Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹರಿಗೆ ರಿಲೀಫ್ ಅಲ್ಲ ಶಾಕ್ – ಬೀಸೋ ದೊಣ್ಣೆಯಿಂದ ಪಾರಾದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನರ್ಹರಿಗೆ ರಿಲೀಫ್ ಅಲ್ಲ ಶಾಕ್ – ಬೀಸೋ ದೊಣ್ಣೆಯಿಂದ ಪಾರಾದ ಬಿಜೆಪಿ

Bengaluru City

ಅನರ್ಹರಿಗೆ ರಿಲೀಫ್ ಅಲ್ಲ ಶಾಕ್ – ಬೀಸೋ ದೊಣ್ಣೆಯಿಂದ ಪಾರಾದ ಬಿಜೆಪಿ

Public TV
Last updated: September 26, 2019 7:02 pm
Public TV
Share
3 Min Read
BSY 4
SHARE

ಬೆಂಗಳೂರು: ಉಪ ಚುನಾವಣೆಗೆ ತಡೆ ನೀಡುವ ಮೂಲಕ ಸುಪ್ರೀಂ ಅನರ್ಹರಿಗೆ ಈಗ ರಿಲೀಫ್ ಸಿಕ್ಕಿದೆ. ಆದರೆ ಮುಂದೆ ಉಪಚುನಾವಣೆ ರಾಜ್ಯದಲ್ಲಿ ನಡೆಯುತ್ತಾ ಎನ್ನುವ ಅನುಮಾನ ಈಗ ಎದ್ದಿದೆ.

ಸುಪ್ರೀಂ ಕೋರ್ಟಿನಲ್ಲಿ ತಮ್ಮ ಪರವಾಗಿ ತೀರ್ಪು ಬಂದರೆ ಅನರ್ಹರು ಚುನಾವಣೆ ನಿಂತು ಜಯಗಳಿಸಿ ಮಂತ್ರಿಯಾಗುವ ಕನಸಿನಲ್ಲಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಉಪ ಚುನಾವಣೆ ನಡೆಸದೇ ವಿಧಾನಸಭೆಯಲ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಲು ಚಿಂತಿಸಿದೆ ಎನ್ನಲಾಗುತ್ತಿದೆ.

rebel congress jds resigns 4 1

ಹೌದು, ರಾಜ್ಯ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಬಿಜೆಪಿ ಬೀಸೋ ದೊಣ್ಣೆಯಿಂದ ಪಾರಾಗಿದೆ. ಆದರೆ ಇದೇ ವೇಳೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದ ಅವಧಿ ಕೇವಲ 9 ತಿಂಗಳು ಮಾತ್ರವೇ ಎನ್ನುವ ಪ್ರಶ್ನೆ ಎದ್ದಿದೆ.

ಸದ್ಯ ಚುನಾವಣೆಗೆ ನ್ಯಾಯಾಲಯ ಬ್ರೇಕ್ ಹಾಕಿರುವುದರಿಂದ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯವನ್ನು ಶಮನ ಮಾಡಲು ನಾಯಕರಿಗೆ ಅವಕಾಶ ಸಿಕ್ಕಿದೆ. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಬಂಡಾಯ ನಡುವೆ ಸರ್ಕಾರ ನಡೆಸುವುದು ಅಗತ್ಯತೆ ಹಾಗೂ ಪಕ್ಷದ ವರ್ಚಸ್ಸಿಗೆ ಉಂಟಾಗಬಹುದಾದ ಹಾನಿಯ ಬಗ್ಗೆಯೂ ಚರ್ಚೆ ನಡೆಸಿದೆ. ಈ ಹಿನ್ನೆಲೆಯಲ್ಲಿಯೇ ಉಪಚುನಾವಣೆಗೆ ಅವಕಾಶ ನೀಡದೆ ನೇರ ಚುನಾವಣೆ ಎದುರಿಸುವ ಕುರಿತು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

rebel congress jds resigns A

ಹೈಕಮಾಂಡ್ ಚುನಾವಣೆಯೇ ಸರಿ ಎನ್ನುವ ನಿರ್ಧಾರ ತಗೆದು ಜನವರಿ ಬಳಿಕ ಚುನಾವಣೆ ಹೋಗುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪರಿಣಾಮ ಫೆಬ್ರವರಿಯಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ ಇದೆ. ಏಕೆಂದರೆ ಶಾಸಕರ ತಮ್ಮ ಅನರ್ಹತೆಯನ್ನು ಪ್ರಶ್ನೆ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪ್ರಕರಣ ಸುದೀರ್ಘ ವಿಚಾರಣೆಗೆ ನ್ಯಾಯಾಲಯ ಮುಂದಾಗಿ ಸಾಂವಿಧಾನಿಕ ಪೀಠ ರಚನೆ ಮಾಡಿದರೆ ಪ್ರಕರಣ ಇತ್ಯರ್ಥವಾಗಬೇಕಾದರೆ ಹಲವು ದಿನಗಳು ಬೇಕಾಗಬಹುದು. ತೆರವಾದ ವಿಧಾನಸಭಾ ಕ್ಷೇತ್ರಗಳನ್ನು 6 ತಿಂಗಳ ಕಾಲ ಖಾಲಿ ಬಿಡುವಂತಿಲ್ಲ. ಹೀಗಾಗಿ ದೀರ್ಘ ಸಮಯಗಳ ಕಾಲ ವಿಚಾರಣೆ ನಡೆಸಲು ಬರುವುದಿಲ್ಲ.

ಕರ್ನಾಟಕ ಉಪಚುನಾವಣೆ ಮಾತ್ರ ಮುಂದೂಡಿರುವುದರಿಂದ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರ ಚುನಾವಣೆಯತ್ತ ಹೆಚ್ಚು ಗಮನಹರಿಸಿದ್ದು, ಇಲ್ಲೂ ಬಹುಮತ ಸಿಕ್ಕರೆ ಕರ್ನಾಟಕದಲ್ಲೂ ಮಧ್ಯಂತರ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಅನರ್ಹರ ಪ್ರಕರಣ ಇತ್ಯರ್ಥಕ್ಕೆ ಕೆಲ ತಿಂಗಳ ಅವಧಿ ಅಗತ್ಯ ಇರುವ ಕಾರಣ ಅಲ್ಲಿಯವರೆಗೂ ರಾಜ್ಯದಲ್ಲಿ ಬಿಎಸ್‍ವೈ ಅವರ ಸರ್ಕಾರ ಆಡಳಿತ ನಡೆಯನ್ನು ತುಲನೆ ಮಾಡಿ ಚುನಾವಣೆಗೆ ಹೋಗುವ ಅಂತಿಮ ನಿರ್ಧಾರ ಮಾಡುವ ಚಿಂತನೆ ಹೈಕಮಾಂಡ್ ಮುಂದಿದೆ.

Amit Shah Modi

ಯಾಕೆ ಚುನಾವಣೆ?
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಗೆಲುವು ಸಾಧಿಸಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಕರ್ನಾಟಕವನ್ನ ಟಾರ್ಗೆಟ್ ಮಾಡಲಿದ್ದಾರೆ. ಕೇಂದ್ರದಂತೆ ರಾಜ್ಯದಲ್ಲಿ ಕೂಡ ಸ್ಪಷ್ಟ ಬಹುಮತದ ಬಿಜೆಪಿ ಸರ್ಕಾರವನ್ನು ರಚಿಸಲು ಬಿಜೆಪಿ ಹೈಕಮಾಂಡ್ ಯೋಚಿಸಿದೆ ಎನ್ನಲಾಗಿದೆ.

ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಬೇಕಾದರೆ ಉಪಚುನಾವಣೆಯಲ್ಲಿ 6 ಕ್ಷೇತ್ರಗಳಲ್ಲಿ ಜಯಗಳಿಸಬೇಕು. ಕರ್ನಾಟಕ ವಿಧಾನಸಭೆಯಲ್ಲಿ ಒಟ್ಟು ಈಗ ಬಿಜೆಪಿಯ ಸಂಖ್ಯಾ ಬಲ 105(ಪಕ್ಷೇತರ ಸೇರಿದರೆ 106) ಇದೆ. ಸರಳ ಬಹುಮತಕ್ಕೆ 112 ಸ್ಥಾನಗಳ ಅವಶ್ಯಕತೆಯಿದೆ. ಹೀಗಾಗಿ 15 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕನಿಷ್ಟ 6 ಕ್ಷೇತ್ರಗಳಲ್ಲಿ ಜಯಗಳಿಸಲೇಬೇಕಾದ ಅನಿವಾರ್ಯತೆಗೆ ಬಿಜೆಪಿ ಸಿಲುಕಿದೆ.

yeddyurappa bsy serious thinking

ಸದ್ಯ ವಿಧಾನಸಭೆಯಲ್ಲಿ ಬಿಎಸ್‍ಪಿ 1, ಬಿಜೆಪಿ 105, ಕಾಂಗ್ರೆಸ್ 66, ಜೆಡಿಎಸ್ 34 ಶಾಸಕರ ಬಲಾಬಲವನ್ನು ಹೊಂದಿದೆ. ಒಂದು ವೇಳೆ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದೇ ಇದ್ದರೆ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ. ಒಂದೊಮ್ಮೆ 6 ಸ್ಥಾನ ಗೆದ್ದರು ಬಿಜೆಪಿ ಅಲ್ಪ ಬಹುಮತದ ಸರ್ಕಾರ ಮುಂದುವರಿಯುತ್ತದೆ. ಈ ಅವಧಿಯಲ್ಲಿ ಬಿಜೆಪಿಯ ಯಾವುದೇ ಶಾಸಕರು ಕೈಕೊಟ್ಟರು ಮತ್ತೆ ಸರ್ಕಾರ ಪತನವಾಗುತ್ತದೆ. ಪರಿಣಾಮ ಇಂತಹ ಸರ್ಕಾರ ಹೊಂದಿರುವುದಕ್ಕಿಂತ ಚುನಾವಣೆ ಎದುರಿಸಿ ಬಹುಮತದ ಸ್ಪಷ್ಟ ಸರ್ಕಾರ ರಚನೆ ಮಾಡುವುದು ಉತ್ತಮ ಎಂಬ ಚರ್ಚೆ ಹೈಕಮಾಂಡ್ ಮಾಡುತ್ತಿದೆ ಎನ್ನಲಾಗುತ್ತಿದೆ.

TAGGED:bengalurubjpby electionHigh CommandInterim ElectionPublic TVಅನರ್ಹ ಶಾಸಕರುಉಪಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಧ್ಯಂತರ ಚುನಾವಣೆಹೈಕಮಾಂಡ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
22 seconds ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
31 minutes ago
Commercial Tax DC Bharath hubballi
Dharwad

6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Public TV
By Public TV
44 minutes ago
Shivamogga Bear
Districts

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

Public TV
By Public TV
49 minutes ago
Tragedy in the backwaters of Hidkal reservoir Two boys died
Belgaum

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Public TV
By Public TV
1 hour ago
ELEPHANT
Districts

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ – ಮೊಬೈಲ್‌ನಲ್ಲಿ ವೀಡಿಯೋ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?