ಚಿತ್ರದುರ್ಗ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಲಾರಿ, ಬಸ್ ಮುಖಾಮುಖಿ ಡಿಕ್ಕಿ

Public TV
1 Min Read
CTD
-ಆನೇಕಲ್ ಬಳಿ ಸಿನಿಮಾ ಸ್ಟೈಲ್‍ನಲ್ಲಿ ಅಪಘಾತ

ಚಿತ್ರದುರ್ಗ: ನಸುಕಿನಜಾವ ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕಪಿಲೆಹಟ್ಟಿ ಬಳಿ ನಡೆದಿದೆ.

ಲಾರಿ ಚಾಲಕ ವೆಂಕಟೇಶ್ (40) ಮೃತ ದುರ್ದೈವಿ. ಖಾಸಗಿ ಬಸ್ ಬೆಂಗಳೂರಿನಿಂದ ಬಳ್ಳಾರಿ ಕಡೆ ತೆರಳುತ್ತಿತ್ತು. ಲಾರಿ ಚಳ್ಳಕೆರೆಯಿಂದ ಬೆಂಗಳೂರಿನತ್ತ ತೆರಳುತ್ತಿತ್ತು. ಹಿರಿಯೂರು ತಾಲೂಕಿನ ಕಪಿಲೆಹಟ್ಟಿ ಬಳಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ತಕ್ಷಣ ಎಚ್ಚೆತ್ತ ಪ್ರಯಾಣಿಕರು ಬೆಂಕಿ ಜೋರಾಗಿ ಹೊತ್ತುವ ಮುನ್ನವೇ ಬಸ್ಸಿನಿಂದ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅದೃಷ್ಟವಶಾತ್ ಭಾರೀ ದುರಂತ ತಪ್ಪಿದಂತಾಗಿದೆ.

ANE 2

ಈ ಘಟನೆಯಿಂದಾಗಿ ಲಾರಿ ಚಾಲಕ ವೆಂಕಟೇಶ್ ಮೃತಪಟ್ಟಿದ್ದಾನೆ. ಖಾಸಗಿ ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಇತ್ತ ಆನೇಕಲ್ ಗಡಿಯಲ್ಲಿ ಸಿನಿಮಾ ಸ್ಟೈಲ್‍ನಲ್ಲಿ ಅತಿವೇಗವಾಗಿ ಅಡ್ಡಾದಿಡ್ಡಿ ನುಗ್ಗಿದ ಟೆಂಪೋವೊಂದು ರಸ್ತೆಯಲ್ಲಿದ್ದ ಬೈಕ್, ಕಾರು, ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಟೆಂಪೋ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಟೆಂಪೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *