ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ!

Public TV
1 Min Read
KWR SUCIDE 1 1

ಕಾರವಾರ: ನಗರದ ವ್ಯಾಪಾರಿಯೊಬ್ಬರು ಅಂಗಡಿ ತೆರವು ಮಾಡುವ ವಿಚಾರವಾಗಿ ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡದಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು.

ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ ನಾಯ್ಕ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರವಾಗಿ ಸುಟ್ಟು ಗಾಯಗೊಂಡಿರುವ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

KWR SUCIDE6

KWR SUCIDE5

KWR SUCIDE4

KWR SUCIDE3

KWR SUCIDE 2

Share This Article