ಲ ಬಿಎಸ್‍ವೈಗೆ ಹೈಕಮಾಂಡ್ ಖಡಕ್ ವಾರ್ನಿಂಗ್ ಕೊಟ್ಟಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

CM BSY SIDDARAMAIAH copy

ಬರ್ತ್ ಡೇ ನೆಪದಲ್ಲಿ ಸಿದ್ದು ಜತೆ ಒಂದೇ ವೇದಿಕೆ ಹಂಚಿಕೊಳ್ಳಲು ಇಚ್ಚಿಸಿದ್ದ ಬಿಎಸ್‍ವೈಗೆ ಬಿಜೆಪಿ ಹೈಕಮಾಂಡ್ ಈ ಮೂಲಕ ‘ಹೈ’ಶಾಕ್ ಕೊಟ್ಟಿದೆ. ಬಿಎಸ್‍ವೈಗೆ ಹೈಕಮಾಂಡ್ ಸಂದೇಶ ಎಚ್ಚರಿಕೆ ಗಂಟೆ ಎಂದು ಬಿಜೆಪಿಯಲ್ಲಿ ಗುಸುಗುಸು ಕೂಡಾ ನಡೀತಿದೆ. ಹೈಕಮಾಂಡ್ ಸಂದೇಶದ ಬೆನ್ನಲ್ಲೇ ಪಕ್ಷದಲ್ಲಿ ಸಿದ್ದು-ಬಿಎಸ್‍ವೈ ಗೆಳೆತನದ ಬಗ್ಗೆ ಕುತೂಹಲ ಹುಟ್ಟಿಕೊಂಡಿದೆ. ಹೈಕಮಾಂಡ್ ವಾರ್ನಿಂಗ್ ಬಂದ ಹಿನ್ನೆಲೆಯಲ್ಲಿ ಇನ್ಮುಂದೆ ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ ಸಂಬಂಧ ಹೇಗಿರಲಿದೆ? ಹಿಂದಿನಂತೆಯೇ ಇರುತ್ತಾರಾ ಅಥವಾ ಅಂತರ ಕಾಯ್ದುಕೊಳ್ಳುತ್ತಾರಾ? ಎಲ್ಲಕ್ಕಿಂತ ಮಿಗಿಲಾಗಿ ಸಿದ್ದರಾಮಯ್ಯ ಯಡಿಯೂರಪ್ಪ ಬರ್ತ್ ಡೇ ಫಂಕ್ಷನ್ ಗೆ ಬರ್ತಾರಾ? ಬರಲ್ವಾ ಅನ್ನೋ ಟಾಕ್ ಸಹ ಪಕ್ಷದಲ್ಲಿ ಜೋರಾಗಿ ನಡೀತಿದೆ. ಈ ಮೂಲಕ ಹೈಕಮಾಂಡ್ ಮೆಸೇಜ್ ಯಡಿಯೂರಪ್ಪರನ್ನು ಧರ್ಮ ಸಂಕಟದಲ್ಲಿ ಸಿಕ್ಕಿಸಿದೆ ಎನ್ನಲಾಗಿದೆ.

TAGGED:bjpBJP High CommandBS YediyurappacongressPublic TVsiddaramaiahಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಬಿಜೆಪಿ ಹೈ ಕಮಾಂಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
1 minute ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
3 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
17 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?