ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ. ಇದನ್ನೂ ಓದಿ: ಕೈದಿಗಳು 6 ಸಾವಿರ ಕೊಟ್ರೆ ಕೀ ಪ್ಯಾಡ್ ಫೋನ್, 15,000ಕ್ಕೆ ಆ್ಯಂಡ್ರಾಡ್ ಫೋನ್ – ಮೈಸೂರು ಕೇಂದ್ರ ಕಾರಾಗೃಹದ ಸ್ಥಿತಿ ಬಿಚ್ಚಿಟ್ಟ ಸರ್ಕಾರಿ ಸದಸ್ಯ
ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 


 
		 
		 
		 
		 
		
 
		 
		 
		 
		