ಕಾರವಾರ: ಮೀನಿನ ಲಾರಿ ಹಾಗೂ ಖಾಸಗಿ ಬಸ್ಸು ಮೊದಲು ಮುಖಾಮುಖಿ ಡಿಕ್ಕಿಯಾಗಿದ್ದು, ನಂತರ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕ 25 ವರ್ಷದ ಅಬ್ದುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಬಸ್ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೀನಿನ ಲಾರಿ ಗೋವಾದಿಂದ ಕೇರಳ ಕಡೆಗೆ ತೆರಳುತ್ತಿತ್ತು. ಇನ್ನೂ ಖಾಸಗಿ ಬಸ್ಗಳು ಮಂಗಳೂರಿನಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದವು ಎಂದು ತಿಳಿದುಬಂದಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.