ವಿಜಯಪುರ: ಎರಡು ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ವಿಜಯಪುರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಜಯಪುರದಿಂದ ಜಮಖಂಡಿ ಕಡೆಗೆ ಹೊರಟಿದ್ದ ಬಸ್ ಹಾಗೂ ಜಮಖಂಡಿ ಕಡೆಯಿಂದ ವಿಜಯಪುರ ಕಡೆಗೆ ಬರುತ್ತಿದ್ದ ಬಸ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಆಗಿದೆ. ಈ ಅಪಘಾತದಿಂದ ಎರಡು ಬಸ್ಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಬಸ್ಗಳ ಮುಂಭಾಗದ ಗಾಜುಗಳು ಪುಡಿಪುಡಿ ಆಗಿವೆ.
ಬಸ್ ಮುಂಭಾಗದ ಒಡೆದ ಗಾಜಿನ ಮೂಲಕವೇ ಪ್ರಯಾಣಿಕರು ಹೊರ ಬಂದಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಿಂದ ಕೆಲ ಕಾಲ ರಸ್ತೆ ಸಂಚಾರ ಅಸ್ಥವ್ಯಸ್ಥವಾಗಿತ್ತು. ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.