ಲಕ್ನೋ: ರಾಜ್ಯವನ್ನು ಬುಲ್ಡೋಜರ್ ಬಾಬಾ ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
- Advertisement 2
ಉತ್ತರ ಪ್ರದೇಶ ಅರಾಜಕತೆ ಮತ್ತು ಜಂಗಲ್ ರಾಜ್ ಹಿಡಿತದಲ್ಲಿದೆ. ಕಳೆದ ಐದು ವರ್ಷಗಳಿಂದ ಇದೇ ಪರಿಸ್ಥಿತಿ ಇದೆ. ಬುಲ್ಡೋಜರ್ ಸ್ಟೀರಿಂಗ್ ಮೇಲೆ ಕೈಯಿಟ್ಟು, ಮುಖ್ಯಮಂತ್ರಿ ಪ್ರತಿಪಕ್ಷಗಳನ್ನು ಬೆನ್ನಟ್ಟುತ್ತಿದ್ದಾರೆ. ಆದರೆ ಅಧಿಕಾರದಿಂದ ರಕ್ಷಿಸಲ್ಪಟ್ಟ ಕ್ರಿಮಿನಲ್ಗಳು ಹೊರಗೆ ವಿಧ್ವಂಸಕರಾಗುತ್ತಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್
- Advertisement 3
- Advertisement 4
ಬಿಜೆಪಿಯನ್ನರು ಸುಳ್ಳು ಹೇಳುವುದರಲ್ಲಿ ನಿಪುಣರಾಗಿದ್ದು, ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಮತ್ತು ಮೋಸದ ಮೂಲಕ ಗೆದ್ದಿದ್ದಾರೆ. ಅದೇ ರೀತಿ ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಪ್ರಜಾಸತ್ತಾತ್ಮಕವಲ್ಲದ ಮಾರ್ಗಗಳನ್ನು ಉಪಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ
ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಸರ್ಕಾರವನ್ನು ರಚಿಸಿದ ಕೂಡಲೇ ಅಯೋಧ್ಯೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಯಿತು. ಈ ಘಟನೆಯಿಂದ ಬಾಲಕಿಯ ಚಿಕ್ಕಪ್ಪ ಸಾವನ್ನಪ್ಪಿದ್ದು, ಸಂತ್ರಸ್ತೆಯ ಕುಟುಂಬ ಇನ್ನೂ ನ್ಯಾಯದ ನಿರೀಕ್ಷೆಯಲ್ಲಿದೆ. ಆದರೆ ಅತ್ಯಾಚಾರ ನಡೆದ ಮಠವನ್ನು ಕೆಡವಲು ಯೋಗಿ ಆದಿತ್ಯನಾಥ್ ತಮ್ಮ ಬುಲ್ಡೋಜರ್ಗಳನ್ನು ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.