ನವದೆಹಲಿ: ಉಡಾನ್ ಯೋಜನೆ (UDAN Scheme) ಅಡಿಯಲ್ಲಿ 120 ನಗರಗಳಲ್ಲಿ ನೂತನ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದ್ದಾರೆ.
Advertisement
ಸಾಮಾನ್ಯ ಜನರ ಕೂಡ ವಿಮಾನದಲ್ಲಿ ಪ್ರಯಾಣ ಮಾಡಲು ನೆರವಾಗಲೆಂದು, ಕೇಂದ್ರ ಸರ್ಕಾರ 2017 ರಲ್ಲಿ ಉಡಾನ್ ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆ ಅಡಿಯಲ್ಲಿ 120 ನಗರಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತದೆ. ಇದು ಮುಂದಿನ 10 ವರ್ಷಗಳಲ್ಲಿ 4 ಕೋಟಿ ಜನರಿಗೆ ಅನುಕೂಲ ಕಲ್ಪಿಸಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೇ ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಜೊತೆಗೆ ಪಾಟ್ನಾ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
UNION BUDGET 2025-26: BOOST TO SHIPPING AND AVIATION SECTOR
🔶Maritime Development Fund of ₹25,000 Crore proposed
🔶Modified Udan Scheme to connect 120 new destinations and carry 4 crore passengers in the next 10 years
🔶Greenfield airports and Western Koshi Canal project… pic.twitter.com/SgDmYP2sqF
— PIB India (@PIB_India) February 1, 2025
Advertisement
ಡೆಲಿವರಿ ಬಾಯ್ಸ್ಗಳಿಗೆ ಪೋರ್ಟಲ್
ಇನ್ನೂ ಆನ್ಲೈನ್ ಪ್ಲಾಟ್ ಫಾರಂ ಕಾರ್ಮಿಕರಿಗೆ ಪ್ರತ್ಯೇಕವಾಗಿ ʻಶ್ರಮ್ ಪೋರ್ಟ್ಲ್ʼ ಆರಂಭಿಸಲಾಗುವುದು. ಇದರಿಂದ ಇದರಿಂದ 1 ಕೋಟಿ ಗಿಗ್ ವರ್ಕರ್ಗಳಿಗೆ ಅನುಕೂಲವಾಗಲಿದೆ. ಜೊತೆಗೆ ಪಿಎಂ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 30,000 ಮೌಲ್ಯದ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
Advertisement
ಹೋಂ ಸ್ಟೇಗಳಿಗೆ ಮುದ್ರಾ ಲೋನ್:
ಅಲ್ಲದೇ ಪ್ರವಾಸೋದ್ಯಮ ಅಭಿವೃಡಿಸುವ ಉದ್ದೇಶದಿಂದ ಹೋಮ್ ಸ್ಟೇಗಳಿಗೆ ಮುದ್ರಾ ಲೋನ್ ನೀಡುವ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತದೆ. ಜೊತೆಗೆ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಟೂರಿಸಂ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವರು ಘೋಷಿಸಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಇಂದು 2025-26ನೇ ಸಾಲಿನ ಪೂರ್ಣಾವಧಿ ಬಜೆಟ್ ಮಂಡನೆ ಮಾಡಿದ್ದು, ವಿವಿಧ ವಲಯಗಳಿಗೆ ಆದ್ಯತೆ ನೀಡಿದ್ದಾರೆ.