ಲಾಭದ ಆಮಿಷವೊಡ್ಡಿ ಉದ್ಯಮಿಗೆ 32 ಲಕ್ಷ ರೂ. ಪಂಗನಾಮ!

Public TV
1 Min Read
BRIBE

ಹುಬ್ಬಳ್ಳಿ: ಲಾಭದ ಆಮಿಷವೊಡ್ಡಿ ಉದ್ಯಮಿ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವರೇ ಮೋಸ ಹೋದವರು. ಇವರಿಗೆ ಅಪರಿಚಿತರೊಬ್ಬರು ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂದು ನಂಬಿಸಿ ಬರೋಬ್ಬರಿ 32 ಲಕ್ಷ ವಂಚನೆ ಮಾಡಿದ್ದಾರೆ.

HBL CYBER CRIME

 

ದೂರುದಾರರಿಗೆ ಅಪರಿಚಿತ ಮಹಿಳೆ ಲಕ್ಷ್ಮೀ ಮೆಹರ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದಾಳೆ. ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭ ಗಳಿಸಬಹುದು ಎಂದು ಹೇಳಿ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 32 ಲಕ್ಷ ರೂ.ಗಳನ್ನು ಆನ್‍ಲೈನ್ ಮೂಲಕ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ. ಅಲ್ಲದೇ ಪದೇ ಪದೇ ಹಣ ಹಾಕು ಎಂದು ಕೇಳುತ್ತಿದ್ದಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಿಕ್ರಾಂತ್ ರೋಣ ಚಿತ್ರಕ್ಕೆ ಭರ್ಜರಿ ಆಫರ್ ನೀಡಿದ ಓಟಿಟಿ!

HBL CYBER CRIME 1

ಈ ಕುರಿತು ಹುಬ್ಬಳ್ಳಿ – ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *