ನವದೆಹಲಿ: ಬಜೆಟ್ ಬಡವರಿಂದ ಶ್ರೀಮಂತರವರೆಗೂ ಪೂರಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬಜೆಟ್ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್ ದೇಶದ ಜನರ ವಿಶ್ವಾಸ ಗಳಿಸಲಿದೆ. ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲಿದ್ದು, ಆಕಾಂಕ್ಷೆಯ ಬಜೆಟ್ ಆಗಿದೆ. ಈ ಬಜೆಟ್ ನಿರ್ದಿಷ್ಟ ಗುರಿ ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿನ್ನದ ಸೆಸ್ ಹೆಚ್ಚಿಸಿ ಮಹಿಳೆಯರಿಗೆ ಶಾಕ್ ಕೊಟ್ಟ ಸೀತಾರಾಮನ್
- Advertisement 2
My thoughts on the #BudgetForNewIndia. Watch. https://t.co/cJYfirRHfa
— Narendra Modi (@narendramodi) July 5, 2019
- Advertisement 3
2019ರ ಬಜೆಟ್ 2022ರ ನವ ಭಾರತ ನಿರ್ಮಾಣ ಕನಸು ಈಡೇರಿಸಲು ಪೂರಕವಾಗಲಿದೆ. ದಲಿತ, ಶೋಷಿತ, ಬಡ, ವಂಚಿತ ಜನರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದೆ. ಈ ಬಾರಿ ಬಜೆಟ್ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇದನ್ನೂ ಓದಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ. ಸೆಸ್
- Advertisement 4
ಮುಂದಿನ ಕೆಲವು ವರ್ಷಗಳಲ್ಲಿ ಭಾರತವು 5 ಟ್ರಿಲಿಯನ್ (5 ಲಕ್ಷ ಕೋಟಿ) ಡಾಲರ್ ಅರ್ಥವ್ಯವಸ್ಥೆ ಹೊಂದಲಿದೆ. ಈ ಕನಸನ್ನು ಪೂರ್ಣಗೊಳಿಸಲು ಸರ್ಕಾರ ಶ್ರಮಿಸಲಿದೆ. ದೇಶದ ರೈತರು, ಮೀನುಗಾರರನ್ನು ಪ್ರಬಲಗೊಳಿಸಲು ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿ ರೈತರ ಆದಾಯವು ದ್ವಿಗುಣಗೊಳ್ಳಲಿದೆ ಎಂದರು.
ದೇಶದಲ್ಲಿ ಉಂಟಾಗುತ್ತಿರುವ ಜಲ ಸಮಸ್ಯೆಯನ್ನು ನಿವಾರಣೆ ಮಾಡಲಾಗುತ್ತದೆ. ಸ್ವಚ್ಛ ಭಾರತ್ ಅಭಿಯಾನದಂತೆ ಹರ್ ಘರ್ ಜಲ್ ಅಭಿಯಾನ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.