ಚಿಕ್ಕಬಳ್ಳಾಪುರ: ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಕಾಂಗ್ರೆಸ್ ಕಾರ್ಯಕರ್ತರನ್ನು (Congress Worker) ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು (Chikkaballapura-Gowribidnur) ಮಾರ್ಗದ ಕಣಿವೆಯಲ್ಲಿ ನಡೆದಿದೆ.
ಕಣಿವೆ ತಿರುವು ಪ್ರದೇಶದಲ್ಲಿ ಒವರ್ ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬಂದ ಕೆಎಸ್ಆರ್ಟಿಸಿ (KSRTC) ಬಸ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಚಿತ್ರದುರ್ಗದ (Chitradurga) ಕಾಂಗ್ರೆಸ್ ಪಾದಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಅದೃಷ್ಟವಶಾತ್ ಎರಡು ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ
ಘಟನೆಯಲ್ಲಿ ಖಾಸಗಿ ಬಸ್ನ ಮುಂಭಾಗದ ಗಾಜು ಸಂಪೂರ್ಣ ಪುಡಿ, ಪುಡಿಯಾಗಿದೆ. ಘಟನೆ ನಂತರ ಬೇರೋಂದು ಬಸ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ – ಪೊಲೀಸ್ ಮಹಾಸಂಘ ಸೇರಿ ಎಲ್ಲ ಅರ್ಜಿಗಳು ವಜಾ