Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
Last updated: February 4, 2026 9:44 am
Public TV
Share
2 Min Read
Ration Card
SHARE

– ಸತ್ತವರ ಹೆಸರಲ್ಲೂ ರೇಷನ್‌ ಕಾರ್ಡ್‌; ಬೆಚ್ಚಿಬಿದ್ದ ಶಾಸಕರು

ನವದೆಹಲಿ: ಕರ್ನಾಟಕದಂತೆ ರಾಷ್ಟ್ರ ರಾಜಧಾನಿಯಲ್ಲೂ ರೇಷನ್‌ ಕಾರ್ಡ್‌ನಲ್ಲಿ (Ration Card) ಗೋಲ್ಮಾಲ್‌ಗಳು ನಡೆದಿವೆ. ದೆಹಲಿಯಲ್ಲಿ ರೇಷನ್‌ ಕಾರ್ಡ್‌ ಕುರಿತ ಸಮೀಕ್ಷೆಯು ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಬೆಚ್ಚಿಬೀಳಿಸಿದೆ. ಒಂದು ಕಡೆ ಸತ್ತವರ ಹೆಸರಿನಲ್ಲಿ ರೇಷನ್‌ ಕಾರ್ಡ್‌ ಇರೋದು ಕಂಡುಬಂದಿದ್ದರೆ, ಮತ್ತೊಂದು ಕಡೆ ಅರ್ಹತೆಗಿಂತಲೂ ಹೆಚ್ಚು ಆದಾಯ ಗಳಿಸಿರುವ ಉದ್ಯಮಿಗಳೂ ಫಲಾನುಭವಿಗಳ ಪಟ್ಟಿಯಲ್ಲಿರೋದು ಕಂಡುಬಂದಿದೆ. ಈ ರೀತಿಯ 2 ಲಕ್ಷ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ ಎಂದು ಬಿಜೆಪಿ ಶಾಸಕ ಹರೀಶ್ ಖುರಾನಾ (Harish Khurana) ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖುರಾನಾ, 2015 ಮತ್ತು 2024 ರ ನಡುವೆ ವಿತರಣೆ ಮಾಡಲಾದ ಪಡಿತರ ಚೀಟಿಗಳ ಪರಿಶೀಲನೆ ನಡೆಸುವಾಗ ಈ ಅಕ್ರಮಗಳು ಬೆಳಕಿಗೆ ಬಂದಿವೆ. ಬಡವರಿಗೆ ಮೀಸಲಾದ ಸಹಾಯಧನಗಳು ಹಾಗೂ ಆಹಾರ ಅನರ್ಹರ ಪಾಲಾಗುತ್ತಿವೆ ಎಂಬುದು ಗೊತ್ತಾಗಿದೆ ಎಂದು ಎಂದು ಹೇಳಿದ್ದಾರೆ.

Ration 02

ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2014 ಮತ್ತು 2024 ರ ನಡುವೆ ದೆಹಲಿಯಲ್ಲಿ ಪಡಿತರ ಚೀಟಿಗಳಿಗಾಗಿ 9.22 ಲಕ್ಷ ಅರ್ಜಿಗಳನ್ನ ಸಲ್ಲಿಸಲಾಗಿದೆ. ಅವುಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನ ತಿರಸ್ಕರಿಸಲಾಗಿದೆ. ಇನ್ನೂ ಅರ್ಹರ ಅರ್ಜಿಗಳನ್ನ ಖುದ್ದಾಗಿ ಪರಿಶೀಲಿಸಿದಾಗ ಉದ್ಯಮಿಗಳು, ಕಾರು ಮಾಲೀಕರು ಬಿಪಿಎಲ್‌ ಫಲಾನುಭವಿಗಳ ಪಟ್ಟಿಲ್ಲಿದ್ದಾರೆ. ಅವರು ಸರ್ಕಾರದ ಸೌಲಭ್ಯಗಳನ್ನ ಪಡೆಯುತ್ತಿರುವುದು ಕಂಡುಬಂದಿದೆ.

ಸತ್ತವರ ಹೆಸರಲ್ಲೂ ಕಾರ್ಡ್‌
7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಪೈಕಿ 2 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆಯಾಗಿವೆ. ಅದರಲ್ಲಿ ಮೃತ ವ್ಯಕ್ತಿಗಳ ಹೆಸರಿನಲ್ಲಿ 6,038 ಕಾರ್ಡ್‌ಗಳು, 16,000 ನಕಲಿ ಕಾರ್ಡ್‌ಗಳು ಹಾಗೂ ವರ್ಷಕ್ಕೆ 6 ಲಕ್ಷ ರೂ.ಗಿಂತ ಹೆಚ್ಚು ಆದಾಯ ಗಳಿಸುವ 1.44 ಲಕ್ಷಕ್ಕೂ ಅಧಿಕ ಕಾರ್ಡ್‌ಗಳು ಕಂಡುಬಂದಿವೆ.

Ration 03

ಅಲ್ಲದೇ ಭಾರೀ ಪ್ರಮಾಣದಲ್ಲಿ ಭೂಮಿ ಆಸ್ತಿ ಹೊಂದಿರುವ 1.59 ಲಕ್ಷ ಕಾರ್ಡ್‌ಗಳು, ಕಾರು ಮತ್ತು ಇತರ ವಾಹನ ಹೊಂದಿರುವ 77,000 ಕಾರ್ಡ್‌ಗಳು, 25 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವ ಮತ್ತು ಜಿಎಸ್‌ಟಿ ಪಾವತಿಸುವ 2,700 ಕಾರ್ಡ್‌ಗಳನ್ನ ಫಲಾನುಭವಿಗಳಿಗೆ ಲಿಂಕ್‌ ಮಾಡಲಾಗಿದೆ. ಉದ್ಯಮಿಗಳು ಸರ್ಕಾರದ ಸಹಾಯಧನಗಳನ್ನು ಪಡೆಯುತ್ತಿರುವುದರಿಂದ ಬಡವರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಖುರಾನಾ ವಿವರಿಸಿದ್ದಾರೆ.

2.76 ಲಕ್ಷ ಫಲಾನುಭವಿಗಳಿಗೆ ನೋಟಿಸ್‌
ಪರಿಶೀಲನೆ ವೇಳೆ ಸಿಕ್ಕ 2.76 ಲಕ್ಷ ಫಲಾನುಭವಿಗಳಿಗೆ ಶೋಕಾಸ್ ನೋಟಿಸ್‌ ನೀಡಲಾಗಿದೆ. ಎಸ್‌ಎಂಎಸ್ ಮೂಲಕವೂ ಸಂದೇಶ ಕಳುಹಿಸಲಾಗಿದೆ. ಅದರಲ್ಲಿ ಈವರೆಗೆ 227 ಜನರು ಮಾತ್ರ ಪ್ರತಿಕ್ರಿಯಿಸಿದ್ದಾರೆ. ಆದ್ರೆ ಈವರೆಗೆ ಯಾವುದೇ ಕಾರ್ಡುಗಳನ್ನ ರದ್ದುಗೊಳಿಸಲಾಗಿಲ್ಲ ಎಂದು ಖುರಾನಾ ಹೇಳಿದ್ದಾಎರೆ.

ಶ್ವೇತಪತ್ರ ಬಿಡುಗಡೆಗೆ ಪತ್ರ
ಇನ್ನು ಕಳೆದ 10 ವರ್ಷಗಳಲ್ಲಿ ಪಡಿತರ ಚೀಟಿ ವಿತರಣೆಯ ಕುರಿತು ಶ್ವೇತಪತ್ರ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಬಿಜೆಪಿ ಶಾಸಕರು ಹೇಳಿದ್ದಾರೆ.

ಜೊತೆಗೆ ಹಿಂದಿನ ಎಎಪಿ ಸರ್ಕಾರದ ಅವಧಿಯಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ವಲಸಿಗರು ಸೇರಿದಂತೆ ವಿದೇಶಿ ಪ್ರಜೆಗಳಿಗೆ ಪಡಿತರ ಚೀಟಿಗಳನ್ನ ನೀಡಲಾಗಿದೆಯೇ ಅನ್ನೋದನ್ನೂ ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

TAGGED:ಬಿಜೆಪಿ ಶಾಸಕಬಿಪಿಎಲ್ ಕಾರ್ಡ್ರೇಷನ್ ಕಾರ್ಡ್ಹರೀಶ್ ಖುರಾನಾ
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
16 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
1 hour ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?