140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು: BSY ಸಂಕಲ್ಪ

Public TV
2 Min Read
bsy shivamogga

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂಕಲ್ಪ ಮಾಡಿದರು.

BJP 1 1

ಶಿವಮೊಗ್ಗ ಜಿಲ್ಲೆ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು, ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಸಂಕಲ್ಪ. ಆ ದಿಕ್ಕಿನಲ್ಲಿ ನಮ್ಮೆಲ್ಲಾ ಹಿರಿಯ ಮುಖಂಡರ ಜೊತೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಎಲ್ಲರ ಸಹಕಾರದೊಂದಿಗೆ ಪಕ್ಷವನ್ನು ಬಲಪಡಿಸಲು ಗಮನ ಕೊಡ್ತೇನೆ. ಮಹಿಳಾ ಸಂಘಟನೆ ಬಲಪಡಿಸಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ವಿಶೇಷವಾಗಿ ಎಸ್‍ಸಿ, ಎಸ್‍ಟಿ, ಒಬಿಸಿ ಕ್ಷೇತ್ರದಲ್ಲಿ ಇನ್ನು ಹೆಚ್ಚು ಕೆಲಸ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮಾಜದ ಅಭಿವೃದ್ಧಿಗೆ ವಿಶೇಷ ಗಮನ ಕೊಡಬೇಕಾಗಿದೆ. ಈ ಎಲ್ಲವನ್ನು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಸರು ಬರುವ ರೀತಿಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ. ಆ ದಿಕ್ಕಿನಲ್ಲಿ ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡ್ತಿದ್ದಾರೆ. ಸಚಿವ ಸಂಪುಟದ ಸಹೋದ್ಯೋಗಿಗಳು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.

ARAGAJANENDRA

ಆರಗ ಜ್ಞಾನೇಂದ್ರ ಅಂತಹವರು ಗೃಹ ಸಚಿವರಾಗಿರುವುದು ನಮ್ಮ ಸೌಭಾಗ್ಯ. ಈ ಚುನಾವಣೆ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಚುನಾವಣೆಯನ್ನು ಯಾರು ಹಗುರವಾಗಿ ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸಲು ಎಲ್ಲ ಕಡೆ ಓಡಾಡುತ್ತೇನೆ. ಅದಕ್ಕಾಗಿ ನಿಮ್ಮ ಸಹಕಾರ ಇರಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಓಮಿಕ್ರಾನ್ ಇರೋ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ: ಸಿಎಂ

bommai modi1

ಮೋದಿ ಅವರ ನೇತೃತ್ವದ ಸರ್ಕಾರದಿಂದ ಇಡೀ ಜಗತ್ತೆ ಅಚ್ಚರಿಪಟ್ಟುಕೊಂಡು ಭಾರತದ ಕಡೆ ನೋಡುತ್ತಿದೆ ಎಂದು ಪ್ರಶಂಸಿದರು. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಜಗತ್ತೇ ಅಚ್ಚರಿಪಡುವ ರೀತಿ ಈ ದೇಶ ಅಭಿವೃದ್ಧಿ ಆಗುತ್ತದೆ. ಅಂತಹ ಮಹಾನ್ ವ್ಯಕ್ತಿ ಈ ದೇಶದ ಪ್ರಧಾನಿ ಆಗಿರುವ ವೇಳೆ ಆ ಪಕ್ಷದ ಸದಸ್ಯರಾಗಿರುವುದೇ ನಮಗೆ ಹೆಮ್ಮೆ ತರುವ ವಿಷಯ. ಈ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂಬುದು ಕಾಂಗ್ರೆಸ್ಸಿನ ಸ್ನೇಹಿತರಿಗೆ ಅರ್ಥವಾಗಿದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *