Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಎಲೆಕ್ಷನ್ ಅಖಾಡದಲ್ಲಿ ಅಬ್ಬರದ ಪ್ರಚಾರ- ಕೊನೆ ಕ್ಷಣದಲ್ಲಿ `ಕೈ’ ಕೊಟ್ರು ಸಿಎಂ ಎಚ್‍ಡಿಕೆ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈಎಲೆಕ್ಷನ್ ಅಖಾಡದಲ್ಲಿ ಅಬ್ಬರದ ಪ್ರಚಾರ- ಕೊನೆ ಕ್ಷಣದಲ್ಲಿ `ಕೈ’ ಕೊಟ್ರು ಸಿಎಂ ಎಚ್‍ಡಿಕೆ..!

Bengaluru City

ಬೈಎಲೆಕ್ಷನ್ ಅಖಾಡದಲ್ಲಿ ಅಬ್ಬರದ ಪ್ರಚಾರ- ಕೊನೆ ಕ್ಷಣದಲ್ಲಿ `ಕೈ’ ಕೊಟ್ರು ಸಿಎಂ ಎಚ್‍ಡಿಕೆ..!

Public TV
Last updated: October 27, 2018 7:04 am
Public TV
Share
2 Min Read
vlcsnap 2018 10 27 07h00m21s170
SHARE

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ದಿಗ್ಗಜರೇ ಫೀಲ್ಡ್ ಗಿಳಿದು ಮತಯಾಚನೆ ಮಾಡ್ತಿದ್ದಾರೆ. ಆದ್ರೆ ಭಾನುವಾರದಿಂದ ಪ್ರಚಾರ ಆರಂಭಿಸಲಿರುವ ಸಿಎಂ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಮಾತ್ರ ಕ್ಯಾಂಪೇನ್ ಮಾಡಲಿದ್ದಾರೆ.

ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿರುವ ಸಿಎಂ, ದೋಸ್ತ್ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿರುವ ಜಮಖಂಡಿ ಮತ್ತು ಬಳ್ಳಾರಿಗೆ ಹೋಗೋದು ಡೌಟ್. ಅಲ್ಲದೆ ಈ ಹಿಂದೆ ಉಗ್ರಪ್ಪ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಚ್‍ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಪ್ರಚಾರದಿಂದ ಹಿಂದೆ ಸರಿಯುತ್ತಾರಾ ಅನ್ನೋ ಚರ್ಚೆಗಳು ಶುರುವಾಗಿವೆ.

vlcsnap 2018 10 27 07h00m08s27
ಈ ಮಧ್ಯೆ ಇಂದು ನಿನ್ನೆಯಿಂದ ಜಮಖಂಡಿಯಲ್ಲಿ ಮತಯಾಚಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕುಂಬಾರಹಳ್ಳ, ತುಂಗಳ, ಲಿಂಗಾನೂರ ಹಾಗೂ ಕೊಣ್ಣೂರು ಗ್ರಾಮಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಜಗದೀಶ್ ಶೆಟ್ಟರ್ ಮತಯಾಚಿಸಲಿದ್ದಾರೆ. ಇನ್ನು ಬಳ್ಳಾರಿ ರಣರಂಗಕ್ಕೆ ಎಂಟ್ರಿ ಕೊಡಲಿರುವ ಬಿಎಸ್‍ವೈ ಸಂಡೂರಿನಲ್ಲಿ ಕ್ಯಾಂಪೇನ್ ಮಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪಗೆ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ. ಶುಕ್ರವಾರ ಪ್ರಚಾರದ ವೇಳೆ ಕಾಫಿ ಕುಡಿದ ಡಿಕೆ ಶಿವಕುಮಾರ್, ಒಗ್ಗರಣೆ ಹಾಕಿದ ಮಂಡಕ್ಕಿ, ಮಿರ್ಚಿ ಬಜ್ಜಿ ಸವಿದ್ರು. ಜೊತೆಗೆ ದಾರಿಯುದ್ದಕ್ಕೂ ಜನರೊಂದಿಗೆ ಆತ್ಮೀಯತೆಯಿಂದ ಮಾತನಾಡಿದ್ರು.

vlcsnap 2018 10 27 07h00m39s93

ಇತ್ತ ಮಂಡ್ಯದಲ್ಲಿ ದೋಸ್ತಿ ಅಭ್ಯರ್ಥಿ ಎಲ್‍ಆರ್.ಶಿವರಾಮೇಗೌಡ ಪರ 2ನೇ ದಿನವೂ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಪಾಂಡವಪುರ ಮತ್ತು ಕೆಆರ್ ಪೇಟೆಯಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅತ್ತ ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ಪರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಮತಯಾಚಿಸಲಿದ್ದಾರೆ.

ರಾಮನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭರ್ಜರಿ ಪ್ರಚಾರ ನಡೆಸಿದ್ದ ಅನಿತಾ ಕುಮಾರಸ್ವಾಮಿ ಇಂದು ಪ್ರಚಾರ ಮಾಡದೇ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ. ಇನ್ನು ನಾಳೆ ಎಚ್‍ಡಿ ದೇವೇಗೌಡರೇ ರಾಮನಗರದ ರಣರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್‍ಗೆ ಸಿ.ಪಿ ಯೋಗೇಶ್ವರ್ ಸಾಥ್ ನೀಡಲಿದ್ದಾರೆ.

vlcsnap 2018 10 27 07h00m46s151

ನಿನ್ನೆ ಬಾಗಲಕೋಟೆಯಲ್ಲಿ ಮಾತನಾಡಿದ ಸಿ.ಎಂ ಇಬ್ರಾಹಿಂ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕವಾಗಿ ಏಕವಚನದಲ್ಲೇ ಮಾತನಾಡಿದ್ರು. ಅಲ್ಲದೆ ಬಿಎಸ್‍ವೈಗೆ ಶೋಭಕ್ಕಂದೇ ಚಿಂತೆ ಅಂತಾ ಕಿಚಾಯಿಸಿದ್ದಾರೆ.

ಒಟ್ಟಿನಲ್ಲಿ ಉಪರಣಕಣ ದಿನೇ ದಿನೇ ಕಾವೇರುತ್ತಿದ್ದು, 3 ಪಕ್ಷಗಳ ದಿಗ್ಗಜರು ಮತಯಾಚನೆಗೆ ಬೀದಿಗೆ ಇಳಿದಿದ್ದಾರೆ. ಆದ್ರೆ ಯಾವ ಪಕ್ಷದ ಅಭ್ಯರ್ಥಿಗೆ ಜನರು ಮತ ನೀಡುವುದರ ಮೂಲಕ ಆಶೀರ್ವಾದಿಸಿ ಭವಿಷ್ಯ ಬದಲಾಯಿಸ್ತಾರೆ ಅಂತ ಕಾದು ನೋಡಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 10 27 07h00m31s255

TAGGED:by electioncongressPublic TVಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
17 minutes ago
Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
47 minutes ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
1 hour ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
1 hour ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
1 hour ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?