ಮದುವೆ ದಿಬ್ಬಣದ ಬಸ್ ಪಲ್ಟಿ – 2 ಸಾವು, 16 ಮಂದಿಗೆ ಗಾಯ

Public TV
1 Min Read
BUS ACCIDENT

ಚಿಕ್ಕಬಳ್ಳಾಪುರ: ಮದುವೆ ಆರತಕ್ಷತೆಗೆ ಆಗಮಿಸಿ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, 16 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿ ನಡೆದಿದೆ.

BUS ACCIDENT 2

ಬೆಳಚಿಕ್ಕನಹಳ್ಳಿ ಗ್ರಾಮದಿಂದ ಮದುವೆಯ ಆರರಕ್ಷತೆಗೆಂದು ಘಾಟಿ ದೇವಾಲಯದ ಬಳಿಯ ಖಾಸಗಿ ಕಲ್ಯಾಣ ಮಂಟಪಕ್ಕೆ ಜನ ಬಂದು ಆರತಕ್ಷತೆ ಮುಗಿಸಿಕೊಂಡು ಹಿಂದಿರುಗುತ್ತಿದ್ದರು. ಈ ವೇಳೆ ಭಾರೀ ಮಳೆ ಕಾರಣ ರಸ್ತೆ ಸರಿಯಾಗಿ ಕಾಣದೆ ರಸ್ತೆಯ ತಿರುವಿನಲ್ಲಿ ಬಸ್ ರಸ್ತೆ ಬದಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಇಂಡಿಯಾದವ್ರು ಹೆಂಗೆ ಮಂಜಾ ಕೊಡ್ತಾರೆ ನೋಡಿ: ಜಮೀರ್

BUS ACCIDENT 1

ಅಪಘಾತದಲ್ಲಿ ಗೌರಿಬಿದನೂರು ತಾಲೂಕು ತೊಂಡೆಬಾವಿ ಗ್ರಾಮದ ಶಿವಕುಮಾರ್ (56) ಹಾಗೂ ರಾಮಕೃಷ್ಣರೆಡ್ಡಿ (60) ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗೌರಿಬಿದನೂರು ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಯಿಗಳಿಗೆ ಉತ್ತರ ಕೊಡಲು ಸಾಧ್ಯನಾ?: ಎಚ್‍ಡಿಕೆ

Share This Article
Leave a Comment

Leave a Reply

Your email address will not be published. Required fields are marked *