ನಿದ್ದೆ ಮಂಪರಿನಲ್ಲಿದ್ದ ಚಾಲಕನಿಂದ ನದಿಗೆ ಬಿದ್ದ ಬಸ್ – ಮೂವರು ಸಾವು

Public TV
1 Min Read
madhya pradesh bus 1

ಭೋಪಾಲ್: ನಿದ್ದೆ ಮಂಪರಿನಲ್ಲಿದ್ದ ಚಾಲಕನ ಅಚಾತುರ್ಯದಿಂದಾಗಿ ಬಸ್ ನದಿಗೆ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಕೈಲಾಶ್ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ತಿಳಿದುಬಂದಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: 10 ರೂಪಾಯಿ ಕೋಳಿ ಮರಿಗೆ 52 ರೂ. ಟಿಕೆಟ್!

madhya pradesh bus

ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತಪಟ್ಟ ಮೂರೂ ಮಂದಿ ಗುಜರಾತ್ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದೇನೆ ಎಂದು ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಪುಟದ 6 ಸಚಿವರಿಗೆ ಕೊಕ್‌?

ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್‍ಪುರದ ಚಾಂದ್‍ಪುರ ಗ್ರಾಮದ ಬಳಿ ಬಸ್ ನದಿಗೆ ಬಿದ್ದಿದೆ. ಬಸ್ ಅಲಿರಾಜ್‍ಪುರದಿಂದ ಗುಜರಾತ್‍ನ ಉದೇಪುರಕ್ಕೆ ಹೋಗುತ್ತಿತ್ತು. ಬಸ್ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *