ಪತ್ನಿಗೆ ಗುಂಡಿಕ್ಕಿದ ಉದ್ಯಮಿ ಪ್ರಕರಣ- ಬಂಧನವಾಗುವ ಮೊದ್ಲೇ ಮಕ್ಳನ್ನೂ ಮುಗಿಸಲು ಸ್ಕೆಚ್ ಹಾಕಿದ್ದ!

Public TV
2 Min Read
MURDER 1 1

ಬೆಂಗಳೂರು: ಜಯನಗರದಲ್ಲಿ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಹನಾ(42) ಪತಿ ಗಣೇಶ್ ನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದು, ಈ ಘಟನೆ ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ನಡೆದಿತ್ತು. ಆರೋಪಿ ಮಕ್ಕಳ ಮೇಲೂ ಶೂಟ್ ಮಾಡಿದ್ದು, ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ:
ಉದ್ಯಮಿ ಗಣೇಶ್ ಮೂಲತಃ ಸಕಲೇಶಪುರದವನಾಗಿದ್ದಾನೆ. ಅಲ್ಲಿ ಕಾಫಿ ತೋಟ ಮಾರಿ ಬೆಂಗಳೂರಿಗೆ ಬಂದಿದ್ದು, ನಗರದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದನು. ಕನಕಪುರ ರಸ್ತೆಯಲ್ಲಿ ರೆಸಾರ್ಟ್ ನಿರ್ಮಾಣ ಮಾಡಿದ್ದನು. ಆದ್ರೆ ಕಳೆದ ಎರಡು ವರ್ಷದಿಂದ ರೆಸಾರ್ಟ್ ನಲ್ಲಿ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದನು. ಇತ್ತೀಚೆಗೆ ಸಾಲಗಾರರ ಕಾಟ ಜಾಸ್ತಿಯಾಗಿತ್ತು. ಹೀಗಾಗಿ ಗಣೇಶ್ ಹಾಗೂ ಪತ್ನಿ ಸಹಾನ ನಡುವೆ ಆಗಾಗ ಸಾಲದ ವಿಚಾರಕ್ಕೆ ಜಗಳವಾಗುತ್ತಿತ್ತು. ಗುರುವಾರ ರಾತ್ರಿಯೂ ಇದೇ ವಿಚಾರಕ್ಕೆ ಸಂಬಂಧಿಸಿ ಗಂಡ-ಹೆಂಡತಿ ನಡುವೆ ಜಗಳವಾಗಿತ್ತು. ಜಗಳ ತಾರಕಕ್ಕೇರಿದ್ದು ಗಣೇಶ್ ತನ್ನ ಲೈಸೆನ್ಸ್ ಗನ್ ನಿಂದ ಪತ್ನಿ ಸಹಾನಾಗೆ ಶೂಟ್ ಮಾಡಿದ್ದನು. ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಗಣೇಶ್ ತನ್ನ ಪತ್ನಿಗೆ ಶೂಟ್ ಮಾಡಿ ಮುಗಿಸಿದ್ದನು.

JAYANAGAR

ಅರೆಸ್ಟ್ ಆಗಿದ್ದು ಹೇಗೆ?:
ಮನೆಯಲ್ಲೇ ಪತ್ನಿ ಸಹಾನ ಸಾವನ್ನಪ್ಪಿದ್ದ ಬಳಿಕ ಮೂರು ಮಕ್ಕಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು, ಬಿಡದಿಯ ಫಾರ್ಮ್ ಹೌಸ್ ನಲ್ಲಿ ತಲೆಮರೆಸಿಕೊಂಡಿದ್ದನು. ಫಾರ್ಮ್ ಹೌಸ್ ನಲ್ಲಿ ಮಕ್ಕಳಿಗೆ ಶೂಟ್ ಮಾಡಿದ್ದಾನೆ. ಪರಿಣಾಮ ಹೆಣ್ಣು ಮಗಳ ಹೊಟ್ಟೆಗೆ ಹಾಗೂ ಮಗನ ಕೈ ಹಾಗೂ ತೊಡೆ ಭಾಗಕ್ಕೆ ಗಾಯಗಳಾಗಿವೆ. ಬಳಿಕ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗ್ತಿದ್ದನು.

ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮಕ್ಕಳು, ಗಣೇಶ್ ಬಳಿ ನೀರು ಕೇಳಿದ್ದಾರೆ. ಹೀಗಾಗಿ ನೀರು ಕುಡಿಸಲೆಂದು ಆತ ಕಾರಿನಲ್ಲೇ ಮುಖ್ಯ ರಸ್ತೆಗೆ ಬಂದಿದ್ದಾನೆ. ಇತ್ತ ಗಣೇಶ್ ಗಾಗಿ ಹುಡುಕುತ್ತಿದ್ದ ಪೊಲೀಸರಿಗೆ ಆತನ ಕಾರ್ ನಂಬರ್ ಮಾಹಿತಿ ಸಿಕ್ಕಿದೆ. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿ ಗಣೇಶ್ ನನ್ನು ಬೆನ್ನಟ್ಟಿದ್ದು, ಅಂಚೆ ಪಾಳ್ಯದ ಬಳಿ ಬಂಧಿಸಿದ್ದಾರೆ. ಇನ್ನು ಗಾಯಗೊಂಡ ಮಕ್ಕಳಿಬ್ಬರನ್ನ ಕೋಣನಕುಂಟೆಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಕ್ಕಳಿಬ್ಬರ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ತನ್ನನ್ನು ಬಂಧಿಸೋ ಮುಂಚೆ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೆ. ಅದಕ್ಕಾಗಿಯೇ ಮಕ್ಕಳ ಮೇಲೆ ಗುಂಡು ಹಾರಿಸಿದ್ದೆ. ನನಗೆ ತುಂಬಾ ಸಾಲ ಇತ್ತು. ಅದಕ್ಕಾಗಿ ಆಸ್ತಿ ಮಾರಾಟ ಮಾಡಲು ಪ್ರಯತ್ನ ಮಾಡ್ತಿದ್ದೆ. ಆಸ್ತಿ ಮಾರಾಟ ಮಾಡಲು ಪತ್ನಿ ಅನುಮತಿ ನೀಡುತ್ತಿರಲಿಲ್ಲ. ಆಸ್ತಿ ಮಾರಾಟ ಮಾಡಿದ್ದರೆ ಮಕ್ಕಳು ಬೀದಿಗೆ ಬರುತ್ತಾರೆ ಎಂದು ಹೇಳುತ್ತಿದ್ದಳು. ಮಕ್ಕಳಿಗಾಗಿ ನಾನು ಜೀವ ಕಳೆದುಕೊಳ್ಳುವ ರೀತಿ ಇರಲಿಲ್ಲ. ಅದಕ್ಕಾಗಿ ನಾನು ಈ ಕೃತ್ಯ ಮಾಡಿದೆ ಅಂತ ಗಣೇಶ್ ತಪ್ಪೊಪ್ಪಿಕೊಂಡಿದ್ದಾನೆ.

https://www.youtube.com/watch?v=FtP56UNZo1w

 

Share This Article
Leave a Comment

Leave a Reply

Your email address will not be published. Required fields are marked *