ನಾನು ಮದುವೆಯಾಗಿಲ್ಲ ಯಾಕೆ – ಮೊದಲ ಬಾರಿಗೆ ರಿವೀಲ್ ಮಾಡಿದ ಮಾಯಾವತಿ

Public TV
2 Min Read
Mayawati

ನವದೆಹಲಿ: ತಾವು ಯಾಕೆ ಮದುವೆಯಾಗಲಿಲ್ಲ ಎನ್ನುವ ವಿಚಾರವನ್ನು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ, ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಆನೆ ಹಾಗೂ ಮಾಯಾವತಿ ಪ್ರತಿಮೆ ನಿರ್ಮಾಣ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಗೆ ನಿನ್ನೆ ಬಿಎಸ್‍ಪಿ ಪ್ರಮಾಣಪತ್ರ ಸಲ್ಲಿಸಿತ್ತು. ಈ ಪತ್ರದಲ್ಲಿ ಮಾಯಾವತಿ ಅವರು, ತಾವು ಯಾಕೆ ಮದುವೆ ಆಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ಸಮುದಾಯದ ಜನರ ಏಳಿಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಹೀಗಾಗಿ ನಾನು ಮದುವೆಯಾಗದಿರಲು ನಿರ್ಧರಿಸಿದೆ ಎಂದ ಅವರು, ಈ ನಿರ್ಧಾರವನ್ನು ರಾಜ್ಯದಲ್ಲಿ ನಿರ್ಮಿಸಿದ ನನ್ನ ಹಾಗೂ ಆನೆಯ ಪ್ರತಿಮೆಗಳು ಪ್ರತಿನಿಧಿಸುತ್ತಿವೆ ಎಂದು ಮಾಯಾವತಿ ತಿಳಿಸಿದ್ದಾರೆ.

Mayawati

ಅಯೋಧ್ಯದಲ್ಲಿ ಸರ್ಕಾರವೇ ರಾಮನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ. ಆದರೆ ಈಗ ಯಾಕೆ ನನ್ನ ಹಾಗೂ ಬಿಎಸ್‍ಪಿ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶ ವಿವಿಧ ಭಾಗದಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್ ಅವರ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮಗಳು ಯಾಕೆ ಪ್ರಶ್ನೆ ಮಾಡಲಿಲ್ಲ ಎಂದು ಮಾಯಾವತಿ ಅವರು ತಮ್ಮ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ 3 ಸಾವಿರ ಕೋಟಿ ರೂ. ವೆಚ್ಚ ಮಾಡಿ ಗುಜರಾತ್‍ನಲ್ಲಿ ಸರ್ದಾರ್ ವಲ್ಲಭ್‍ಭಾಯಿ ಅವರ ಪ್ರತಿಮೆ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಬಿಜೆಪಿಯ ಸರ್ಕಾವು 200 ಕೋಟಿ ರೂ. ವೆಚ್ಚದಲ್ಲಿ ರಾಮನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ ಎಂದು ಮಾಯಾವತಿ ದೂರಿದ್ದಾರೆ.

Mayawati 2

ಏನಿದು ಪ್ರಕರಣ?:
ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ಅವರು ಕೋಟ್ಯಂತರ ಹಣ ವೆಚ್ಚ ಮಾಡಿ ದಲಿತ್ ಪವರ್ ಹೌಸ್, ಬಿಎಸ್‍ಪಿ ಚಿಹ್ನೆ ಆನೆ ಹಾಗೂ ಪಕ್ಷ ಸಂಸ್ಥಾಪಕ ಕಾನ್ಶಿ ರಾಮ್ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಬಡವರ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿ ವಕೀಲರಾದ ರವಿಕಾಂತ್ ಹಾಗೂ ಸುಕುಮಾರ್ ಅವರು 2019ರಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು.

2012ರ ಉತ್ತರ ವಿಧಾನಸಭಾ ಚುನಾವಣೆ ವೇಳೆ ಮಾಯಾವತಿ ಹಾಗೂ ಆನೆಯ ಪ್ರತಿಮೆಗಳಿಗೆ ಹೊದಿಕೆ ಹೊದಿಸಬೇಕು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. 2014ರಲ್ಲಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದಾಗ, ಪ್ರತಿಮೆ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಅನುಮತಿ ಸಿಕ್ಕಿತ್ತು. ಹೀಗಾಗಿ ನಿರ್ಮಾಣ ಮಾಡಿದ್ದೇವೆ ಎಂದು ಬಿಎಸ್‍ಪಿ ತಿಳಿಸಿತ್ತು.

Mayawati B

Share This Article
Leave a Comment

Leave a Reply

Your email address will not be published. Required fields are marked *