ಸೇತುವೆ ನೆಲಸಮ ಮಾಡುವಾಗ ನದಿಗೆ ಬಿದ್ದ ಜೆಸಿಬಿ- ಪ್ರಾಣಾಪಾಯದಿಂದ ಚಾಲಕ ಪಾರು

Public TV
2 Min Read
Bulldozer UP

ಲಕ್ನೋ: ಗಂಗಾ ನದಿಯ (River) ಮೇಲಿದ್ದ ಸೇತುವೆಯೊಂದನ್ನು (Bridge) ನೆಲಸಮ ಮಾಡುವಾಗ ಜೆಸಿಬಿ (JCB) ನೀರಿಗೆ ಬಿದ್ದು, ಚಾಲಕ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜನಸತ್ ಪ್ರದೇಶದಲ್ಲಿರುವ ಶಿಥಿಲಗೊಂಡ ಸೇತುವೆಯನ್ನು ಕೆಡಗುವಾಗ ಜೆಸಿಬಿ ನದಿಗೆ ಬಿದ್ದಿದೆ.

ವೀಡಿಯೋದಲ್ಲಿ ಏನಿದೆ?: ಮುಜಾಫರ್‌ನಗರದ ಕಿರಿದಾದ ಸೇತುವೆಯಲ್ಲಿ ಬುಲ್ಡೋಜರ್ ನಿಂತಿರುವುದನ್ನು ನೋಡಬಹುದಾಗಿದೆ. ಜೆಸಿಬಿ ಯಂತ್ರವು ಹಳೆಯ ಸೇತುವೆಯನ್ನು ಕೆಡವಲು ಪ್ರಯತ್ನಿಸಿದಾಗ ಇದ್ದಕ್ಕಿದ್ದಂತೆ ಸೇತುವೆಯು ಪೂರ್ಣವಾಗಿ ಮುರಿದ್ದು ಬಿದ್ದಿದ್ದು, ಸೇತುವೆಯ ಮೇಲೆ ಇದ್ದ ಜೆಸಿಬಿಯು ನದಿಯೊಳಗೆ ಮುಳುಗಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಟೂರಿಸ್ಟ್ ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ, 10 ಮಂದಿಗೆ ಗಾಯ

ನೀರಿನಲ್ಲಿ ಕುಸಿದು ಬಿದ್ದ ಸೇತುವೆ 100 ವರ್ಷಗಳಷ್ಟು ಹಳೆಯದ್ದಾಗಿದೆ. ಕಾಲುವೆಯ ಉದ್ದಕ್ಕೂ ಪಾಣಿಪತ್-ಖತಿಮಾ ಹೆದ್ದಾರಿಯನ್ನು ವಿಸ್ತರಿಸುವ ಯೋಜನೆಯ ಭಾಗವಾಗಿ ನೆಲಸಮ ಕಾರ್ಯವನ್ನು ನಡೆಸಲಾಯಿತು. ಇದನ್ನೂ ಓದಿ: ಐಸಿಸ್ ಜೊತೆ ಸಂಪರ್ಕದ ಶಂಕೆ, ಮತ್ತೊಬ್ಬನ ಬಂಧನ – ಗಂಗಾವತಿಯಲ್ಲಿ ಖಾಕಿ ಕಣ್ಗಾವಲು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *