ರಾಮನಗರ: ದೇವರ ಸನ್ನಿಧಿಗೆ ಪೂಜೆಗೆಂದು ಹೊರಟಿದ್ದ ಭಕ್ತಾದಿಗಳಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಅರಣ್ಯ ಪ್ರದೇಶದ ಒಳಗೆ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ.
- Advertisement 2
ಸಂಗಮ ಸಮೀಪದ ಮಡಿವಾಳದ ಶಿವನಾಂಕರೇಶ್ವರ ದೇವಾಲಯಕ್ಕೆ ಚಾಮರಾಜನಗರದಿಂದ 50ಕ್ಕೂ ಹೆಚ್ಚು ಮಂದಿ ಹೊರಟಿದ್ದರು. ಮಡಿವಾಳ ಸಮೀಪದ ಸಂಗಮದ ಮೊದಲ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ತಡೆಗೋಡೆಗೆ ಡಿಕ್ಕಿ ಹೊಡೆದು ಅರಣ್ಯ ಪ್ರದೇಶದ ಒಳಗೆ ನುಗ್ಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಕೈ ಮುರಿದಿದ್ದು 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
- Advertisement 3
- Advertisement 4
ಗಾಯಾಳುಗಳನ್ನು ಕನಕಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.