Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿಕಸಿತ ಭಾರತದ ಬಜೆಟ್ – ನಿರೀಕ್ಷೆಗಳೇನು? 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ವಿಕಸಿತ ಭಾರತದ ಬಜೆಟ್ – ನಿರೀಕ್ಷೆಗಳೇನು? 

Latest

ಮೋದಿ ವಿಕಸಿತ ಭಾರತದ ಬಜೆಟ್ – ನಿರೀಕ್ಷೆಗಳೇನು? 

Public TV
Last updated: July 10, 2024 3:07 pm
Public TV
Share
6 Min Read
BUDGET 2024
SHARE

ಈ ಬಾರಿಯ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು (Narendra Modi) ದೇಶವು ಕೇವಲ ಅಭಿವೃದ್ಧಿಯ ಟ್ರೇಲರ್‌ನ್ನು ಮಾತ್ರ ನೋಡಿದೆ. ಇನ್ನೂ ಅಭಿವೃದ್ಧಿಯ ಪೂರ್ಣ ಚಿತ್ರಣ ಬಾಕಿ ಇದೆ ಎಂದಿದ್ದರು.‌ ಇದೇ ವೇಳೆ 2047ರ ಗುರಿಯಾದ ವಿಕಸಿತ ಭಾರತಕ್ಕೆ (Viksit Bharat 2047) ಬಲವಾದ ಅಡಿಪಾಯವನ್ನು ಹಾಕುವ ಸಲುವಾಗಿ ಭಾರತೀಯ ಆರ್ಥಿಕತೆಯಲ್ಲಿ ಸಾಕಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದರು. ಈ ನಿಟ್ಟಿನಲ್ಲಿ ಜು.23 ರಂದು ಮಂಡನೆಯಾಗಲಿರುವ ಬಜೆಟ್‌ (Budget 2024) ದೇಶದ ಜನತೆಯಲ್ಲಿ ಬಹಳ ಕುತೂಹಲ ಮೂಡಿಸಿದೆ. 

ಸಂಸತ್ತಿನ ಅಧಿವೇಶನದಲ್ಲಿ ತಮ್ಮ ಮೊದಲ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಮುಂಬರುವ ಬಜೆಟ್ ಐತಿಹಾಸಿಕ ಘೋಷಣೆಗಳನ್ನು ಮಾಡಲಿದೆ. ಈ ಮೂಲಕ ದೇಶದ ಬೆಳವಣಿಗೆಗೆ ‘ಭವಿಷ್ಯದ ದೃಷ್ಟಿಕೋನ’ವನ್ನು ಪ್ರಸ್ತುತಪಡಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಇದೀಗ ವಿಕಸಿತ ಭಾರತದ ಕನಸು ನನಸಾಗಬೇಕಾದರೆ ಭಾರತದ ಮುಂದಿನ ಬಜೆಟ್‌ನ ನೀರೀಕ್ಷೆಗಳೇನು? ವಿಕಸಿತ ಭಾರತವಾಗಲು ನಮ್ಮ ಬಜೆಟ್ ಹೇಗಿರಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವ್ಯಯಿಸುವ ನಿರೀಕ್ಷೆ ಇದೆ. ಗ್ರಾಮೀಣ ಭಾಗಕ್ಕೆ ಮತ್ತು ಸಮಾಜದ ದುರ್ಬಲ ವರ್ಗಗಳನ್ನು ಸಬಲಗೊಳಿಸುವುದರ ಕಡೆಗೆ ಬಜೆಟ್‌ನಲ್ಲಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

BUDGET 2024 1

ಈ ಬಾರಿ ಆರ್‌ಬಿಐ ತನ್ನ ಲಾಭಾಂಶವಾದ 2.10 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಭಾರತದ ಆರ್ಥಿಕ ಸ್ಥಿತಿ ಸದೃಢವಾಗಿದೆ. ಇದು ಸಾಮಾಜಿಕ ವಲಯಕ್ಕೆ ಹೆಚ್ಚಿನ ಬಜೆಟ್ ಮೊತ್ತವನ್ನು ವ್ಯಯಿಸಲು ನೆರವಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ. 

ಬಜೆಟ್‌ ನಿರೀಕ್ಷೆಗಳೇನು? 

ಶಿಕ್ಷಣ ಕ್ಷೇತ್ರಕ್ಕೆ ಬೂಸ್ಟರ್‌ ಡೋಸ್‌: ಶಿಕ್ಷಣ ಕ್ಷೇತ್ರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಅಡಿಪಾಯವಾಗಿದೆ. ಈ ದೃಷ್ಟಿಯಿಂದ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತುಕೊಡುವುದು ಅನಿವಾರ್ಯವಾಗಿದೆ. ಮಾನವ ಶಕ್ತಿಯ ಉಪಯೋಗ, ಉದ್ಯೋಗವಕಾಶ ಮತ್ತು ಉತ್ಪಾದನೆಯಲ್ಲಿ ಹೆಚ್ಚಳಕ್ಕೆ ಇದು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡಬೇಕಿರುವುದು ಅಗತ್ಯ ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯ.  

ಗ್ರಾಮೀಣ ಜನರ ಆರ್ಥಿಕ ಬಲಕ್ಕಾಗಿ ನರೇಗಾಕ್ಕೆ ಒತ್ತು: ಗ್ರಾಮೀಣ ಭಾಗಗಳಲ್ಲಿ ಕೋವಿಡ್‌ ಕಾಲದಲ್ಲಿ ಜನರ ಆರ್ಥಿಕ ಸುಧಾರಣೆಗೆ ಸಹಕಾರಿಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಗೆ ಕೇಂದ್ರ ವಿಶೇಷ ಮಹತ್ವ ನೀಡುವ ನಿರೀಕ್ಷೆ ಇದೆ. 2024 ಮತ್ತು 2025 ಮನರೇಗಾಕ್ಕೆ ಘೋಷಿಸಿದ ಮೊತ್ತದಲ್ಲಿ ಬಜೆಟ್‌ ಮೊತ್ತ ಏರಿಕೆಯಾಗಿಲ್ಲ. ಇದರಿಂದಾಗಿ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡಬೇಕಾಗಿರುವುದು ಅನಿವಾರ್ಯವಾಗಿದೆ ಎಂಬುದ ಆರ್ಥಿಕ ತಜ್ಞರ ಅಭಿಪ್ರಾಯವಾಗಿದೆ.  

Agriculture

ಹೊಸ ಉದ್ಯಮಗಳಿಗೆ ಬೇಕಿದೆ ನೆರವಿನ ಹಸ್ತ: ನವೋದ್ಯಮಗಳ ತಲೆ ಎತ್ತುತ್ತಿವೆ, ಇದರೊಂದಿಗೆ ಕೊನೆಗೊಳ್ಳುತ್ತಿರುವ ಉದ್ಯಮಗಳ ಸಂಖ್ಯೆಯೂ ಕಡಿಮೆ ಇಲ್ಲ. ಹೊಸ ಉದ್ಯಮಗಳ ಬೆಳವಣಿಗೆಗೆ ಸರ್ಕಾರದ ಅಗತ್ಯ ನೆರವು ಬೇಕು,  ‘ಕೂ’ನಂತಹ ಕಂಪನಿಗಳು ಸಹ ಭದ್ರವಾಗಿ ಬೇರೂರಲು ಇಲ್ಲಿ ಆಗಲಿಲ್ಲ ಎಂಬುದನ್ನು ನಾವಿಲ್ಲಿ ಗಮನಿಸಬಹುದು. ಒಂದು ಉದ್ಯಮದ ನಾಶ ಹಲವಾರು ಉದ್ಯೋಗದ ನಾಶಕ್ಕೆ ಕಾರಣ ಆಗಬಹುದು ಇದು ದೇಶದ ಪ್ರಗತಿಯ ಕುಂಠಿತಕ್ಕೆ ಕಾರಣವಾಗಲಿದೆ. ಈ ಬಾರಿಯ ಬಜೆಟ್‌ ನವೋದ್ಯಮ ಹಾಗೂ ಊದ್ಯಮ ಸ್ನೇಹಿಯಾಗುವ ನಿರೀಕ್ಷೆ ಇದೆ. 

ಮಹಿಳಾ ಸಬಲೀಕರಣ: ಮುದ್ರಾ ಯೋಜನೆಯಡಿ ವಿತರಿಸಲಾಗುವ ಸಾಲದಲ್ಲಿ 30 ಕೋಟಿ ರೂ. ಮೊತ್ತದ ಸಾಲವನ್ನು ಮಹಿಳಾ ಉದ್ದಿಮೆದಾರರಿಗೆ ವಿತರಿಸಲಾಗಿದೆ ಎಂದು ಫೆಬ್ರುವರಿಯ ಮಧ್ಯಂತರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದರು. 1 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿಯಾಗಿಸುವ ಗುರಿ ಸರ್ಕಾರದ ಮುಂದಿದೆ. ಇದಕ್ಕಾಗಿ 83 ಲಕ್ಷ ಸ್ವಸಹಾಯ ಗುಂಪುಗಳು ಕಾರ್ಯೋನ್ಮುಖವಾಗಿವೆ. ಪಿಎಂ ಕಿಸಾನ್ ಯೋಜನೆ ಅಡಿ ಬರುವ 9 ಕೋಟಿಗೂ ಹೆಚ್ಚು ಫಲಾನುಭವಿಗಳಲ್ಲಿ ಮಹಿಳೆಯರ ಸಂಖ್ಯೆ 3 ಕೋಟಿಗೂ ಹೆಚ್ಚಿದೆ. ಜುಲೈ 23ರಂದು ಮಂಡನೆ ಆಗುವ ಬಜೆಟ್​ನಲ್ಲಿ ಮಹಿಳೆಯರಿಗೆ ಪರೋಕ್ಷವಾಗಿ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಸಬ್ಸಿಡಿ, ತೆರಿಗೆ ಲಾಭ ಇತ್ಯಾದಿಯನ್ನು ವಿತ್ತ ಸಚಿವೆ ಘೋಷಿಸಬಹುದು ಎಂಬ ನಿರೀಕ್ಷೆ ಇದೆ. 

ವಿಯೆಟ್ನಾಂ, ಚೀನಾ ರೀತಿ ಆಮದು ಸುಂಕ ಇಳಿಯಲಿ: ಭಾರತದ ಎಲೆಕ್ಟ್ರಾನಿಕ್ಸ್ ಉದ್ಯಮ ಈ ಬಾರಿಯ ಬಜೆಟ್​ನಿಂದ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಆಮದು ಸುಂಕಗಳ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎನ್ನುವ ಬೇಡಿಕೆ ಇದೆ. ಬಿಡಿಭಾಗಗಳ ತಯಾರಿಕೆಗೆ ಉತ್ತೇಜನ ಕೊಡಲು ಇನ್ಸೆಂಟಿವ್ ಸ್ಕೀಮ್ ಅನ್ನು ಸರ್ಕಾರ ಜಾರಿಗೊಳಿಸಲಿ ಎನ್ನುವ ನಿರೀಕ್ಷೆಯೂ ಇದೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಉದ್ಯಮ ಏರುಗತಿಯಲ್ಲಿದೆ. ಇದು ವಿಯೆಟ್ನಾಂ ಇತ್ಯಾದಿ ಇತರ ಕೆಲ ದೇಶಗಳ ಪ್ರಬಲ ಪೈಪೋಟಿ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್​ಫೋನ್ ತಯಾರಕ ಉದ್ಯಮ ಸರ್ಕಾರದಿಂದ ಇನ್ನಷ್ಟು ಉತ್ತೇಜನ ನಿರೀಕ್ಷಿಸುತ್ತಿದೆ. 

india gst

ಏಕೀಕೃತ ಸಬ್ಸಿಡಿ, ಜೈವಿಕ ರಸಗೊಬ್ಬರಗಳಿಗೆ ಸಬ್ಸಿಡಿ: ಕೃಷಿ ಕ್ಷೇತ್ರದ ಸಂಘ ಸಂಸ್ಥೆಗಳು, ತಜ್ಞರು ಮೊದಲಾದವರು ಕೃಷಿ ಕ್ಷೇತ್ರಕ್ಕೆ ಉತ್ತೇಜನ ಸಿಗಲು ಯಾವೆಲ್ಲಾ ಅಂಶಗಳು ಬೇಕಾಗಬಹುದು ಎಂದು ಈಗಾಗಲೇ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದಾರೆ. ಈ ವೇಳೆ ಜೈವಿಕ ರಸಗೊಬ್ಬರಗಳಿಗೆ ಸಬ್ಸಿಡಿ ಕೊಡಬೇಕು, ಯೂರಿಯಾ ದರದ ಬಗ್ಗೆ ಚರ್ಚೆಗಳಾಗಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು. 

ಕೃಷಿ ಕ್ಷೇತ್ರದ ಪ್ರಮುಖ ಬೇಡಿಕೆಗಳು

ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿ ಕ್ಷೇತ್ರಕ್ಕೆ ಪುಷ್ಟಿ ಕೊಡಲು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಮೊತ್ತದ ಹೂಡಿಕೆ ಬೇಕು.

ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರೀಸರ್ಚ್​ನ (ಐಸಿಎಆರ್) ಬಜೆಟ್‌ನ್ನು 9,500 ಕೋಟಿ ರೂ.ನಿಂದ 20,000 ಕೋಟಿ ರೂ.ಗೆ ಹೆಚ್ಚಿಸಬೇಕು.

ಎಲ್ಲಾ ಕೃಷಿ ಸಂಬಂಧಿತ ಸಬ್ಸಿಡಿಗಳನ್ನು ಏಕೀಕೃತಗೊಳಿಸಿ ಹಣವನ್ನು ನೇರವಾಗಿ ವರ್ಗಾವಣೆ ಮಾಡಬೇಕು.

ಜೈವಿಕ ರಸಗೊಬ್ಬರಗಳಿಗೆ ಸಬ್ಸಿಡಿ ಕೊಟ್ಟು ಉತ್ತೇಜನ ನೀಡಬೇಕು.

ಎಂಎಸ್​ಪಿ ಕಮಿಟಿಯನ್ನು ಸಮಾಪ್ತಿಗೊಳಿಸಿ; ಹೊಸ ಕೃಷಿ ನೀತಿ ಜಾರಿಗೆ ತರಬೇಕು.

ಕೇಂದ್ರ ಪ್ರಾಯೋಜಿತ ಕೃಷಿ ಯೋಜನೆಗಳಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಅನುಪಾತವನ್ನು ಈಗಿರುವ 60:30ರಿಂದ 90:10ಕ್ಕೆ ಬದಲಿಸಬೇಕು. ಐದು ವರ್ಷ ಅವಧಿಯವರೆಗೆ 90%ರಷ್ಟು ವೆಚ್ಚವನ್ನು ಸರ್ಕಾರ ಭರಿಸಬೇಕು.

ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನ ರಫ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ (ಎಪಿಇಡಿಎ) ಹಿಂದಿನ ಬಜೆಟ್​ನಲ್ಲಿ 80 ಕೋಟಿ ರೂ. ನೀಡಲಾಗಿತ್ತು. ಅದನ್ನು 800 ಕೋಟಿ ರೂ.ಗೆ ಹೆಚ್ಚಿಸಬೇಕು. ಇದರಿಂದ ಕೃಷಿ ರಫ್ತು ಹೆಚ್ಚಲು ಸಾಧ್ಯವಾಗುತ್ತದೆ.

ರಾಷ್ಟ್ರೀಯ ಆಡು ಮತ್ತು ಕುರಿ ಯೋಜನೆ ಆರಂಭಿಸಬೇಕು.

ಜಿಲ್ಲಾ ರಫ್ತು ಕೇಂದ್ರಗಳನ್ನು ಸ್ಥಾಪಿಸಬೇಕು.

ತೆರಿಗೆ ಸುಧಾರಣೆ: ಭಾರತದ ಸಂಕೀರ್ಣ ತೆರಿಗೆ ಪದ್ಧತಿಗಳನ್ನು ಸರಳೀಕರಿಸಲು ಕೈಗಾರಿಕಾ ಸಂಸ್ಥೆಗಳು ಶಿಫಾರಸು ಮಾಡಿವೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಐಸಿಸಿಐ) ಬಂಡವಾಳ ಲಾಭದ ತೆರಿಗೆ ಆಡಳಿತವನ್ನು ಎರಡು ಅಥವಾ ಮೂರು ವಿಶಾಲ ವರ್ಗಗಳಾಗಿ ಸರಳೀಕರಿಸಲು ಸಲಹೆ ನೀಡಿದೆ. FICCI ಕೂಡ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಪ್ರತಿಪಾದಿಸಿದೆ. 

ತೆರಿಗೆ ವಿನಾಯತಿ ಘೋಷಣೆ?

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ನೀತಿ ಘೋಷಿಸುವ ಸಾಧ್ಯತೆ ಇದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜೊತೆಗೆ,ಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಘೋಷಿಸಬೇಕು.ಅಷ್ಟೇ ಅಲ್ಲದೇ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ 30% ತೆರಿಗೆ ಬದಲು 25%ರಷ್ಟು ತೆರಿಗೆ ವಿಧಿಸಲಾಗುತ್ತದೆ ಎನ್ನಲಾಗಿದೆ. 

ಇನ್ನಿತರೆ ಪ್ರಮುಖ ನಿರೀಕ್ಷೆಗಳು 

ಹಸಿರು ಮತ್ತು ಸುಸ್ಥಿರ ಇಂಧನ ಮೂಲಗಳ ಮೇಲೆ ಕೇಂದ್ರೀಕರಿಸಿ ಇಂಧನ ಮೂಲಸೌಕರ್ಯದಲ್ಲಿ ಹೂಡಿಕೆಯನ್ನು ವಿಸ್ತರಣೆ. 

ಮೂಲಸೌಕರ್ಯದಲ್ಲಿ ಖಾಸಗಿ ವಲಯದ ಸಹಭಾಗಿತ್ವವನ್ನು ಹೆಚ್ಚಳ

ವಿದೇಶಿ ಹೂಡಿಕೆಗಳು, ವಿದೇಶಿ ಮೂಲಗಳಿಂದ ದೇಣಿಗೆ ಮತ್ತು ಅನುದಾನಗಳ ಸ್ವೀಕೃತಿಗೆ ತ್ವರಿತ ಕ್ಲಿಯರೆನ್ಸ್

ಹೊಸ ಉತ್ಪಾದನಾ ಕಾರ್ಪೊರೇಟ್ ಕಂಪನಿಗಳಿಗೆ ರಿಯಾಯಿತಿ ತೆರಿಗೆ ದರವನ್ನು ವಿಸ್ತರಿಸುವುದು

ಡಿಜಿಟಲ್ ಇಂಡಿಯಾ ದಕ್ಷತೆಯನ್ನು ಸುಧಾರಿಸಲು ತಂತ್ರಜ್ಞಾನ ಅಳವಡಿಕೆಗೆ ಪ್ರೋತ್ಸಾಹ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌ 

ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಈ ಬಾರಿ ಈ ದಾಖಲೆಯನ್ನು ಮುರಿಯಲಿದ್ದಾರೆ.

TAGGED:budget 2024narendra modiNirmala SitharamanViksit Bharat 2047
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
6 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
39 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
51 minutes ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
1 hour ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
2 hours ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?