Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣ: ಸಿಎಂ

Bengaluru City

ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣ: ಸಿಎಂ

Public TV
Last updated: May 29, 2022 8:03 pm
Public TV
Share
2 Min Read
Yoga Anekal CM Basavaraj Bommai 3
SHARE

ಆನೇಕಲ್: ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬ ಮಕ್ಕಳಲ್ಲೂ ಯೋಗದ ಅರಿವು ಮೂಡಿಸುವ ಕೆಲಸ ಮಾಡಬೇಕು. ಭಾರತವನ್ನು ಭವ್ಯ ಭಾರತವನ್ನಾಗಿ ಮಾಡುವ ಕನಸು ನನಸಾಗಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೊಮ್ಮಾಯಿ ಅವರು ಇಂದು ಬೆಂಗಳೂರು ಹೊರವಲಯದ ಜಿಗಿಣಿ ಸಮೀಪದ ಪ್ರಶಾಂತಿ ಕುಟೀರ ಎಸ್.ವ್ಯಾಸ ಸ್ವಾಯತ್ತ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿರುವ 24th International Conference of Frontiers and Yoga Research and Its Application(INCOFYRA) ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್ 

Yoga Anekal CM Basavaraj Bommai

ಮನಸ್ಸಿನ ಏಕಾಗ್ರತೆಗೆ ಯೋಗ ಮತ್ತು ಧ್ಯಾನ ಪೂರಕವಾಗಿವೆ. ಯೋಗದಿಂದ ಮನಸ್ಸಿನ ಸಮಚಿತ್ತತೆಯನ್ನು ಪಡೆಯುವವರು ಸೃಷ್ಟಿಯ ಭಾಗವಾಗಿ ಮೋಕ್ಷವನ್ನು ಪಡೆಯುತ್ತಾರೆ. ಈಗ ಮನುಷ್ಯ ಸಂಪತ್ತು ಹಾಗೂ ಹಣ ಗಳಿಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಈ ರೀತಿಯ ಚಿಂತನೆ ಬದಲಾಗಿ ಮಾನವನ ಒಳಿತನ್ನು ಗುರಿಯಾಗಿಸಿಕೊಂಡರೆ, ವಿಶ್ವವೇ ಒಂದು ಸುಂದರ ತಾಣವಾಗುತ್ತದೆ ಎಂದರು.

ಮನುಷ್ಯನಿಗೆ ಯೋಚನಾಶಕ್ತಿ ಅಭೂತಪೂರ್ವವಾಗಿದೆ. ಮನುಕುಲಕ್ಕೆ ಒಗ್ಗಿಕೊಳ್ಳುವಿಕೆಯ ಗುಣವಿದೆ. ಮನುಷ್ಯನೊಳಗೆ ಎಲ್ಲ ಸಮಸ್ಯೆಗಳಿಗೆ ಉತ್ತರವಿದೆ. ನಮ್ಮ ದೇಹದೊಳಗಿನ ಎಲ್ಲ ಸಮಸ್ಯೆಗಳಿಗೆ ಯೋಗದಲ್ಲಿ ಪರಿಹಾರವಿದೆ. ಮನಸ್ಸು ಹಾಗೂ ದೇಹವನ್ನು ಸದೃಢಗೊಳಿಸಲು ಯೋಗ ಸಹಕರಿಸುತ್ತದೆ. ತನ್ನ ಮೇಲೆ ನಿಯಂತ್ರಣಹೊಂದಿರುವವನೇ ನಿಜವಾದ ಯೋಗಿ. ಯೋಗಿಯಾದವರು ಮಾತ್ರ ಯುಗಪುರುಷರಾಗಲು ಸಾಧ್ಯ ಎಂದು ತಿಳಿಸಿದರು.

Yoga Anekal CM Basavaraj Bommai 2

ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ. ಆತ್ಮ ಶಾಶ್ವತವಾಗಿರುವಂಥದ್ದು, ತೃಪ್ತಿಕರವಾದ ಜೀವನವನ್ನು ನಡೆಸಲು ಆರೋಗ್ಯಕರ ದೇಹ ಮತ್ತು ಮನಸ್ಸು ಅಗತ್ಯ. ಮನುಷ್ಯ ತನ್ನ ಬಾಲ್ಯದಲ್ಲಿರುವ ಮುಗ್ಧತೆಯನ್ನು ಕೊನೆಯವರೆಗೆ ಇರಿಸಿಕೊಳ್ಳಬೇಕು. ಯೋಗಗುರುಗಳ ಕಣ್ಣುಗಳಲ್ಲಿ ಕಾಂತಿಯಿರುತ್ತದೆ. ಯೋಗದಿಂದ ಜೀವನದಲ್ಲಿ ಪರಿಪೂರ್ಣತೆ ಸಾಧಿಸುವ ಮುಗ್ಧತೆಯನ್ನು ಕಾಯ್ದುಕೊಳ್ಳಬಹುದು. ದೇವರು ನೀಡಿದ್ದನ್ನು ಯೋಗದಿಂದ ನಿರಂತರವಾಗಿ ಕಾಪಾಡಿಕೊಳ್ಳಬಹುದು ಎಂದು ವಿವರಿಸಿದರು.

ದೇಹದ ಮೆಟಬಾಲಿಸಂಗಾಗಿ ಯೋಗ ಅವಶ್ಯಕ. ಯಾರ ಬದುಕಿನಲ್ಲಿ ನಗುವಿರುತ್ತದೋ, ಅಂತಹವರು ಆನಂದದಿಂದ ಅರ್ಥಪೂರ್ಣವಾಗಿ ಬದುಕುತ್ತಾರೆ. ಜೀವನದ ಸಣ್ಣ-ಸಣ್ಣ ಖುಷಿಗಳ ಆನಂದವನ್ನು ಪಡೆಯಬೇಕು. ಮನಸ್ಸನ್ನು ನಿಗ್ರಹಿಸಿ ಸ್ಥಿತಪ್ರಜ್ಞತೆಯನ್ನು ಕಾಯ್ದುಕೊಳ್ಳಬೇಕು. ಎಸ್.ವ್ಯಾಸ ವಿಶ್ವವಿದ್ಯಾಲಯ ಭವಿಷ್ಯದ ನಾಸವನ್ನು ನಿರ್ಮಿಸುತ್ತಿದೆ. ಆರೋಗ್ಯಕರ ಮನಸ್ಸು ಮತ್ತು ದೇಹ ಮಾತ್ರ ವೈಜ್ಞಾನಿಕ ಚಿಂತನೆ ಮಾಡಲು ಸಾಧ್ಯ. ಆಧ್ಯಾತ್ಮ, ವೈಜ್ಞಾನಿಕ ಚಿಂತನೆಗೆ ದಾರಿಮಾಡಿಕೊಡುತ್ತದೆ. ಯೋಗ ಒಂದು ವಿಜ್ಞಾನ. ಈ ವಿಜ್ಞಾನವನ್ನು ಅಧ್ಯಯನ ಮಾಡಿ, ಅರ್ಥೈಸಿಕೊಂಡು, ದಾಖಲಿಸಿ, ಬೋಧಿಸುವ ಕೆಲಸವನ್ನು ವಿಶ್ವವಿದ್ಯಾಲಯದ ಮುಖ್ಯಸ್ಥರು ಮಾಡುತ್ತಿರುವುದು ಶ್ಲಾಘನೀಯ. ಯೋಗದ ಮೂಲಕ ನಮ್ಮನ್ನು ನಾವೇ ಮರೆತು ಸಾತ್ವಿಕತೆ ಅರಿವು ಮೂಡಿಸುವ ಕೇಂದ್ರವಾಗಿದೆ. ಈ ಕೇಂದ್ರದ ಎಲ್ಲ ಯೋಜನೆಗಳಿಗೆ ಸರ್ಕಾರದ ಸಹಕಾರ ಇರಲಿದೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಅಂಡರ್‌ವೇರ್‌ನಲ್ಲಿ ಬಂದು ಮತ ಚಲಾಯಿಸಿದ್ರೆ, ಒಳ ಉಡುಪು ಫ್ರೀ 

Yoga Anekal CM Basavaraj Bommai 1

ಭಾರತ ದೇಶದ ಮೌಲ್ಯ, ಸಂಸ್ಕೃತಿ, ಪರಂಪರೆಗಳು ಅಮೂಲ್ಯವಾದವು. ಭಾರತದ ಅಂತರ್ಗತ ಶಕ್ತಿಯನ್ನು ಇಡೀ ಜಗತ್ತಿಗೆ ತಿಳಿಹೇಳಲು ಚಿಂತನೆಯಿಂದ ಪ್ರಧಾನಿ ಮೋದಿ ಅವರು ಯೋಗವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ್ದಾರೆ. ಆಯುಷ್ ಇಲಾಖೆ ಸ್ಥಾಪಿಸಿ ಯೋಗದ ಅರಿವು ಮೂಡಿಸುತ್ತಿರುವ ಪ್ರಧಾನಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ನಾಯಕನ ನೇತೃತ್ವದಲ್ಲಿ ಯೋಗವನ್ನು ಮುಂದುವರೆಸೋಣ. ಬರುವ ವರ್ಷದಿಂದ ಶಾಲೆಗಳಲ್ಲಿ ಯೋಗಶಿಕ್ಷಣವನ್ನು ನೀಡಲು ವಿಶೇಷ ಕಾರ್ಯಕ್ರಮವನ್ನು ಸರ್ಕಾರ ರೂಪಿಸಲಿದೆ ಎಂದರು.

TAGGED:anekalCM Basavaraj Bommaiyogaಆನೇಕಲ್ಯೋಗಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?